ಕಸ ಬೇರ್ಪಡಿಸದಿದ್ದರೆ ದಂಡ ಹಾಕಲು ಹೈ ಕೋರ್ಟ್ ಆದೇಶ
ಬೆಂಗಳೂರು, ಜ. 10: ಕಸ ವಿಂಗಡಣೆ ಕುರಿತು ಸರ್ಕಾರ, ಬಿಬಿಎಂಪಿ ಹಾಗೂ ಸಂಘ-ಸಂಸ್ಥೆಗಳು ಸಾಕಷ್ಟು ಬಾರಿ ಜಾಗೃತಿ ಮೂಡಿಸಿದ್ದರೂ ಜನ ಬದಲಾಗಿಲ್ಲ. 'ನಾವ್ಯಾಕೆ ತಲೆ ಕೆಡಿಸಿಕೊಳ್ಳೋಣ' ಎಂಬ ಧೋರಣೆ ಕಸದ ಸಮಸ್ಯೆಯನ್ನು ಇನ್ನಷ್ಟು ಹೆಚ್ಚಿಸಿದೆ. ಇದೀಗ ಹೈ ಕೋರ್ಟ್ ಈ ಕುರಿತು ಚಾಟಿ ಬೀಸಿದೆ.
ತನ್ನ ವ್ಯಾಪ್ತಿಯ ಎಲ್ಲ 198 ವಾರ್ಡ್ಗಳಲ್ಲಿಯೂ ಒಣ ಕಸ ಸಂಗ್ರಹಣೆ ಕೇಂದ್ರಗಳು ತಯಾರಾಗಿವೆ. ಕೆಲವೆಡೆ ಮಾತ್ರ ಇನ್ನೂ ಕಾರ್ಯಾರಂಭಿಸಬೇಕಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಘನ ತ್ಯಾಜ್ಯ ನಿರ್ವಹಣೆ) ದರ್ಪಣ ಜೈನ್ ಹೈ ಕೋರ್ಟ್ಗೆ ತಿಳಿಸಿದ್ದಾರೆ. ಆದ್ದರಿಂದ ಕಸ ಬೇರ್ಪಡಿಸುವಿಕೆಯನ್ನು ಸ್ಪಷ್ಟವಾಗಿ ಜಾರಿಗೆ ತರಬೇಕೆಂದು ಹೈಕೋರ್ಟ್ ಬೆಂಗಳೂರು ಮಹಾನಗರ ಪಾಲಿಕೆಗೆ ಆದೇಶ ನೀಡಿದೆ. ಅಲ್ಲದೆ, ಈ ನಿಯಮ ಉಲ್ಲಂಘಿಸಿದವರಿಂದ ದಂಡ ಆಕರಿಸುವಂತೆಯೂ ಸೂಚಿಸಿದೆ. [ಇದು ಕಸದ ಮಾರ್ಕೆಟ್, ಕಸ ಕೊಟ್ಟು ಹಣ ಪಡೆಯಿರಿ]

ಇದಕ್ಕೂ ಮೊದಲು ಕಸ ಬೇರ್ಪಡಿಸುವ ರೀತಿ, ಪಾಲಿಸಬೇಕಾದ ನಿಯಮಗಳ ಕುರಿತು ಬಿಬಿಎಂಪಿ ವತಿಯಿಂದ ಮಾಧ್ಯಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ತರಬೇತಿ ನೀಡಬೇಕೆಂದು ಹೇಳಿದೆ. [ನಮ್ಮ ಹೆಣದ ಮೇಲೆ ಕಸ ಸುರೀರಿ ಅಂದ್ರು ಗೊರೂರಿಗರು]
ಬೆಂಗಳೂರಿನಲ್ಲಿ ಘನ ತ್ಯಾಜ್ಯ ವಿಲೇವಾರಿ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎನ್. ಕುಮಾರ್ ಮತ್ತು ನ್ಯಾ. ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಇದೇ ಪೀಠ ಕಳೆದ ಎರಡು ವರ್ಷಗಳಿಂದ ನಗರದಲ್ಲಿನ ಕಸ ವಿಲೇವಾರಿ ಪ್ರಕ್ರಿಯೆಯನ್ನು ಪರಿಶೀಲಿಸುತ್ತಿದೆ. [ಕಸ ಬೇರ್ಪಡಿಸದವರಿಗೆ ಭಾರೀ ದಂಡ]
ಬೆಂಗಳೂರಿನಲ್ಲಿ ಕಸ ಬೇರ್ಪಡಿಸುವುದನ್ನು 2002ರ ಅಕ್ಟೋಬರ್ ತಿಂಗಳಿನಲ್ಲಿಯೇ ಕಡ್ಡಾಯಗೊಳಿಸಲಾಗಿತ್ತು. ಆದರೆ, ಇದುವರೆಗೂ ಸರಿಯಾಗಿ ಜಾರಿಗೆ ಬಂದಿಲ್ಲ. ಇದಕ್ಕೆ ಹಲವು ಪ್ರದೇಶಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯ ವಿಲೇವಾರಿಗೆ ಸೌಲಭ್ಯವಿಲ್ಲದಿರುವುದೂ ಕಾರಣವಾಗಿತ್ತು. [ಲಾಲ್ ಬಾಗ್ ನಲ್ಲಿ ಅಕ್ರಮ ಚಟುವಟಿಕೆಗೆ ಮಣ್ಣು]
ಆದ್ದರಿಂದ ಹೈ ಕೋರ್ಟ್ ಹಲವು ಸಲಹೆಗಳನ್ನು ನೀಡಿದೆ. ಎಲ್ಲ 198 ವಾರ್ಡ್ನಲ್ಲೂ ಕನಿಷ್ಠ ಒಂದು ತ್ಯಾಜ್ಯ ನಿರ್ವಹಣೆ ಕೇಂದ್ರ ಇರಲೇಬೇಕು ಹಾಗೂ ಎಲ್ಲ 28 ವಿಧಾನಸಭೆ ಮತಕ್ಷೇತ್ರದಲ್ಲಿಯೂ ಹಸಿ ತ್ಯಾಜ್ಯ ನಿರ್ವಹಣೆ ಕೇಂದ್ರ ಇರಬೇಕೆಂದು ಸೂಚಿಸಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications