ಪಟಾಕಿ ಅಂಗಡಿಗಳ ಬೀಗ ತೆರೆಯಲು ಹೈಕೋರ್ಟ್ ನಿರ್ದೇಶನ
ಬೆಂಗಳೂರು, ನವೆಂಬರ್ 11: ಬೆಳಕಿನ ಹಬ್ಬ ದೀಪಾವಳಿ ಆರಂಭವಾಗಿರುವುದರಿಂದ ನಿಯಮ ಉಲ್ಲಂಘನೆ ಆರೋಪದಡಿ ಜಪ್ತಿ ಮಾಡಿದ ಅರ್ಜಿದಾರರ ಪಟಾಕಿ ದಾಸ್ತಾನು ಮಳಿಗೆಗಳಿಗೆ ಹಾಕಲಾಗಿರುವ ಬೀಗವನ್ನು ತಕ್ಷಣ ತೆಗೆಯಬೇಕು ಎಂದು ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. ಆದರೆ ಬೀಗ ತೆರವುಗೊಳಿಸುವ ಮಳಿಗೆಗಳು ಸ್ಫೋಟಕ ಕಾಯ್ದೆ ಮತ್ತು ಅದಕ್ಕನುಗುಣವಾದ ನಿಯಮಗಳನ್ನು ಪಾಲನೆ ಮಾಡಿದ್ದರೆ ಮಾತ್ರವೇ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಸಂಬಂಧಿಸಿದ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಬಾಗೇಪಲ್ಲಿಯ ಎನ್. ಮಹದೇಶನ್ ಸೇರಿದಂತೆ ಒಟ್ಟು 22 ಪಟಾಕಿ ಮಾರಾಟ ಪರವಾನಗಿದಾರರು ಜಪ್ತಿ ಮಾಡಲಾಗಿರುವ ನಮ್ಮ ಪಟಾಕಿ ದಾಸ್ತಾನು ಮಳಿಗೆಗಳ ತೆರವಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠ ಈ ಮಧ್ಯಂತರ ಆದೇಶ ನೀಡಿತು.

ನಿಯಮ ಬಾಹಿರ ಪರವಾನಗಿ: ಕೇಂದ್ರ ಸರ್ಕಾರದ ಡೆಪ್ಯುಟಿ ಸಾಲಿಸಿಟರ್ ಜನರಲ್, ಪ್ರಕರಣದ ಪ್ರತಿವಾದಿಯಾದ ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷಾ ಸಂಸ್ಥೆ ಮುಖ್ಯ ನಿಯಂತ್ರಕರ ಪರವಾಗಿ, ಹಾಜರಾಗಿ, 600 ಕೆಜಿ ತೂಕದವರೆಗೂ ಪಟಾಕಿ ದಾಸ್ತಾನು ಮಾಡಲು ಪರವಾನಗಿ ನೀಡಲು ಜಿಲ್ಲಾಧಿಕಾರಿಗೆ ಅಧಿಕಾರವಿದೆ. ಆದರೆ, ಬಹಳಷ್ಟು ಪ್ರಕರಣಗಳಲ್ಲಿ ಈ ಮಿತಿಯನ್ನು ಮೀರಿ ಕಾನೂನು ಬಾಹಿರವಾಗಿ ಪರವಾನಗಿ ನೀಡಲಾಗಿದೆ ಎಂಬ ಅಂಶವನ್ನು ಪುನರುಚ್ಚರಿಸಿದರು.
ಅದಕ್ಕೆ ಸರ್ಕಾರಿ ವಕೀಲರು, ಕಂದಾಯ, ಅಗ್ನಿ ಶಾಮಕ ಮತ್ತು ಪೊಲೀಸ್ ಇಲಾಖೆಗಳ ಸಹಯೋಗದಲ್ಲೇ ಸಮಗ್ರ ಪರಿಶೀಲನೆ ನಡೆಸಿ ನಿರಾಕ್ಷೇಪಣ ಪತ್ರ ನೀಡಲಾಗಿದೆ ಎಂದು ಸಮರ್ಥಿಸಿಕೊಂಡರು.
