ಬಂದ್ : ಆಟೋ ಡ್ರೈವರ್ ಗೋಪಾಲ್ ನಿಷ್ಠಾವಂತಿಕೆಗೆ ಸೆಲ್ಯೂಟ್
ಬಸ್ ಸಂಚಾರ ಸ್ಥಗಿತ, ಶಾಲಾ-ಕಾಲೇಜುಗಳಿಗೆ ರಜೆ, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತ ಬಂದ್, ಈ ಸಾಲುಗಳನ್ನು ಟಿ.ವಿ ಮಾಧ್ಯಮಗಳು ಮುಂಜಾನೆಯಿಂದ ಸುದ್ದಿ ಮಾಡುತ್ತ ಇದ್ದವು. ಇದೆಲ್ಲಾ ಬುಧವಾರ ಭಾರತ ಬಂದ್ ಎಫೆಕ್ಟ್ ಅಂತ ನಿನ್ನೆನೇ ಗೊತ್ತಾಗಿತ್ತು. ಬಹುತೇಕ ಆಟೋದವರಿಗೆ ಈ ದಿನ ಸುಗ್ಗಿ ಹಬ್ಬ. ಆಫೀಸ್ ಗಂತೂ ಹೋಗ್ಲೆ ಬೇಕಿತ್ತು.
ಮೀಟರ್ ಮೇಲೆ ಅಷ್ಟು-ಇಷ್ಟು ಅಂತ ದುಡ್ಡು ಏರಿಸಿ ಪ್ರಯಾಣಿಕರಿಂದ ಮೀಟರಿಗಿಂತ ಡಬಲ್ ಹಣ ವಸೂಲಿ ಮಾಡೋದಕ್ಕೆ ರೆಡಿಯಾಗಿರುತ್ತಾರೆ. ಆಫೀಸ್ ಗಂತೂ ಹೋಗಲೇ ಬೇಕಿತ್ತು. [ಭಾರತ್ ಬಂದ್: ಟ್ವಿಟ್ಟರ್ ನಲ್ಲಿ ಆಕ್ರೋಶ, ವಿಷಾದ]
ವಿಜಯನಗರದಿಂದ ಜಯನಗರಕ್ಕೆ ಬಸ್ಸಿಗೆ 20 ರೂಪಾಯಿ; ಆಟೋಗಾದ್ರೆ 130 ರಿಂದ 150 ರೂಪಾಯಿ. ಭಾರತ್ ಬಂದ್ ಬೇರೆ. ಬಸ್ ಸಂಚಾರ ಇರಲಿಲ್ಲವಾದ್ದರಿಂದ ಅನಿವಾರ್ಯವಾಗಿ, ಬೇಜಾನ್ ರೂಪಾಯಿ ವಸೂಲಿ ಮಾಡ್ಕೋತಾರೆ ಅಂತ ಅಂದ್ಕೊಂಡು ಆಟೋದವರಿಗೆ ಜಯನಗರ 3rd ಬ್ಲಾಕ್ ಗೆ ಕೇಳಿದ್ರೆ ಕೆಲವರು ಅಷ್ಟು ದೂರ ಬರೋದಿಲ್ಲ ಅಂತ ಅಂದ್ರು.[ಮೋದಿ ಸರ್ಕಾರದ ವಿರುದ್ಧ ಭಾರತ್ ಬಂದ್ ಏಕೆ?]
ಕೆಲವ್ರು 200, 230 ಅಂತ ಬಾಯಿ ಬಂದಂತೆ ರೇಟ್ ಹೇಳ್ತಾಯಿದ್ರು. ಅವರ ದಿಮಾಕಿನ ಮಾತಿನ ವರಸೆ ನೋಡಿ ಅವರ ಸಹವಾಸವೇ ಬೇಡ ಅಂತ ಮುಂದೆ ಹೆಜ್ಜೆ ಹಾಕಿದೆ.
ಕೊನೆಗೆ ರಸ್ತೆಯಲ್ಲಿ ಖಾಲಿ ಆಟೋ ಒಂದು ಹೋಗುತ್ತಿರುವುದನ್ನು ನೋಡಿ ಕೈ ಮಾಡಿ ನಿಲ್ಲಿಸಿ ಜಯನಗರ 3rd ಬ್ಲಾಕ್ ಗೆ ಅಂತ ಕೇಳಿ ಅವನ ಉತ್ತರಕ್ಕಾಗಿ ಕಾದೆ. ಆ ಪುಣ್ಯಾತ್ಮ, ಮೀಟರ್ ಹಾಕಿ ಬನ್ನಿ ಸರ್ ಕೂತ್ಕೋಳಿ ಅಂದ. ನಾನು ಫುಲ್ ಕನಫ್ಯೂಸ್ ಆದೆ. ನಂತರ...
ಆ ಆಟೋ ಡ್ರೈವರ್ ಗೋಪಾಲ್ ಕೃಷ್ಣ ಅವರ ನಿಷ್ಠಾವಂತಿಕೆಗೆ ಸೆಲ್ಯೂಟ್ ಹೋಡಿಬೇಕು. ಈ ಆಟೋರಿಕ್ಷಾದವರೆಂಬ ಇದ್ದ ಪೂರ್ವಗ್ರಹ ಭಾವನೆ ದೂರಾಯಿತು.

ಅವನ ಆಟೋ ಮೇಲೆ ಕಣ್ಣಾಡಿಸಿದೆ
ಅವನ ಆಟೋ ಮೇಲೆ ಕಣ್ಣಾಡಿಸಿದೆ. ನಿಜಕ್ಕೂ ತುಂಬಾ ಖುಷಿಯಾಯಿತು. ಅವರ ಸಿಟೀನ ಹಿಂದೆ "ನಾವು ಮಹಿಳೆಯರನ್ನು ಮತ್ತು ಮಕ್ಕಳನ್ನು ಗೌರವಿಸುತ್ತೇವೆ ಹಾಗೂ ಅವರ ಮೇಲೆ ಆಗುವ ಹಿಂಸೆ, ದೌರ್ಜನ್ಯವನ್ನು ಖಂಡಿಸುತ್ತೇವೆ." ವಾಕ್ಯ ನೋಡಿ ಈ ಮನುಷ್ಯ ಏನೋ ಸಮಥಿಂಗ್ ಸ್ಪೆಷಲ್ ಅಂತ ಅನಿಸಿತ್ತು. ರಸ್ತೆಯೆಲ್ಲಾ ಖಾಲಿ ಇದ್ದರೂ ಸಂಧಿ-ಸಂಧಿಯಲ್ಲಿ ಹೋಗಿ ಶಾರ್ಟ್ ಕಟ್ ರೂಟ್ ನಲ್ಲಿ ಜಯನಗರ 3 ಬ್ಲಾಕ್ ನಲ್ಲಿರೋ ಆಫೀಸಿಗೆ 20 ನಿಮಿಷದಲ್ಲಿ ಮುಟ್ಟಿಸಿದ.

ಮೀಟರ್ 122 ಅಂತ ತೋರಿಸುತ್ತಿತ್ತು
ಮೀಟರ್ 122 ರು ಅಂತ ತೋರಿಸುತ್ತಿತ್ತು. ಆದ್ರೂ ಮೀಟರ್ ನೋಡದಂತೆ ನಟಿಸಿ ಎಷ್ಟು ಸಾಹೇಬ್ರೆ ಅಂತ ಕೇಳಿದೆ. 122 ಕೊಡಿ ಅಂತ ಹೇಳಿದಾಗ 130 ಕೊಟ್ಟೆ. ಸರ್ 2 ರೂಪಾಯಿ ಚಿಲ್ಲರೆ ಕೊಡಿ ನನ್ನಂತ್ರ ಚೇಂಜ್ ಇಲ್ಲ ಅಂತ ಹೇಳಿದಾಕ್ಷಣ ಅವನ ನಿಷ್ಠಾವಂತಿಕೆಗೆ ಮಾತೇ ಹೊರಡದಂತಾಯಿತು. ನಿಜಕ್ಕೂ ಅವರ ನಿಷ್ಠಾವಂತಿಕೆಗೆ ಸೆಲ್ಯೂಟ್ ಹೋಡಿಬೇಕು.

ಭಾರತ್ ಬಂದ್ ಆಟೋದವರಿಗೆ ಹಬ್ಬವಲ್ವಾ
"ಸಾಹೇಬ್ರೆ ಇವತ್ತು ಭಾರತ್ ಬಂದ್ ಆಟೋದವರಿಗೆ ಹಣ ಮಾಡೋ ದಿನ ಮೀಟರ್ ಮೇಲೆ ಹೆಚ್ಚಿಗೆ ದುಡ್ಡು ವಸುಲಿ ಮಾಡ್ತಾರೆ. ಅಷ್ಟೆ ಅಲ್ಲ ನಾರ್ಮಲಿ ವಿಜಯನಗರದಿಂದ ಜಯನಗರಿಗೆ ಮೀಟರ್ ಪ್ರಕಾರ 140 ರಿಂದ 150 ರೂಪಾಯಿ ಆಗುತ್ತೆ. ಆದ್ರೆ ನೀವು ಶಾರ್ಟಕಟ್ ರೂಟ್ ನಲ್ಲಿ ಕರೆದುಕೊಂಡು ಬಂದು 122 ರೂಪಾಯಿ ಮಾಡಿದ್ದೀರಾ ಅಂತ ಕೇಳಿದೆ".

ಆ ದೇವರು ಕೊಟ್ಟು ನೋಡ್ತಾನೆ. ಏನೂ ಕೊಡದೇ ನೋಡ್ತಾನೆ
ನಾವ್ ತಲಪಬೇಕಿದ್ದ ಸ್ಥಳ ನಾವ್ ಹೋಗೋ ದಾರಿ ಸಿಕ್ಕರೆ ಆ ದಾರಿಯಲ್ಲಿ ಹೋದ್ರೆ ಶಾರ್ಟ್ ಕಟ್ ರೂಟ್ ಅಂತ ಯಾಕ್ ಅನ್ಕೊಬೇಕು. ಭಾರತ್ ಬಂದ್ ಇದೆ ಹೇಳಿ ಹೆಚ್ಚಿಗೆ ಹಣ ವಸೂಲಿ ಮಾಡಿದ್ರೆ ಇವತ್ತು ನಾನು ಚೆನ್ನಾಗಿ ದುಡ್ಡು ಮಾಡಬಹುದು ಆದ್ರೆ ನಾಳೆ!
"ಆ ದೇವರು ಕೊಟ್ಟು ನೋಡ್ತಾನೆ. ಏನೂ ಕೊಡದೇ ನೋಡ್ತಾನೆ. ನಾವು ಸರಿಯಾಗಿದ್ರೆ ಎಲ್ಲಾ ಒಳ್ಳೆಯದೇ ಆಗುತ್ತೆ. ನಾನು ಈಗ ಆರಾಮಾಗಿ ಇದ್ದೀನಿ. " ಅಂತ ನಕ್ಕರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications