Prajwal Revanna Case: ಮೇ 31ರ ಮೊದಲು ಪ್ರಜ್ವಲ್ ರೇವಣ್ಣ ದೇಶಕ್ಕೆ ಬರಲೇಬೇಕು! ಏಕೆ ಗೊತ್ತಾ?
ಬೆಂಗಳೂರು, ಮೇ. 29: ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ವಿಶೇಷ ತನಿಖಾ ತಂಡ ಕಣ್ಣಿಟ್ಟಿದೆ. ಇತ್ತೀಚೆಗೆ ವಿಡಿಯೋ ಬಿಡುಗಡೆ ಮಾಡಿ ತಾವು ಮೇ 31ಕ್ಕೆ ಎಸ್ಐಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಆದರೆ, ಮೇ 31ರ ಮೊದಲು ಪ್ರಜ್ವಲ್ ರೇವಣ್ಣ ದೇಶಕ್ಕೆ ಬರಲೇಬೇಕು.
ದೇಶದಿಂದ ನಾಪತ್ತೆಯಾಗಿ ಒಂದು ತಿಂಗಳ ಬಳಿಕ ಹೊಸ ವಿಡಿಯೋ ಮೂಲಕ ಪ್ರತ್ಯಕ್ಷರಾದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ಐಟಿ ಕಾಯುತ್ತಿದೆ. ಇದರ ಜೊತೆಗೆ ಅವರು ಜರ್ಮನಿಯಲ್ಲಿ ಇದ್ದಾರಾ ಅಥವಾ ದೇಶದಲ್ಲೇ ಇದ್ದುಕೊಂಡು ಎಲ್ಲರಿಗೂ ಆಟವಾಡಿಸುತ್ತಿದ್ದಾರಾ ಎಂಬ ಸಂಶಯ ಕೂಡ ವ್ಯಕ್ತವಾಗುತ್ತಿದೆ.

ಮೇ 31ಕ್ಕೆ ಬರುವುದಾಗಿ ಪ್ರಜ್ವಲ್ ರೇವಣ್ಣ ಹೇಳಿದ್ದು ಏಕೆ?
ಈ ತಿಂಗಳ ಮೇ 31ಕ್ಕೆ ಪ್ರಜ್ವಲ್ ರೇವಣ್ಣ ದೇಶಕ್ಕೆ ಬರಲೇ ಬೇಕಿದೆ. ವಿಡಿಯೋ ಬಿಡುಗಡೆ ಮಾಡಿ ಬರುವುದಾಗಿ ಮಾಹಿತಿ ನೀಡಿ ತಾವು ದೊಡ್ಡ ಕೆಲಸ ಮಾಡಿದ್ದೇನೆ ಎಂದು ಜನರಿಗೆ ಮೂರ್ಖರನ್ನಾಗಿಸುವುದು ಅವರ ಐಡಿಯಾ ಇರಬಹುದು. ಆದರೆ, ಇಲ್ಲಿ ಗಮನಿಸಬೇಕಾದದ್ದು ಏನೆಂದರೆ, ಮೇ 31ರ ಒಳಗೆ ಹಾಸನದ ಸಂಸದರು ದೇಶಕ್ಕೆ ಬರಲೇಬೇಕು. ಅದಕ್ಕೆ ಮುಖ್ಯ ಕಾರಣವಿದೆ.
ಏನೆಂದರೆ, ಮೇ 31ರಂದು ಪ್ರಜ್ವಲ್ ರೇವಣ್ಣ ಅವರ ಕಳೆದ ಬಾರಿಯ ಸಂಸದ ಸ್ಥಾನ ಅವಲಂಬಿಸಿ ನೀಡಲಾದ ರಾಜತಾಂತ್ರಿಕ ಪಾಸ್ಪೋರ್ಟ್ನ ಅವಧಿ ಕೊನೆಯಾಗಲಿದೆ. ಹಾಗಾಗಿ ಆ ಪಾಸ್ಪೋರ್ಟ್ ಇಟ್ಟುಕೊಂಡು ಅವರು ಓಡಾಡಲು ಸಾಧ್ಯವಿಲ್ಲ. ಹೀಗಾಗಿ ಅವರು ವಾಪಸ್ ಬರಲೇಬೇಕು.
ಈ ಸಲ ಹಾಸನದಿಂದ ಮತ್ತೆ ಜೆಡಿಎಸ್ ಬಿಜೆಪಿ ಮೈತ್ರಿಯಿಂದ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಜ್ವಲ್ ರೇವಣ್ಣ, ಮತ್ತೆ ಚುನಾಯಿತರಾದರೆ ಅವರು ಹೊಸದಾಗಿ ರಾಜತಾಂತ್ರಿಕ ಪಾಸ್ಪೋರ್ಟ್ ಮಾಡಿಸಿಕೊಳ್ಳಬೇಕಿದೆ. ಹೀಗಾಗಿ ಹಳೆಯ ಪಾಸ್ಪೋರ್ಟ್ನಲ್ಲಿ ಓಡಾಡಲು ಸಾಧ್ಯವಿಲ್ಲ. ಹೀಗಾಗಿಯೇ ಪ್ರಜ್ವಲ್ ಕೂಡ ಮೇ 31ರಂದು ಬರುತ್ತೇನೆ ಎಂದಿದ್ದಾರೆ ಎನ್ನಲಾಗುತ್ತಿದೆ.

ಪ್ರಜ್ವಲ್ ಬರುವವರೆಗೂ ಕಾಯಲ್ಲ ಎಸ್ಐಟಿ!
ಇನ್ನು, ಇತ್ತೀಚಿನ ಮಾಹಿತಿ ಪ್ರಕಾರ ಪ್ರಜ್ವಲ್ ರೇವಣ್ಣ ತಾವಾಗಿಯೇ ದೇಶಕ್ಕೆ ಬರುವವರೆಗೂ ಕಾಯಲು ಎಸ್ಐಟಿ ತಯಾರಿಲ್ಲ ಎನ್ನಲಾಗಿದೆ. ಪ್ರಜ್ವಲ್ ಹೊರಬಿಟ್ಟಿದ್ದ ವಿಡಿಯೋವನ್ನು ವಿಶೇಷ ತನಿಖಾ ತಂಡ ವಿಶೇಷವಾಗಿ ಪರಿಶೀಲನೆ ನಡೆಸುತ್ತಿದೆ. ಎಲ್ಲಿಂದ ವಿಡಿಯೋ ಮಾಡಲಾಗಿದೆ? ವಿಡಿಯೋದ ಮೂಲ ಯಾವುದು, ಯಾವ ಐಪಿ ಅಡ್ರೆಸ್ನಿಂದ ಆಪ್ಲೋಡ್ ಆಗಿದೆ..? ಎಂಬ ಮಾಹಿತಿಗಳ ಜೊತೆಗೆ ಮದರ್ ಡಿವೈಸ್ ಮಾಹಿತಿ ಪತ್ತೆಗೆ ಪ್ರಯತ್ನಿಸುತ್ತಿದೆ. ಹೀಗಾಗಿ ಹಾಸನ ಸಂಸದ ಬೆಂಗಳೂರಿಗೆ ಬರುವ ಮುನ್ನವೆ ಬಂಧಿಸಲು ಯತ್ನಿಸುತ್ತಿದೆ.
ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ
ಇತ್ತ, ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಏರ್ಲೈನ್ಸ್ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿದ್ದು, ಮೇ 31ರ ಮಧ್ಯರಾತ್ರಿ ಜರ್ಮನಿಯ ಮ್ಯೂನಿಚ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಜೂನ್ 1ಕ್ಕೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications