Get Updates
Get notified of breaking news, exclusive insights, and must-see stories!

ಅರ್ಕಾವತಿ ಬಡಾವಣೆ: ಮೂಲೆ ನಿವೇಶನ ಹರಾಜಿಗೆ ಹೈಕೋರ್ಟ್ ಬ್ರೇಕ್

ಬೆಂಗಳೂರು ಜೂ.2. ಬೆಂಗಳೂರು ನಗರದಲ್ಲಿ ಬಿಡಿಎ ಅಭಿವೃದ್ಧಿಪಡಿಸುತ್ತಿರುವ ಅರ್ಕಾವತಿ ಬಡಾವಣೆಯಲ್ಲಿರುವ ಮೂಲೆ ನಿವೇಶನಗಳ ಹರಾಜಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಅಲ್ಲದೆ, ಬಿಡಿಎಯ ತಪ್ಪಿನಿಂದಾಗಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಯಿಂದ ವಂಚಿತರಾದವರು ಪರ್ಯಾಯ ನಿವೇಶನಗಳಿಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವಾಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಖಾಸಗಿ ರಿಯಲ್ ಎಸ್ಟೇಟ್ ಕಂಪನಿಯಂತೆ ಲಾಭ ಗಳಿಸಲು ಸಾಧ್ಯವಿಲ್ಲ ಎಂದು ಖಾರವಾಗಿ ಹೇಳಿದೆ. ಆ ಮೂಲಕ ನ್ಯಾಯಾಲಯ ನಿವೇಶನ ಹಂಚಿಕೆಗಾಗಿ ಕಾಯುತ್ತಿರುವವರ ಪರವಾಗಿ ನಿಂತಿದೆ.

ಅರ್ಕಾವತಿ ಲೇಔಟ್ 7ನೇ ಬ್ಲಾಕ್‌ನಲ್ಲಿ ಬಿಡಿಎ ನಿವೇಶನ ಹೊಂದಿದ್ದ ಮಂಜುನಾಥ ರಾವ್, ಮಂಜುಳಾ ಆರ್.ಶೆಟ್ಟಿ ಮತ್ತು ಇಂದುಮತಿ ಬಾಬು ಶೇಖರ್ ಅವರು ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ಪರವಾಗಿ ಮಾರಾಟ ಪತ್ರಗಳನ್ನು ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠ ಈ ಮಧ್ಯಂತರ ಆದೇಶ ನೀಡಿದೆ.

HC restrained BDA form auctioning corner sites in the arkavathi layout

"ಅರ್ಕಾವತಿ ಬಡಾವಣೆಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಮೊದಲು ಬಗೆಹರಿಸಬೇಕು, ಹರಾಜು ಖರೀದಿದಾರರಾಗಿ ಹೊಸ ವ್ಯಕ್ತಿಗಳನ್ನು ಕರೆತರುವ ಬದಲು ಈಗಾಗಲೇ ನಿವೇಶನಗಳನ್ನು ಮಂಜೂರು ಮಾಡಿದವರಿಗೆ ನಿವೇಶನ ಹಂಚಿಕೆಗೆ ಆದ್ಯತೆ ನೀಡಬೇಕು. ಬಿಡಿಎಯು ಖಾಸಗಿ ರಿಯಲ್ ಎಸ್ಟೇಟ್ ಕಂಪನಿಯಂತೆ ವರ್ತಿಸಿ, ಕಾರ್ನರ್ ಸೈಟ್‌ಗಳನ್ನು ಹರಾಜು ಮಾಡುವ ಮೂಲಕ ಲಾಭವನ್ನು ಹೆಚ್ಚಿಸಲು ಸಾಧ್ಯವಿಲ್ಲ'' ಎಂದು ಹೇಳಿರುವ ನ್ಯಾಯಪೀಠ ಮೊದಲು ಸದ್ಯ ನಿವೇಶನ ಹಂಚಿಕೆ ವ್ಯಾಜ್ಯಗಳನ್ನು ಪರಿಹರಿಸಲು ಸಹಾನುಭೂತಿ ಹೊಂದಿರಬೇಕು ಎಂದು ಬಿಡಿಎಗೆ ಆದೇಶಿಸಿದೆ.

"ಹಂಚಿಕೆದಾರರಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳು ಪರಿಹಾರಕ್ಕಾಗಿ ಬಾಕಿ ಉಳಿದಿರುವಾಗ ಮತ್ತು ಆ ಹಂಚಿಕೆದಾರರನ್ನು ಕಚೇರಿಯಿಂದ ಕಚೇರಿಗೆ ದಿನವೂ ಎಡತಾಕುತ್ತಿದ್ದಾರೆ ಮತ್ತು ವಿವಿಧ ಪರಿಹಾರಗಳನ್ನು ಕೋರಿ ಈ ನ್ಯಾಯಾಲಯವನ್ನು ಸಂಪರ್ಕಿಸುತ್ತಿರುವಾಗ, ಬಿಡಿಎ ಹೋಗಲು ಅನುಮತಿ ನೀಡಿದರೆ ಅದು ಯಾರಿಗೂ ಪ್ರಯೋಜನವಾಗುವುದಿಲ್ಲ. ಹಾಗಾಗಿ ಮೊದಲು ನಿವೇಶನ ಹಂಚಿಕೆದಾರರಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯುವವರೆಗೆ ಮೂಲೆ ನಿವೇಶನಗಳನ್ನು ಹರಾಜು ಮಾಡಬಾರದು" ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಬಿಡಿಎ ಅರ್ಕಾವತಿ ಬಡಾವಣೆಯಲ್ಲಿ ನಿವೇಶನಗಳನ್ನು ಮೂರನೇ ವ್ಯಕ್ತಿಗಳಿಗೆ ಹರಾಜು ಹಾಕುವ ಬದಲು ನಿವೇಶನ ಹಂಚಿಕೆ ಮಾಡಬಹುದಾಗಿದ್ದು, ಕೆಂಪೇಗೌಡ ಬಡಾವಣೆಯಲ್ಲಿ ಅರ್ಜಿದಾರರಿಗೆ ನಿವೇಶನ ನೀಡುವ ಮುನ್ನ ಬಿಡಿಎ ಈ ಸಾಧ್ಯತೆಯನ್ನು ಪರಿಶೀಲಿಸಬೇಕಿದೆ ಎಂದರು.

ಅರ್ಜಿದಾರರು, ಬಿಡಿಎ ತಮಗೆ ಯಾವುದೇ ನೋಟಿಸ್ ನೀಡದೆ, ಬಡಾವಣೆಯ ಮರುವಿನ್ಯಾಸವನ್ನು ಉಲ್ಲೇಖಿಸಿ ರಸ್ತೆ ರಚನೆಗೆ ತಮ್ಮ ನಿವೇಶನಗಳನ್ನು ಬಳಸಿಕೊಂಡಿದ್ದು, ಈಗ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಪರ್ಯಾಯ ನಿವೇಶನಗಳನ್ನು ಮಂಜೂರು ಮಾಡಲು ಮುಂದಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ದ್ವಿತೀಯ ನಾಲಾ ಬಫರ್ ಝೋನ್‌ನಲ್ಲಿ ನಿವೇಶನಗಳನ್ನು ರೂಪಿಸಿದ ಗಂಭೀರ ಪ್ರಮಾದವನ್ನು ಮನಗಂಡ ಬಿಡಿಎ ತಾನಾಗಿಯೇ ಬಡಾವಣೆ ಯೋಜನೆ ಮಾರ್ಪಾಡು ಮಾಡಿ, ತಾನಾಗಿಯೇ ಅನುಮೋದನೆ ನೀಡಿ, ರಸ್ತೆ ನಿರ್ಮಿಸಿ ನಿವೇಶನಗಳನ್ನು ಅಳಿಸಿ, ಈಗ ಸುಮಾರು 35 ಕಿಲೋಮೀಟರ್ ದೂರದಲ್ಲಿ ಪರ್ಯಾಯ ನಿವೇಶನಗಳನ್ನು ಮಂಜೂರು ಮಾಡಲು ಮುಂದಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

Recommended Video

      C. T. Ravi: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ | #Politics | OneIndia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+