ಅರ್ಜಿದಾರರ ಪರ ವಕೀಲರು, ದೀಪಾವಳಿ ಹಬ್ಬ ಆರಂಭವಾಗುತ್ತಿದ್ದು, ಜಪ್ತಿ ಮಾಡಿದ ಮಳಿಗೆಗಳ ಬೀಗ ತೆರೆಯಲು ನಿರ್ದೇಶಿಸಬೇಕು ಎಂದು ಕೋರಿದರು. ಇದನ್ನು ಮನ್ನಿಸಿದ ನ್ಯಾಯಪೀಠ ಜಪ್ತಿ ಮಾಡಲಾಗಿರುವ ಅರ್ಜಿದಾರರ ದಾಸ್ತಾನು ಮಳಿಗೆಗಳ ಬೀಗಗಳನ್ನು ಕೂಡಲೇ ತೆರೆಯಬೇಕು. ಸ್ಫೋಟಕ ಕಾಯ್ದೆ-1984ರ ನಿಯಮಗಳನ್ನು ಮೀರದಂತೆ ಷರತ್ತುಗಳನ್ನು ಪಾಲನೆ ಮಾಡುವವರಿಗೆ ಮಾತ್ರವೇ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿತು.
ಪ್ರಕರಣದ ಹಿನ್ನೆಲೆ: ಆನೇಕಲ್ ತಾಲ್ಲೂಕಿನ ಬಾಲಾಜಿ ಟ್ರೇಡರ್ಸ್ನಲ್ಲಿ 2023ರ ಅಕ್ಟೋಬರ್ 7ರಂದು ಪಟಾಕಿ ದಾಸ್ತಾನಿಗೆ ಬೆಂಕಿ ಬಿದ್ದ ಪರಿಣಾಮ 14 ಜನರು ಸ್ಥಳದಲ್ಲೇ ಮೃತಪಟ್ಟ ಹಿನ್ನೆಲೆಯಲ್ಲಿ ಸಿಒಡಿ ತನಿಖೆಗೆ ಆದೇಶಿಸಲಾಗಿತ್ತು.
ಬೆಂಗಳೂರು ನಗರ ಪೊಲೀಸ್ ಕಮಿಷನರ್, ಬೆಂಗಳೂರು ಉತ್ತರ ತಾಲ್ಲೂಕು ತಹಶೀಲ್ದಾರ್, ಅತ್ತಿಬೆಲೆ, ಸೂರ್ಯನಗರ ಮತ್ತು ಹೆಬ್ಬಗೋಡಿ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ಗಳ ಜಂಟಿ ಸಮಿತಿಯ ಆಶ್ರಯದಲ್ಲಿ ಅಧಿಕೃತ ಮತ್ತು ಅನಧಿಕೃತ ಪರವಾನಗಿ ಹೊಂದಿದ ಪಟಾಕಿ ಮಾರಾಟ ಮಳಿಗೆಗಳ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ನಿಯಮ ಉಲ್ಲಂಘಿಸಿದ ಮಾರಾಟ ಮಳಿಗೆಗಳನ್ನು ಜಪ್ತಿ ಮಾಡಿ ಬೀಗ ಹಾಕಲಾಗಿತ್ತು. ಇವುಗಳ ತೆರವು ಕೋರಿ ಅರ್ಜಿದಾರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ನಮ್ಮ ಮಳಿಗೆಗಳಿಗೆ ಬೀಗ ಹಾಕಿರುವುದು ಕಾನೂನುಬಾಹಿರ ಮತ್ತು ಅಸಾಂವಿಧಾನಿಕ. ಹಾಗಾಗಿ, ನಮಗೆ ಮಾರಾಟ ಮಾಡಲು ಅನುವಾಗುವಂತೆ ಬೀಗ ತೆರವಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications