ಹಾಸನ ಪೆನ್ ಡ್ರೈವ್ ಪ್ರಕರಣ CID ತನಿಖೆಗೆ ಒಪ್ಪಿಸಿ ಮಹಿಳೆಯರಿಗೆ ರಕ್ಷಣೆ ಕೊಡಿ
ಬೆಂಗಳೂರು, ಏಪ್ರಿಲ್ 27: ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳು ಇರುವ ಪೆನ್ ಡ್ರೈವ್, ಸಿಡಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ವಹಿಸಬೇಕು. ವಿಡಿಯೊ ಕುರಿತು ವಿಧಿವಿಜ್ಞಾನ ಪರೀಕ್ಷೆ ನಡೆಸಿ ವಂಚಕನನ್ನು ಬಂಧಿಸಬೇಕು ಎಂದು ಆಮ್ಮ ಆದ್ಮಿ ಪಕ್ಷದ ಮಹಿಳಾ ಘಟಕ ಆಗ್ರಹಿಸಿದೆ.
ಹಾಸನದ ಪ್ರಭಾವಿ ರಾಜಕಾರಣಿ ಕುಟುಂಬದ ಸಂಸದರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿರುವುಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಾಲಾ ಸ್ವಾಮಿ ಮಾತನಾಡಿದರು.

ಕಾನೂನು ಬದ್ಧ ಕ್ರಮ ಕೈಗೊಳ್ಳಬೇಕು
ಹಾಸನದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಆತ ಎಷ್ಟೇ ಪ್ರಭಾವಿಯಾದರೂ ಕಾನೂನು ಬದ್ಧ ಕ್ರಮಕೈಗೊಳ್ಳಬೇಕು. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಬೇಕು. ವಿಡಿಯೋಗಳನ್ನು ಹಂಚಿಕೆ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ಕೃತ್ಯ ಎಸಗಿರುವ ವ್ಯಕ್ತಿ ಯಾವನೇ ಆಗಿರಲಿ, ನಾವು ಮೊದಲು ಸಂತ್ರಸ್ತೆಯರ ರಕ್ಷಣೆಗೆ ನಿಲ್ಲಬೇಕು ಎಂದು ಘಟನೆ ಕುರಿತು ಅವರು ತೀವ್ರ ಕಳವಳ ವ್ಯಕ್ತಪಡಿಸಿದರು.

ಮಹಿಳೆಯರು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ
ಸಾವಿರಾರು ಮಹಿಳೆಯರು ವಂಚನೆಗೆ ಒಳಗಾಗಿರುವುದಲ್ಲದೆ, ವಿಡಿಯೊ ಸಾಮಾಜಿಕ ತಾಣಗಳಲ್ಲಿ ಓಡಾಡುತ್ತಿರುವುದರಿಂದ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮೊದಲಾಗಬೇಕು. ಓರ್ವ ಅಭ್ಯರ್ಥಿ ಮೇಲಿನ ರಾಜಕೀಯ ದ್ವೇಷಕ್ಕೆ ಸಾವಿರಾರು ಮಹಿಳೆಯರ ಬದುಕು ನರಕವಾಗುವುದನ್ನು ಸಹಿಸಲಾಗುವುದಿಲ್ಲ ಎಂದರು.
ಅಶ್ಲೀಲ ವಿಡಿಯೊಗಳನ್ನು ಹಂಚಿದರೆ ಅದರಲ್ಲಿರುವ ಮಹಿಳೆಯರ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಕೊಂಚವೂ ಯೋಚಿಸದಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.
ವಿಡಿಯೊಗಳು ಲಭ್ಯವಾದರೆ ದುರಂತ
ಎರಡು ಸಾವಿರಕ್ಕೂ ಹೆಚ್ಚು ಖಾಸಗಿ ವಿಡಿಯೋಗಳು ಹರಿದಾಡುತ್ತಿವೆ ಎನ್ನಲಾಗುತ್ತಿದೆ. ಅಷ್ಟೂ ಮಂದಿ ಸಂತ್ರಸ್ತೆಯರ ಪರಿಸ್ಥಿತಿ ಏನಾಗಬೇಕು? ಅವರ ಕುಟುಂಬ ಸದಸ್ಯರಿಗೆ ಖಾಸಗಿ ವಿಡಿಯೊಗಳು ಲಭ್ಯವಾದರೆ ಏನೇನು ದುರಂತಗಳಾಗುತ್ತವೆ? ಮುಂದಾಗಬಹುದಾದ ದುಷ್ಪರಿಣಾಮಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದರು.
ಇಂತಹ ವಿಡಿಯೊಗಳ ಹಂಚಿಕೆಗೆ ತಡೆಯೊಡ್ಡುವ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ? ಹೆಣ್ಣುಕ್ಕಳ ಬದುಕು ಬೀದಿಗೆ ಬಿದ್ದರೂ ಬೀಳಲಿ, ನಮಗೆ ರಾಜಕೀಯ ಲಾಭವಾದರೆ ಸಾಕು ಎಂಬ ಧೋರಣೆಯನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದೆಯೇ? ಎಂದು ಕೇಳಿದರು.
ಅಧಿಕಾರದ ಪ್ರಭಾವದಿಂದ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡಿರುವುದು ಎಷ್ಟು ದೊಡ್ಡ ಅಪರಾಧವೋ, ವಿಡಿಯೊಗಳನ್ನು ಹಂಚಿಕೆ ಮಾಡುತ್ತಿರುವುದೂ ಅಷ್ಟೇ ದೊಡ್ಡ ಅಪರಾಧವಾಗಿದೆ. ಇವರೆಲ್ಲರೂ ಮಹಿಳೆಯರ ಪಾಲಿನ ರಾಕ್ಷಸರಾಗಿದ್ದಾರೆ. ಮಹಿಳೆಯರು ಎಚ್ಚೆತ್ತುಕೊಳ್ಳಬೇಕು, ಯಾವುದೇ ಪ್ರಭಾವಕ್ಕೆ ಒಳಗಾಗಿ ಇಂತಹ ಸಂಕಷ್ಟದ ಪರಿಸ್ಥಿತಿಗೆ ಸಿಕ್ಕಿಹಾಕಿಕೊಳ್ಳಬಾರದು ಎಂದು ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications