ರಾಜ್ಯದ ಮೂರು ಕಡೆ NIA ವಿಶೇಷ ಕೋರ್ಟ್ ಸ್ಥಾಪನೆಗೆ ಹೈಕೋರ್ಟ್ ಶಿಫಾರಸ್ಸು

ಬೆಂಗಳೂರು, ಏಪ್ರಿಲ್‌ 29: ರಾಷ್ಟ್ರೀಯ ತನಿಖಾ ದಳದ ಹಲವು ಪ್ರಕರಣಗಳ ವಿಚಾರಣೆಯಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಲು ಹೈಕೋರ್ಟ್ ಮುಂದಾಗಿದೆ. ಎನ್‌ಐಎ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಿ ನ್ಯಾಯದಾನ ಮಾಡಲು ರಾಜ್ಯದ ಇತರೆ ಕಂದಾಯ ವಿಭಾಗಗಳಾದ ಬೆಳಗಾವಿ, ಕಲಬುರಗಿ ಮತ್ತು ಮೈಸೂರಿನಲ್ಲಿ ಎನ್‌ಐಎ ವಿಶೇಷ ನ್ಯಾಯಾಲಯಗಳನ್ನು ಮುಂದಿನ ಆರು ತಿಂಗಳಲ್ಲಿ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶಿಫಾರಸ್ಸು ಮಾಡಿದೆ.

ಹುಬ್ಬಳ್ಳಿ ಗಲಭೆ ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದ ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಶೋಹಿಬ್ ಸೇರಿದಂತೆ ಇತರೆ 40 ಮಂದಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಟಿ.ವೆಂಕಟೇಶ್ ನಾಯಕ್ ಅವರಿದ್ದ ಪೀಠ ಈ ಸೂಚನೆ ನೀಡಿದೆ. ಅಲ್ಲದೆ, ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದ ಎನ್‌ಐಎ ನ್ಯಾಯಾಲಯದ ಆದೇಶ ಊರ್ಜಿತಗೊಳಿಸಿದೆ.

HC Directed State Government To Set Up Three NIA Special Courts In The State

ಹೊಸದಾಗಿ ವಿಶೇಷ ನ್ಯಾಯಾಲಯಗಳ ರಚನೆ ಮಾಡದಿದ್ದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದ ಮೇಲೆ ಹೊರೆ ಹೆಚ್ಚಾಗಲಿದೆ. ಇದು ಸಂವಿಧಾನದ ಪರಿಚ್ಚೇದ 14( ಸಮಾನತೆ) ಮತ್ತು 21(ತ್ವರಿತ ವಿಚಾರಣೆ) ಹಕ್ಕುಗಳಿಗೆ ವಿರುದ್ಧವಾಗಲಿದೆ. ಆದ್ದರಿಂದ ಶೀಘ್ರದಲ್ಲಿ ಇತರೆ ವಿಶೇಷ ನ್ಯಾಯಾಲಯ ರಚನೆ ಮಾಡಬೇಕು ಎಂದು ನ್ಯಾಯಪೀಠ ಶಿಫಾರಸ್ಸು ಮಾಡಿದೆ.

ಸಂವಿಧಾನದ ಪರಿಚ್ಚೇದ 21ರ ಪ್ರಕಾರ ಯಾವುದೇ ಆರೋಪಿ ತ್ವರಿತ ನ್ಯಾಯದಾನದ ಹಕ್ಕು ಹೊಂದಿದ್ದಾರೆ. ಈ ಹಕ್ಕು ವಿಚಾರಣೆ ಮೇಲ್ಮನವಿ, ಪರಿಷ್ಕರಣೆ ಮತ್ತು ಮರು ವಿಚಾರಣೆ ಸೇರಿದಂತೆ ಎಲ್ಲ ಹಂತಗಳನ್ನು ಒಳಗೊಂಡಿರುತ್ತದೆ. ತ್ವರಿತ ವಿಚಾರಣೆ ಸಾರ್ವಜನಿಕ, ಸಾಮಾಜಿಕ ಹಿತಾಸಕ್ತಿಯನ್ನೂ ಒಳಗೊಂಡಿದೆ ಎಂದ ಮಾತ್ರಕ್ಕೆ ಆರೋಪಿಯ ಹಕ್ಕನ್ನು ಕಡಿಮೆ ಮಾಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಅರೋಪಿತರು ಅನಗತ್ಯವಾಗಿ ದೀರ್ಘಕಾಲ ಸೆರೆವಾಸ ಮಾಡುವುದಕ್ಕೆ ಅವಕಾಶವಿಲ್ಲ. ಹೀಗಾಗಿ ಶೀಘ್ರ ವಿಚಾರಣೆ ಅಗತ್ಯವಿದ್ದು, ಹೊಸ ನ್ಯಾಯಾಲಯಗಳ ರಚನೆ ಅಗತ್ಯವಿದೆ ಎಂದು ಪೀಠ ತಿಳಿಸಿದೆ.

ಸಕಾಲದಲ್ಲಿ ನ್ಯಾಯ

ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆಯಡಿ ರಾಜ್ಯ ಸರ್ಕಾರ ಇಡೀ ರಾಜ್ಯಕ್ಕೆ ಬೆಂಗಳೂರು ನಗರದಲ್ಲಿ ಮಾತ್ರ ಒಂದು ವಿಶೇಷ ನ್ಯಾಯಾಲಯ ರಚನೆ ಮಾಡಿದೆ. ಎನ್‌ಐಎ ಪ್ರಕರಣಗಳನ್ನು ಪರಿಶೀಲಿಸಿದಾಗ ಸುಮಾರು 8 ರಿಂದ 9 ವರ್ಷಗಳ ಹಳೆಯ ಪ್ರಕರಣಗಳು ಬಾಕಿ ಉಳಿದಿವೆ. ನ್ಯಾಯಾಂಗ ಪ್ರಸ್ತುತ ಸಾರ್ವಜನಿಕರ ನಂಬಿಕೆಯ ಅಂತಿಮ ಹಾಗೂ ಕೊನೆಯ ಕೇಂದ್ರ ಬಿಂದುವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ನ್ಯಾಯಾಂಗದ ಮೊರೆ ಹೋಗುವವರಿಗೆ ಸಕಾಲಕ್ಕೆ ನ್ಯಾಯವನ್ನು ಒದಗಿಸುವುದು ನ್ಯಾಯಾಲಯದ ಕರ್ತವ್ಯವಾಗಿದೆ. ಹಾಗಾಗಿ ಜನತೆಗೆ ಶೀಘ್ರ ಮತ್ತು ತ್ವರಿತ ನ್ಯಾಯಾಧಾನ ಮಾಡುವುದಕ್ಕೆ ರಾಜ್ಯದ ಇತರೆ ಕಂದಾಯ ವಿಭಾಗಗಳಾದ ಮೈಸೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ವಿಶೇಷ ನ್ಯಾಯಾಲಯಗಳನ್ನು ರಚನೆ ಮಾಡುವುದಕ್ಕೆ ಇದು ಸೂಕ್ತ ಸಮಯವಾಗಿದೆ ಎಂದು ಪೀಠ ತಿಳಿಸಿದೆ.

ಹೊಸದಾಗಿ ಪ್ರಸ್ತಾಪಿಸಿರುವ ವಿಶೇಷ ನ್ಯಾಯಾಲಯಗಳಿಗೆ ಎನ್‌ಐಎ ಪ್ರಕರಣಗಳು ಕಡಿಮೆ ಇದ್ದಲ್ಲಿ ಇತರೆ ಪ್ರಕರಣಗಳನ್ನು ನಿಯೋಜಿಸಬಹುದಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿರುವ ವಿಶೇಷ ನ್ಯಾಯಾಲಯ ಎನ್‌ಐಎ ಜತೆಗೆ ಇತರೆ ಪ್ರಕರಣಗಳನ್ನು ವಿಚಾರಣೆ ನಡೆಸಲು ನಿಯೋಜಿಸಲಾಗಿದೆ, ಇದರಿಂದ ಎನ್‌ಐಎ ಪ್ರಕರಣಗಳ ವಿಚಾರಣೆ ವಿಳಂಬಕ್ಕೆ ಕಾರಣವಾಗುತ್ತಿದೆ.

ಪ್ರಕರಣದ ಹಿನೆಲೆ ಏನು?

ವ್ಯಕ್ತಿಯೊಬ್ಬರು ಇಸ್ಲಾಂ ಧರ್ಮಕ್ಕೆ ಅವಮಾನವಾಗುವಂತಹ ಹೇಳಿಕೆಯೊಂದನ್ನು ತನ್ನ ಮೊಬೈಲ್ ಸ್ಟೇಟಸ್ ಹಾಕಿಕೊಂಡಿದ್ದಾರೆ. ತಕ್ಷಣ ಅವರನ್ನು ಬಂಧಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸುಮಾರು 100ಕ್ಕೂ ಹೆಚ್ಚು ಮಂದಿ ಹಳೆಯ ಹುಬ್ಬಳ್ಳಿ ಪೊಲೀಸ್ ಠಾಣೆಯ ಎದುರು ಜಮಾಯಿಸಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮನವೊಲಿಸಿದರೂ ಹಿಂಜರಿದೆ ದಾಂಧಲೆ ನಡೆಸಿದ್ದರು. ಅಲ್ಲದೆ, ಪೊಲೀಸರ ಕರ್ತವಕ್ಕೆ ಅಡ್ಡಿ ಪಡಿಸಿದ್ದರು.

ಚಪ್ಪಲಿ ಹಾಗೂ ಕಲ್ಲುಗಳಿಂದ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯ ಮೇಲೆ ಎಸೆದಿದ್ದರು. ಸರ್ಕಾರಿ ವಾಹನಗಳನ್ನು ಕಲ್ಲು ಹಾಗೂ ದೊಣ್ಣೆಗಳಿಂದ ಜಖಂಗೊಳಿಸಿದ್ದರು. ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು. ಆರೋಪ ಸಂಬಂಧ ಸುಮಾರು 140ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು. ಆರೋಪಿಗಳು ಸಲ್ಲಿಸಿದ್ದ ಜಾಮೀನನ್ನು ಅರ್ಜಿಯನ್ನು ಎನ್‌ಐಎ ನ್ಯಾಯಾಲಯ ವಜಾಗೊಳಿಸಿತ್ತು, ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+