ಕಾರ್ಪೊರೇಟರ್ ಪತಿ ಮೇಲೆ ಸಗಣಿ ಎಸೆತ: ಕಲಾಸಿಪಾಳ್ಯದಲ್ಲಿ ಹೈಡ್ರಾಮಾ!
ಬೆಂಗಳೂರು, ಮೇ 13: ಒಂದುಕಡೆ ಕೊರೊನಾ ವೈರಸ್ ಮಹಾಮಾರಿಯಿಂದಾಗಿ ಮನೆಯಿಂದ ಹೊರಗೆ ಬರದೆ ಜನ ಆತಂಕಕ್ಕೊಂಡಿದ್ದರೆ, ಇನ್ನೊಂದು ಕಡೆ ಹೈಡ್ರಾಮಾ ನಡೆದಿದೆ.
ಲಾಕ್ ಡೌನ್ ಸಡಿಲಗೊಂಡ ಮೇಲೆ ವ್ಯಾಪಾರ ವಹಿವಾಟು ಆರಂಭಗೊಂಡ ಬಳಿಕ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಅಕ್ರಮವಾಗಿ ಅಂಗಡಿಗಳು ತಲೆ ಎತ್ತಿವೆ. ಹಾಗೆ ಬೀದಿಬದಿಯಲ್ಲಿ ಅಕ್ರಮವಾಗಿ ಎದ್ದು ನಿಂತಿದ್ದ ಅಂಗಡಿಗಳನ್ನು ತೆರವುಗೊಳಿಸಲು ಕಲಾಸಿಪಾಳ್ಯ ಕಾರ್ಪೊರೇಟರ್ ಪ್ರತಿಭಾ, ಪತಿ ಧನರಾಜ್ ಮತ್ತು ಬಿಬಿಎಂಪಿ ಸಿಬ್ಬಂದಿಗಳು ಇಂದು ಬೆಳಗ್ಗೆ ಮುಂದಾಗಿದ್ದರು.
ಈ ವೇಳೆ ಸಿಡಿದೆದ್ದ ಸ್ಥಳೀಯರು ಕಾರ್ಪೊರೇಟರ್ ಪ್ರತಿಭಾ ಪತಿ ಧನರಾಜ್ ಮತ್ತು ಪುತ್ರನ ಮೇಲೆ ಸಗಣಿ ಎಸೆದಿದ್ದಾರೆ. ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಕಲಾಸಿಪಾಳ್ಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಧನರಾಜ್ ಮೇಲೆ ಸಗಣಿ ಎಸೆತ
ಕಲಾಸಿಪಾಳ್ಯದಲ್ಲಿ ಅಕ್ರಮವಾಗಿ ಅಂಗಡಿಗಳನ್ನ ಹಾಕಿದ್ರು ಎಂಬ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಕಾರ್ಪೊರೇಟರ್ ಪ್ರತಿಭಾ, ಪತಿ ಧನರಾಜ್ ಇಂದು ತಪಾಸಣೆ ನಡೆಸಿದರು. ಈ ವೇಳೆ ಕಾರ್ಪೊರೇಟರ್ ಪತಿ ಹಾಗೂ ಮಗನ ಮೇಲೆ ಕೆಲವರು ಸಗಣಿ ಎಸೆದಿದ್ದಾರೆ.

ಕಲಾಸಿಪಾಳ್ಯದಲ್ಲಿ ದೊಡ್ಡ ಗಲಾಟೆ
ಸಗಣಿ ಎಸೆದ ಕಾರಣಕ್ಕೆ ಕಾರ್ಪೊರೇಟರ್ ಪ್ರತಿಭಾ ಪ್ರತಿಭಟನೆಗೆ ಮುಂದಾದರು. ಕೆಲ ಸ್ಥಳೀಯರು ಮೊದಲೇ ಸಗಣಿ ಪ್ಯಾಕೇಟ್ ಗಳನ್ನು ರೆಡಿ ಮಾಡಿಟ್ಟುಕೊಂಡಿದ್ದರು ಎಂಬ ಆರೋಪ ಕೂಡ ಕೇಳಿಬಂತು. ಹೀಗಾಗಿ, ಬಿಬಿಎಂಪಿ ಮತ್ತು ಸ್ಥಳೀಯರ ನಡುವೆ ದೊಡ್ಡ ಗಲಾಟೆ ನಡೆಯಿತು.

ಧನರಾಜ್ ಗೆ ಧಿಕ್ಕಾರ
ಕಲಾಸಿಪಾಳ್ಯದ ಫುಟ್ ಪಾತ್, ರಸ್ತೆ ಬದಿ ಹಾಕಿಕೊಂಡಿದ್ದ ಅಂಗಡಿಗಳನ್ನು ತೆರವು ಮಾಡುವಾಗ ಕಾರ್ಪೊರೇಟರ್ ಪ್ರತಿಭಾ ಪತಿ ಧನರಾಜ್ ವಿರುದ್ಧ ಕೆಲ ಸ್ಥಳೀಯರು ಧಿಕ್ಕಾರ ಕೂಗಿದರು. ಅತ್ತ ಸಗಣಿ ಎಸೆದವರ ವಿರುದ್ಧ ಪ್ರತಿಭಾ ಪ್ರತಿಭಟನೆ ಮಾಡಿದರೆ, ಇತ್ತ ಧನರಾಜ್ ವಿರುದ್ಧ ಸ್ಥಳೀಯರು ಪ್ರತಿಭಟಿಸಿದರು. ಬಿಗುವಿನ ವಾತಾವರಣವನ್ನು ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟರು.

ಗಂಭೀರ ಆರೋಪ ಮಾಡಿದ ಸ್ಥಳೀಯರು
''ಕಾರ್ಪೊರೇಟರ್ ಕಡೆಯವರು ಬಂದು ನಮ್ಮಲ್ಲಿ ಹಣ ಕೇಳ್ತಾರೆ. ಹಣ ಕೊಟ್ಟಿಲ್ಲ ಅಂದ್ರೆ ನಮ್ಮ ಮೇಲೆ ದಬ್ಬಾಳಿಕೆ ಮಾಡ್ತಾರೆ. ಅರ್ಥ ಆಗುವ ರೀತಿಯಲ್ಲಿ ಹೇಳಿದ್ರೆ ನಮಗೆ ಅರ್ಥ ಆಗುತ್ತೆ. ಏಕಾಏಕಿ ಬಂದು ಅಂಗಡಿ ಕ್ಲೋಸ್ ಮಾಡೋಕೆ ಹೇಳ್ತಾರೆ. ನಾವು ಹೇಗೆ ಜೀವನ ಮಾಡಬೇಕು'' ಎಂದು ಸ್ಥಳೀಯರು ಕಾರ್ಪೊರೇಟರ್ ಪ್ರತಿಭಾ ಮತ್ತು ಪತಿ ಧನರಾಜ್ ವಿರುದ್ಧ ಪ್ರಶ್ನೆ ಮಾಡಿದ್ದಾರೆ.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ












Click it and Unblock the Notifications