ಅರ್ಕಾವತಿ ಬಡಾವಣೆ: ಮೂಲೆ ನಿವೇಶನ ಹರಾಜಿಗೆ ಹೈಕೋರ್ಟ್ ಬ್ರೇಕ್
ಬೆಂಗಳೂರು ಜೂ.2. ಬೆಂಗಳೂರು ನಗರದಲ್ಲಿ ಬಿಡಿಎ ಅಭಿವೃದ್ಧಿಪಡಿಸುತ್ತಿರುವ ಅರ್ಕಾವತಿ ಬಡಾವಣೆಯಲ್ಲಿರುವ ಮೂಲೆ ನಿವೇಶನಗಳ ಹರಾಜಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಅಲ್ಲದೆ, ಬಿಡಿಎಯ ತಪ್ಪಿನಿಂದಾಗಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಯಿಂದ ವಂಚಿತರಾದವರು ಪರ್ಯಾಯ ನಿವೇಶನಗಳಿಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವಾಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಖಾಸಗಿ ರಿಯಲ್ ಎಸ್ಟೇಟ್ ಕಂಪನಿಯಂತೆ ಲಾಭ ಗಳಿಸಲು ಸಾಧ್ಯವಿಲ್ಲ ಎಂದು ಖಾರವಾಗಿ ಹೇಳಿದೆ. ಆ ಮೂಲಕ ನ್ಯಾಯಾಲಯ ನಿವೇಶನ ಹಂಚಿಕೆಗಾಗಿ ಕಾಯುತ್ತಿರುವವರ ಪರವಾಗಿ ನಿಂತಿದೆ.
ಅರ್ಕಾವತಿ ಲೇಔಟ್ 7ನೇ ಬ್ಲಾಕ್ನಲ್ಲಿ ಬಿಡಿಎ ನಿವೇಶನ ಹೊಂದಿದ್ದ ಮಂಜುನಾಥ ರಾವ್, ಮಂಜುಳಾ ಆರ್.ಶೆಟ್ಟಿ ಮತ್ತು ಇಂದುಮತಿ ಬಾಬು ಶೇಖರ್ ಅವರು ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ಪರವಾಗಿ ಮಾರಾಟ ಪತ್ರಗಳನ್ನು ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠ ಈ ಮಧ್ಯಂತರ ಆದೇಶ ನೀಡಿದೆ.

"ಅರ್ಕಾವತಿ ಬಡಾವಣೆಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಮೊದಲು ಬಗೆಹರಿಸಬೇಕು, ಹರಾಜು ಖರೀದಿದಾರರಾಗಿ ಹೊಸ ವ್ಯಕ್ತಿಗಳನ್ನು ಕರೆತರುವ ಬದಲು ಈಗಾಗಲೇ ನಿವೇಶನಗಳನ್ನು ಮಂಜೂರು ಮಾಡಿದವರಿಗೆ ನಿವೇಶನ ಹಂಚಿಕೆಗೆ ಆದ್ಯತೆ ನೀಡಬೇಕು. ಬಿಡಿಎಯು ಖಾಸಗಿ ರಿಯಲ್ ಎಸ್ಟೇಟ್ ಕಂಪನಿಯಂತೆ ವರ್ತಿಸಿ, ಕಾರ್ನರ್ ಸೈಟ್ಗಳನ್ನು ಹರಾಜು ಮಾಡುವ ಮೂಲಕ ಲಾಭವನ್ನು ಹೆಚ್ಚಿಸಲು ಸಾಧ್ಯವಿಲ್ಲ'' ಎಂದು ಹೇಳಿರುವ ನ್ಯಾಯಪೀಠ ಮೊದಲು ಸದ್ಯ ನಿವೇಶನ ಹಂಚಿಕೆ ವ್ಯಾಜ್ಯಗಳನ್ನು ಪರಿಹರಿಸಲು ಸಹಾನುಭೂತಿ ಹೊಂದಿರಬೇಕು ಎಂದು ಬಿಡಿಎಗೆ ಆದೇಶಿಸಿದೆ.
"ಹಂಚಿಕೆದಾರರಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳು ಪರಿಹಾರಕ್ಕಾಗಿ ಬಾಕಿ ಉಳಿದಿರುವಾಗ ಮತ್ತು ಆ ಹಂಚಿಕೆದಾರರನ್ನು ಕಚೇರಿಯಿಂದ ಕಚೇರಿಗೆ ದಿನವೂ ಎಡತಾಕುತ್ತಿದ್ದಾರೆ ಮತ್ತು ವಿವಿಧ ಪರಿಹಾರಗಳನ್ನು ಕೋರಿ ಈ ನ್ಯಾಯಾಲಯವನ್ನು ಸಂಪರ್ಕಿಸುತ್ತಿರುವಾಗ, ಬಿಡಿಎ ಹೋಗಲು ಅನುಮತಿ ನೀಡಿದರೆ ಅದು ಯಾರಿಗೂ ಪ್ರಯೋಜನವಾಗುವುದಿಲ್ಲ. ಹಾಗಾಗಿ ಮೊದಲು ನಿವೇಶನ ಹಂಚಿಕೆದಾರರಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯುವವರೆಗೆ ಮೂಲೆ ನಿವೇಶನಗಳನ್ನು ಹರಾಜು ಮಾಡಬಾರದು" ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಬಿಡಿಎ ಅರ್ಕಾವತಿ ಬಡಾವಣೆಯಲ್ಲಿ ನಿವೇಶನಗಳನ್ನು ಮೂರನೇ ವ್ಯಕ್ತಿಗಳಿಗೆ ಹರಾಜು ಹಾಕುವ ಬದಲು ನಿವೇಶನ ಹಂಚಿಕೆ ಮಾಡಬಹುದಾಗಿದ್ದು, ಕೆಂಪೇಗೌಡ ಬಡಾವಣೆಯಲ್ಲಿ ಅರ್ಜಿದಾರರಿಗೆ ನಿವೇಶನ ನೀಡುವ ಮುನ್ನ ಬಿಡಿಎ ಈ ಸಾಧ್ಯತೆಯನ್ನು ಪರಿಶೀಲಿಸಬೇಕಿದೆ ಎಂದರು.
ಅರ್ಜಿದಾರರು, ಬಿಡಿಎ ತಮಗೆ ಯಾವುದೇ ನೋಟಿಸ್ ನೀಡದೆ, ಬಡಾವಣೆಯ ಮರುವಿನ್ಯಾಸವನ್ನು ಉಲ್ಲೇಖಿಸಿ ರಸ್ತೆ ರಚನೆಗೆ ತಮ್ಮ ನಿವೇಶನಗಳನ್ನು ಬಳಸಿಕೊಂಡಿದ್ದು, ಈಗ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಪರ್ಯಾಯ ನಿವೇಶನಗಳನ್ನು ಮಂಜೂರು ಮಾಡಲು ಮುಂದಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ದ್ವಿತೀಯ ನಾಲಾ ಬಫರ್ ಝೋನ್ನಲ್ಲಿ ನಿವೇಶನಗಳನ್ನು ರೂಪಿಸಿದ ಗಂಭೀರ ಪ್ರಮಾದವನ್ನು ಮನಗಂಡ ಬಿಡಿಎ ತಾನಾಗಿಯೇ ಬಡಾವಣೆ ಯೋಜನೆ ಮಾರ್ಪಾಡು ಮಾಡಿ, ತಾನಾಗಿಯೇ ಅನುಮೋದನೆ ನೀಡಿ, ರಸ್ತೆ ನಿರ್ಮಿಸಿ ನಿವೇಶನಗಳನ್ನು ಅಳಿಸಿ, ಈಗ ಸುಮಾರು 35 ಕಿಲೋಮೀಟರ್ ದೂರದಲ್ಲಿ ಪರ್ಯಾಯ ನಿವೇಶನಗಳನ್ನು ಮಂಜೂರು ಮಾಡಲು ಮುಂದಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
Recommended Video
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications