ಸಿದ್ದರಾಮಯ್ಯ ಊಬ್ಲೋ ವಾಚ್ ಪ್ರಕರಣ ಮುಂದೂಡಿದ ಹೈಕೋರ್ಟ್
ಬೆಂಗಳೂರು, ಮೇ ೦8: ಊಬ್ಲೋ ವಾಚ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮಾಜಿ ಡಿವೈಎಸ್ಪಿ ಅನುಮಪಾ ಶೆಣೈ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಯ ಅಗತ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ವಿಚಾರಣೆಯನ್ನು ರಜಾಕಾಲದ ನಂತರಕ್ಕೆ ಹೈಕೋರ್ಟ್ ಮುಂದೂಡಿದೆ.
ಡಾ. ಗಿರೀಶ್ ಚಂದ್ರವರ್ಮಾ ಎಂಬವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದುಬಾರಿ ವಾಚ್ ಅನ್ನು ಉಡುಗೊರೆಯಾಗಿ ಪಡೆದಿದ್ದಾರೆ ಎಂಬ ಆರೋಪವಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಅನುಪಮಾ ಶೆಣೈ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೇ ವಾಚ್ ವಿಚಾರವಾಗಿ ಸಿದ್ದರಾಮಯ್ಯ ಉಬ್ಲೋ ವಾಚ್ ಪ್ರಕರಣ ಎಂಬ ಮೋದಿ ಆರೋಪ ವಿಚಾರ ವಿಚಾರವಾಗಿ ಮುಖ್ಯಮಮತ್ರಿ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ನೂರು ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ.

ಊಬ್ಲೋ ವಾಚ್ ಪ್ರಕರಣವನ್ನು ಪ್ರತಿಪಕ್ಷ ಬಿಜೆಪಿ ಅಧಿವೇಶನದಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸುವಂತೆ ಭಾರೀ ಪ್ರತಿಭಟನೆಗಳನ್ನು ಮಾಡಿದ್ದವು. ಬಳಿಕ ಸಿದ್ದರಾಮಯ್ಯ ಅವರು ವಜ್ರ ಖಚಿತ ಊಬ್ಲೋ ವಾಚ್ ಅನ್ನು ಮಾರ್ಚ್ 2ರಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಹಸ್ತಾಂತರ ಮಾಡಿದ್ದರು.











Click it and Unblock the Notifications