ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆ ವಿರುದ್ಧ ಕ್ರಮಕ್ಕೆ ಕೋರ್ಟ್ ಸೂಚನೆ
ಬೆಂಗಳೂರು, ಆಗಸ್ಟ್ 10: ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆ ವಿರುದ್ಧದ ಫೋರ್ಜರಿ ಆರೋಪದ ದೂರನ್ನು ಸ್ವೀಕರಿಸುವಂತೆ ಕೋರಮಂಗಲದ ಪಾಸ್ ಪೋರ್ಟ್ ಕಚೇರಿಗೆ ಹೈಕೋರ್ಟ್ ಸೂಚಿಸಿದೆ.
ಅನಿಲ್ ಕುಂಬ್ಳೆ ಅವರ ಪತ್ನಿ ಚೇತನಾ ಅವರ ಮೊದಲ ಪತಿ ಕುಮಾರ್ ವಿ. ಜಾಗೀರ್ ದಾರ್ ಅವರು ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಕ್ರಮ ಜರುಗಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ.
"ತಮ್ಮಿಬ್ಬರಿಗೆ ಜನಿಸಿದ್ದ ಮಗಳ ಪಾಸ್ಪೋರ್ಟ್ ನವೀಕರಣಕ್ಕೆ ನಾನು ಸಹಿ ಹಾಕಬೇಕಿತ್ತಾದರೂ ನನ್ನ ಪತ್ನಿಯ ಎರಡನೇ ಪತಿ, ತಂದೆಯ ಸಹಿ ಮಾಡಿ ಸುಳ್ಳು ಮಾಹಿತಿ ನೀಡಿದ್ದಾರೆ" ಎಂದು ಕುಮಾರ್ ವಿ. ಜಾಗೀರ್ ದಾರ್ ದೂರು ನೀಡಿದ್ದರು.

ಆದರೆ. ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿಗಳು ಈ ದೂರನ್ನು ಪರಿಗಣಿಸಿರಲಿಲ್ಲ, ಈ ಹಿಂದೆ ಇದೇ ಪ್ರಕರಣದಲ್ಲಿ ಅನಿಲ್ ಕುಂಭ್ಳೆ ವಿರುದ್ಧ ಹಾಕಲಾಗಿದ್ದ ಎಫ್ಐಆರ್ ಕೂಡಾ ರದ್ದಾಗಿತ್ತು. ಆದರೆ, ಈಗ ಕುಮಾರ್ ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ಅವರಿದ್ದ ಏಕಸದಸ್ಯ ಪೀಠ, ಕ್ರಮ ಜರುಗಿಸುವಂತೆ ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿಗೆ ಸೂಚನೆ ನೀಡಿದೆ.
2012ರ ಜನವರಿ 10ರಂದು ಅರ್ಜಿದಾರರು ನೀಡಿರುವ ದೂರನ್ನು ಪರಿಗಣಿಸಿ, ಕಾನೂನು ಪ್ರಕಾರ ಸೂಕ್ತ ಎನಿಸಿದರೆ, ಈ ಬಗ್ಗೆ ಕೋರ್ಟಿಗೆ ತಿಳಿಸುವಂತೆ ಪಾಸ್ ಪೋರ್ಟ್ ಕಚೇರಿಗೆ ಹೇಳಲಾಗಿದೆ. ಈ ಪ್ರಕರಣ ಇತ್ಯರ್ಥವಾಗುವ ತನಕ ಕುಂಬ್ಳೆ ಅವರ ಪುತ್ರಿ ಆರುಣಿ ಅವರ ಪಾಸ್ ಪೋರ್ಟ್ ನವೀಕರಣ ಕೂಡಾ ಸಾಧ್ಯವಿಲ್ಲ.
ಕುಮಾರ್ ವಿ ಜಾಗೀರ್ ದಾರ್ ಹಾಗೂ ಚೇತನಾ ರಾಮತೀರ್ಥ ಅವರು 1986ರಲ್ಲಿ ಮದುವೆಯಾಗಿದ್ದರು, ಇವರಿಗೆ ಹೆಣ್ಣು ಮಗು ಜನಿಸಿತ್ತು. 1999ರಲ್ಲಿ ಇಬ್ಬರು ವಿವಾಹ ವಿಚ್ಛೇದನ ಪಡೆದುಕೊಂಡರು. ನಂತರ ಅನಿಲ್ ಕುಂಬ್ಳೆ ಮದುವೆಯಾಗಿದ್ದರು. 2012ರಲ್ಲಿ ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿಗೆ ದೂರು ನೀಡಿರುವ ಕುಮಾರ್, ಅಪ್ರಾಪ್ತ ಪುತ್ರಿಯ ತಂದೆ ಸಹಿ ಹಾಕುವ ಜಾಗದಲ್ಲಿ ನನ್ನ ಸಹಿ ಇರಬೇಕು, ಬದಲಿಗೆ ಕುಂಬ್ಳೆ ಸಹಿ ಹಾಕುವ ಮೂಲಕ ಕಾನೂನು ಉಲ್ಲಂಘನೆಯಾಗಿದೆ ಎಂದು ದೂರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications