ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜಕಾಲುವೆ ನಿರ್ವಹಣೆಗೆ ಸಮರ್ಪಕ ಯೋಜನೆ ರೂಪಿಸಿ: ಹೈಕೋರ್ಟ್‌

By Nayana
|
Google Oneindia Kannada News

ಬೆಂಗಳೂರು, ಜು.3: ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆಗಳ ದುರಸ್ತಿ ಹಾಗೂ ನಿರ್ವಹಣೆ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಬಿಬಿಎಂಪಿ ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿತ್ತು.

ರಾಜಕಾಲುವೆ ನಿರ್ವಹಣೆ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ಪೀಠ, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ರಾಜಕಾಲುವೆ, ನದಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿಲ್ಲ, ಬಿಬಿಎಂಪಿಯು ಬೇಜವಾಬ್ದಾರಿಯನ್ನು ತೋರಿಸುತ್ತಿದೆ ಇದಕ್ಕೆ ಸಮಪರ್ಕ ಯೋಜನೆಯ ಅಗತ್ಯವಿದೆ ಮಳೆ ನೀರುಗಾಲುವೆ ನಿರ್ವಹಣೆಗೆ, ಬೆಂಗಳೂರು ಜಲಮಂಡಳಿ, ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆ ಸೇರಿ ರಾಜಕಾಲುವೆಯನ್ನು ಎರಡು ಭಾಗವಾಗಿ ವಿಂಗಡಿಸುವಂತೆ ಸೂಚನೆ ನೀಡಿದೆ.

ಆಟವಾಡುವಾಗ ಕಾಲುವೆಗೆ ಬಿದ್ದು ಮೂರು ವರ್ಷದ ಮಗು ಸಾವುಆಟವಾಡುವಾಗ ಕಾಲುವೆಗೆ ಬಿದ್ದು ಮೂರು ವರ್ಷದ ಮಗು ಸಾವು

ನಾಗರಿಕ ಪ್ರದೇಶ ಹಾಗೂ ಕೈಗಾರಿಕಾ ಪ್ರದೇಶ ವ್ಯಾಪ್ತಿಗಳ ಬಗ್ಗೆ ಸ್ಪಷ್ಟವಾದ ರೂಪುರೇಷೆ ಸಿದ್ಧಪಡಿಸಿಕೊಳ್ಳಬೇಕು, ಮಳೆಗಾಲ ಆರಂಭವಾಗಿದ್ದು, ಈ ಎಲ್ಲಾ ಕೆಲಸ ಮಾಡಲು ಇದು ಸೂಕ್ತ ಸಮಯವಾಗಿದೆ ಎಂದು ಅಭಿಪ್ರಾಯಪಟ್ಟಿತು.

HC insists BBMP to have proper planning for rain water drain

ಸಾರ್ವಜನಿಕರ ರಕ್ಷಣೆಗೆ ಬಿಬಿಎಂಪಿ ಮೊದಲ ಆದ್ಯತೆ ನೀಡಬೇಕು ಎಂದು ಬಿಬಿಎಂಪಿ ಪರ ವಕೀಲರಿಗೆ ನ್ಯಾಯಾಧೀಶರು ನಿರ್ದೇಶನ ನೀಡಿದರು. ವಿಚಾರಣೆಯನ್ನು ಆಗಸ್ಟ್ ಮೊದಲ ವಾರಕ್ಕೆ ಮುಂದೂಡಲಾಯಿತು.

English summary
Karnataka High court has insisted BBMP to have proper planning for rain water drain. The court has said the authority should have coordination with bengaluru water board to make effective planning on the same.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X