ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಬದಲಾವಣೆ ಬಗ್ಗೆ ಶೈಕ್ಷಣಿಕ ವರ್ಷದ ಆರಂಭದಲ್ಲೇ ನಿರ್ಧರಿಸಿ: ಹೈಕೋರ್ಟ್
ಈಗಾಗಲೇ ಇರುವ ಪ್ರಶ್ನೆ ಪತ್ರಿಕೆಯ ಸ್ವರೂಪವನ್ನು ಬದಲಾಯಿಸಬಾರದೆಂದು 34 ವಿದ್ಯಾರ್ಥಿಗಳು ಹೂಡಿದ್ದ ಅರ್ಜಿಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆಯಾದರೂ ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಹತ್ವದ ನಿರ್ಧಾರ ಕೈಗೊಳ್ಳುವಂತೆ ಕೆ ಎಸ್ ಇಇಬಿ ಸಲಹೆ ನೀಡಿದೆ.
ಬೆಂಗಳೂರು ಮಾರ್ಚ್ 9: ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆಗೆ ಸಂಬಂಧಿಸಿದ ಯಾವುದೇ ನಿರ್ಧಾರಗಳನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ತೆಗೆದುಕೊಳ್ಳಬೇಕು ಎಂದು ಬುಧವಾರ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ(ಕೆ ಎಸ್ ಇಇಬಿ)ಗೆ ಹೈಕೋರ್ಟ್ ಸೂಚಿಸಿದೆ. [ಎಸ್.ಎಸ್.ಎಲ್.ಸಿ. ಪರೀಕ್ಷೆ - ಪೂರ್ವಸಿದ್ಧತೆಗಾಗಿ ಸಹಾಯವಾಣಿ]
ಈಗಾಗಲೇ ಇರುವ ಪ್ರಶ್ನೆ ಪತ್ರಿಕೆಯ ಸ್ವರೂಪವನ್ನು ಬದಲಾಯಿಸಬಾರದೆಂದು 34 ವಿದ್ಯಾರ್ಥಿಗಳು ಹೂಡಿದ್ದ ಅರ್ಜಿಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆಯಾದರೂ ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಹತ್ವದ ನಿರ್ಧಾರ ಕೈಗೊಳ್ಳುವಂತೆ ಕೆ ಎಸ್ ಇಇಬಿ ಸಲಹೆ ನೀಡಿದೆ.

ಅರ್ಜಿಯಲ್ಲೇನಿದೆ?
ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಈಗಾಗಲೇ ಇರುವ ಪದ್ಧತಿ ಎಂದರೆ ಪ್ರಶ್ನೆ ಕಮ್ ಉತ್ತರ ಪತ್ರಿಕೆ. ಆದರೆ ಇನ್ನು ಮುಂದೆ ಪ್ರಶ್ನೆ ಮತ್ತು ಉತ್ತರ ಪತ್ರಿಕೆಯನ್ನು ಪ್ರತ್ಯೇಕವಾಗಿ ನೀಡುವ ನಿರ್ಧಾರವನ್ನು ಕೆಎಸ್ ಇಇಬಿ ಜನವರಿಯಲ್ಲಿ ತೆಗೆದುಕೊಂಡಿತ್ತು. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಇಂಥ ಮಹತ್ವದ ನಿರ್ಧಾರ ತೆಗೆದುಕೊಳ್ಳುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕ ಎಂದು 34 ವಿದ್ಯಾರ್ಥಿಗಳು ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. [ಪ್ರತಿಯೊಬ್ಬವಿದ್ಯಾರ್ಥಿ ಓದಲೇಬೇಕಾದ ಲೇಖನವಿದು]
ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳು ಇನ್ನು ಮುಂದೆ ಪ್ರತ್ಯೇಕವಾಗಿರಲಿವೆ ಎಂಬುದನ್ನು ಬಿಟ್ಟರೆ ಸ್ವರೂಪದಲ್ಲಿ ಯಾವುದೇ ಬದಲಾವಣೆಯಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುವುದಿಲ್ಲ ಎಂದು ಕೆ ಎಸ್ ಇಇಬಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ











Click it and Unblock the Notifications