ಆರ್ಟಿಐ ಆಯುಕ್ತರ ನೇಮಕ ಪ್ರಶ್ನಿಸಿದ್ದ ವ್ಯಕ್ತಿಗೆ 5 ಲಕ್ಷ ದಂಡ ವಿಧಿಸಿದ ಹೈಕೋರ್ಟ್
ಬೆಂಗಳೂರು, ಸೆ.21: ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಸುಳ್ಯದ ವ್ಯಕ್ತಿ ತಾನು ವಕೀಲನಾಗಿದ್ದರೂ ಆ ಬಗ್ಗೆ ಕೋರ್ಟ್ಗೆ ಮಾಹಿತಿ ನೀಡದೆ ಇದ್ದುದಕ್ಕೆ ಹೈಕೋರ್ಟ್ 5 ಲಕ್ಷ ರೂ.ಗಳ ಭಾರಿ ದಂಡ ವಿಧಿಸಿದೆ.
ಇದು ಇನ್ನು ಮುಂದೆ ಸುಖಾಸುಮ್ಮನೆ ಅರ್ಜಿ ಸಲ್ಲಿಸುವವರಿಗೆ ಎಚ್ಚರಿಕೆ ಗಂಟೆಯಾಗಿದೆ. ಪಿ.ಮೋಹನ್ ಚಂದ್ರ ದಂಡನೆಗೆ ಒಳಗಾಗಿರುವ ವ್ಯಕ್ತಿ.
ಅರ್ಜಿದಾರರು ಸ್ವತಃ ವಕೀಲರಾಗಿದ್ದರೂ ಹಲವು ಅಂಶಗಳನ್ನು ಮುಚ್ಚಿಟ್ಟು ನ್ಯಾಯಾಂಗದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ದಂಡ ವಿಧಿಸಲಾಗುತ್ತಿದೆ ಎಂದು ಹೇಳಿರುವ ವಿಭಾಗೀಯಪೀಠ, ಕ್ಷುಲ್ಲಕ ಅರ್ಜಿ ಹೂಡಿ ನ್ಯಾಯಾಂಗದ ಘನತೆ ಕುಂದು ಮಾಡುವ ಪ್ರಯತ್ನಗಳನ್ನು ಸಹಿಸಲಾಗದು ಎಂದು ಎಚ್ಚರಿಕೆ ನೀಡಿದೆ.
ಆತ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ಹಿರಿಯ ನ್ಯಾ. ಬಿ. ವೀರಪ್ಪ ನೇತೃತ್ವದ ವಿಭಾಗೀಯಪೀಠ ಈ ಮಹತ್ವದ ಆದೇಶ ನೀಡಿದೆ.

ಇತ್ತೀಚಿನ ದಿನಗಳಲ್ಲಿ ಇಂತಹ ಕ್ಷುಲ್ಲಕ ಅರ್ಜಿಗಳನ್ನು ಸಲ್ಲಿಸಿ ನ್ಯಾಯಾಲಯದ ಅಮೂಲ್ಯ ಸಮಯ ಹಾಳು ಮಾಡುವ ಜೊತೆಗೆ ನ್ಯಾಯಾಂಗದ ಘನತೆಗೆ ಕುಂದು ತರುವ ಪ್ರಯತ್ನಗಳು ಹೆಚ್ಚುತ್ತಿವೆ.
ಇಂತಹ ಕ್ರಮಗಳನ್ನು ಕಠಿಣವಾಗಿ ಹತ್ತಿಕ್ಕಬೇಕು ಎಂದು ಹೇಳಿರುವ ನ್ಯಾಯಪೀಠ, ನ್ಯಾಯಾಲಯಗಳು ದೇವಾಲಯಗಳಿದ್ದಂತೆ, ಜನರು ನ್ಯಾಯಕ್ಕಾಗಿ ನಂಬಿಕೆ ಇಟ್ಟಿರುವುದು ಕೋರ್ಟ್ಗಳ ಮೇಲೆ. ಆದರೆ ಅದಕ್ಕೆ ಚ್ಯುತಿ ತರುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಕ್ರಮಗಳನ್ನು ಸಹಿಸಲಾಗದು ಎಂದು ನ್ಯಾಯಪೀಠ ಹೇಳಿದೆ.
ಅಲ್ಲದೆ, 2019ರಲ್ಲಿ ರಾಜ್ಯ ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷರನ್ನಾಗಿ ಎನ್.ಸಿ. ಶ್ರೀನಿವಾಸ್ ಮತ್ತು ಆಯುಕ್ತರನ್ನಾಗಿ ಮತ್ತು ನಿವೃತ್ತ ಐಎಫ್ ಎಸ್ ಅಧಿಕಾರಿ ಎಸ್.ಎಂ.ಸೋಮಶೇಖರ್ ಹಾಗೂ ವಕೀಲ ಮಂಜುನಾಥ್ ಅವರನ್ನು ನೇಮಕ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications