ದಸರಾ ವೇಳೆ ಸಂಪೂರ್ಣ ರಸ್ತೆಗುಂಡಿ ಮುಚ್ಚಿ: ಹೈಕೋರ್ಟ್ ತಾಕೀತು
ಬೆಂಗಳೂರು, ಅಕ್ಟೋಬರ್ 5: ದಸರಾ ಒಳಗೆ ಬೆಂಗಳೂರಿನ ರಸ್ತೆಗುಂಡಿಯನ್ನು ಸಂಪೂರ್ಣವಾಗಿ ಮುಚ್ಚಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ತಾಕೀತು ಮಾಡಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆಗುಂಡಿ ಮುಚ್ಚುವ ವಿಚಾರ ಸಂಬಂಧ ಹೈಕೋರ್ಟ್ ನಲ್ಲಿ ಶುಕ್ರವಾರ ವಿಚಾರಣೆ ನಡೆಯಿತು. ಹೈಕೋರ್ಟ್ ರಚಿಸಿರುವ ಆಯೋಗದಿಂದ ಕಾಮಗಾರಿ ಪರಿಶೀಲನಾ ವರದಿ ಸಲ್ಲಿಸಲಾಯಿತು.
ಸೆ.24ರೊಳಗೆ ಗುಂಡಿ ಮುಕ್ತ ಬೆಂಗಳೂರು: ಹೈಕೋರ್ಟ್ ಡೆಡ್ ಲೈನ್
ರಸ್ತೆಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚಿದ್ದೇವೆ ಎಂದು ನಿಮ್ಮ ಹೃದಯ ಮುಟ್ಟಿ ಹೇಳಿ ಎಂದು ಸಿಜೆ ಪ್ರಶ್ನಿಸಿದರು. ಸಂಪೂರ್ಣವಾಗಿ ಗುಂಡಿ ಮುಚ್ಚಿದ್ದೇವೆ ಎಂದು ಹೇಳುವುದಿಲ್ಲ ಆದರೆ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ, ಫಿಕ್ಸ್ ಮೈ ಸ್ಟ್ರೀಟ್ ಅಪ್ಲಿಕೇಷನ್ ಮೂಲಕ 2 ಹಾಟ್ ಮಿಕ್ಸ್ ಪ್ಲಾಂಟ್ ಆರಂಭಿಸಲು ಟೆಂಡರ್ ಕರೆದಿದ್ದೇಬೆ, ಐದು ವರ್ಷ ಬಿಬಿಎಂಪಿಯೇ ರಸ್ತೆಗುಂಡಿ ನಿರ್ವಹಿಸಲಿದೆ ಎಂದು ಬಿಬಿಎಂಪಿ ಪರ ವಕೀಲ ಶ್ರೀನಿಧಿ ಹೇಳಿದ್ದಾರೆ.
ರಸ್ತೆ ಗುಂಡಿಗೆ ಶಾಶ್ವತ ಪರಿಹಾರ: ಬಿಬಿಎಂಪಿಗೆ ಸಿಜೆ ಖಡಕ್ ಆದೇಶ
ದಸರಾ ಸಂದರ್ಭದಲ್ಲಿ ಸಂಚಾರ ದಟ್ಟಣೆ ಕಡಿಮೆ ಇರಲಿದೆ, ನೆಪ ಹೇಳದೆ ರಸ್ತೆ ಗುಂಡಿ ಮುಚ್ಚಿ ಎಂದು ಹೇಳಿ ವಿಚಾರಣೆಯನ್ನು ಅಕ್ಟೋಬರ್ 23 ಕ್ಕೆ ಮುಂದೂಡಿತು.