ಬೆಂಗಳೂರು ಎಲಿವೇಟೆಡ್ ಕಾರಿಡಾರ್ ಕಾಮಗಾರಿಗೆ ಹೈಕೋರ್ಟ್ ತಡೆ
ಬೆಂಗಳೂರು, ಮಾರ್ಚ್ 14: ವಿವಾದಿತ ಎಲಿವೇಟೆಡ್ ಕಾರಿಡಾರ್ ಯೋಜನೆ ಕಾಮಗಾರಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ವಿವಾದಿತ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ತಡೆ ಕೋರಿ ನಮ್ಮ ಬೆಂಗಳೂರು ಪ್ರತಿಷ್ಠಾನ ಹಾಗೂ ಸಿಟಿಜನ್ಸ್ ಆಕ್ಷನ್ ಫೋರಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನಾರಾಯಣಸ್ವಾಮಿ, ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರಿದ್ದ ಪೀಠ ಸೂಚನೆ ನೀಡಿದೆ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮವು ತರಾತುರಿಯಲ್ಲಿ ಟೆಂಡರ್ ಕರೆದು ಈ ಟೆಂಡರ್ನ್ನು ಹೈಕೋರ್ಟ್ ತಡೆ ಹಿಡಿದಿದೆ. ತೀರ್ಪನ್ನು ಮಾರ್ಚ್ 19ಕ್ಕೆ ಮುಂದೂಡಿದೆ. ಎರಡನೇ ಮೂರು ಭಾಗದಷ್ಟು ಚುನಾಯಿತ ಕಾರ್ಪೊರೇಟರ್ಗಳು, ಮೆಟ್ರೋ ಪೊಲಿಟನ್ ಪ್ಲಾನಿಂಗ್ ಕಮಿಟಿ ಸಮ್ಮುಖದಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಬೇಕಿತ್ತು. ಹಾಗಾಗಿ ಹೈಕೋರ್ಟ್ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ತಡೆ ನೀಡಿದೆ.

ಲಿವೇಟೆಡ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಟೆಂಡರ್ ಕರೆಯಲು ಕೆಆರ್ಸಿಡಿಎಲ್ ಒಲವು ತೋರಿದೆ. ನಗರದ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ವ್ಯಾಪ್ತಿಯಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸಲು ಉದ್ದೇಶಿತ ಎಲಿವೇಟೆಡ್ ಕಾರಿಡಾರ್ ಯೋಜನೆಯಡಿ ಲೂಪ್ ಮಾದರಿಯಲ್ಲಿ ಮೇಲು ರಸ್ತೆ ನಿರ್ಮಿಸಲು ನಿರ್ಧರಿಸಲಾಗಿದೆ.
ಉತ್ತರ-ದಕ್ಷಿಣ ಕಾರಿಡಾರ್ ಮಾರ್ಗದಲ್ಲಿನ ಸಿಬಿಡಿ ಪ್ರದೇಶದಲ್ಲಿನ ವಾಣಿಜ್ಯ ಚಟುವಟಿಕೆಯಿಂದಾಗಿ ಸದಾ ಟ್ರಾಫಿಕ್ ಪ್ರಮಾಣ ಹೆಚ್ಚಿರುತ್ತದೆ. ಬೆಳಗ್ಗೆಯಿಂದ ರಾತ್ರಿವರೆಗೂ ಸಂಚಾರ ದಟ್ಟಣೆಯಲ್ಲೇ ಕಾಲ ಕಳೆಯಬೇಕಿದೆ. ವಸತಿ ಸಮುಚ್ಚಯವಿರುವ ಪ್ರದೇಶವಾಗಿರುವ ಕಾರಣ ಮುಂದಿನ ವರ್ಷಗಳಲ್ಲಿ ಇನ್ನಷ್ಟು ಸಂಚಾರ ದಟ್ಟಣೆಯಾಗುವುದನ್ನು ಗಮನಿಸಿ ಕೆಲ ಮುಖ್ಯ ರಸ್ತೆಗಳನ್ನು ಲೂಪ್ ಮಾದರಿಯ ಮೇಲು ರಸ್ತೆಗೆ ಸಂಪರ್ಕಿಸಲಾಗುತ್ತದೆ.
ಈಗಾಗಲೇ ಮೊದಲ ಹಂತದ ಕಾರಿಡಾರ್ ಗೆ ಮೂರು ಪ್ಯಾಕೇಜ್ನಡಿ ಟೆಂಡರ್ ಆಹ್ವಾನಿಸಲಾಗಿದೆ. ಆದರೆ ಲೂಪ್ ಮಾದರಿಯ ಮೇಲು ರಸ್ತೆಯನ್ನು ಸೇರ್ಪಡೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಪ್ರತ್ಯೇಕ ಟೆಂಡರ್ ಆಹ್ವಾನಿಸಿ ಕಾಮಗಾರಿಯನ್ನು ಅನುಷ್ಠಾನಕ್ಕೆ ತರುವ ಕೆಆರ್ಡಿಸಿಎಲ್ ಹೊಂದಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications