ದತ್ತಪೀಠ ವಿವಾದ: ಅರ್ಜಿ ವಿಚಾರಣೆ ನಡೆಸಲು ಹೈಕೋರ್ಟ್ ತೀರ್ಮಾನ
ಬೆಂಗಳೂರು, ಅಕ್ಟೋಬರ್ 26: ದಶಕಗಳ ಕಾಲದಿಂದ ವಿವಾದದ ಗೂಡಾಗಿರುವ ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ಗಿರಿ ಕ್ಷೇತ್ರದ ವಿವಾದ ಕುರಿತಂತೆ ದಶಕಗಳ ಬಳಿಕ ಮತ್ತೆ ವಿಚಾರಣೆ ನಡೆಸಲು ಹೈಕೋರ್ಟ್ ಮುಂದಾಗಿದೆ.
ಶುಕ್ರವಾರ ಈ ಕುರಿತು ಹೈಕೋರ್ಟ್ನಲ್ಲಿ ನಡೆದ ವಿಚಾರಣೆ ವೇಳೆ, ಸುಪ್ರೀಂಕೋರ್ಟ್ನಲ್ಲಿ ಈಗಾಗಲೇ ನಡೆಯುತ್ತಿರುವ ನ್ಯಾಯಾಂಗ ನಿಂದನಾ ಅರ್ಜಿಯನ್ನು ಪರಿಗಣಿಸಿಕೊಂಡೇ ಅರ್ಜಿ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿತು.
ಸುಪ್ರೀಂಕೋರ್ಟ್ನಲ್ಲಿರುವ ನ್ಯಾಯಾಂಗ ನಿಂದನೆ ಅರ್ಜಿಯು ಈ ವಿಚಾರಣೆಗೆ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದೆ, ಅರ್ಜಿದಾರರು ಹಾಗೂ ಸರ್ಕಾರಿ ವಕೀಲರ ಅಭಿಪ್ರಾಯ ದಾಖಲಿಸಿಕೊಂಡು ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.

ಸೂಫಿ ದರ್ಗಾ ಎಂದು ಕ್ರೋಢೀಕರಿಸಿ ಅಲ್ಲಿ ನಡೆಯಬೇಕಾದ ಧಾರ್ಮಿಕ ಮತ್ತು ಆಡಳಿತಾತ್ಮಕ ವಿಧಿವಿಧಾನಗಳ ಬಗ್ಗೆ 1989ರಲ್ಲಿ ಧಾರ್ಮಿಕ ದತ್ತಿ ಆಯುಕ್ತರು ನೀಡಿದ್ದ ಆದೇಶವನ್ನು 2007 ಫೆಬ್ರವರಿ 14ರಂದು ರದ್ದುಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕ್ಷೇತ್ರದ ಧಾರ್ಮಿಕ ಸ್ವರೂಪದ ಬಗ್ಗೆ ಹೊಸದಾಗಿ ಸಾರ್ವಜನಿಕ ವಿಚಾರಣೆ ನಡೆಸಲು ಆದೇಶಿಸಿತ್ತು. 2008ರಲ್ಲಿ ರಾಜ್ಯ ಸರಕಾರದ ಅಹವಾಲು ರದ್ದುಗೊಳಿಸಿದ ಹೈಕೋರ್ಟ್ ದ್ವಿಸದಸ್ಯ ಪೀಠ ಏಕಸದಸ್ಯ ಪೀಠದ ಆದೇಶ ಎತ್ತಿ ಹಿಡಿದಿತ್ತು.
ಈ ಆದೇಶದ ವಿರುದ್ಧ ಕೋಮು ಸೌಹಾರ್ದ ವೇದಿಕೆ ಮತ್ತು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗಳು ಜಂಟಿಯಾಗಿ, ಶಾಖಾದ್ರಿ ಪ್ರತ್ಯೇಕವಾಗಿ 2008 ಸೆಪ್ಟಂಬರ್ನಲ್ಲಿ ಸುಪ್ರೀಂ ಕೋರ್ಟ್ಗೆ ಅಹವಾಲು ಸಲ್ಲಿಸಿದ್ದರು. ಈ ಅಹವಾಲು ಆಲಿಸಿ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ವಿವಾದಕ್ಕೆ ಅಂತಿಮ ತೆರೆ ಎಳೆಯುತ್ತದೆ ಎಂಬುದು ಎಲ್ಲರ ನಂಬಿಕೆಯಾಗಿತ್ತು. ಆದರೆ, ವಿವಾದ ಪರಿಹರಿಸುವ ಜವಾಬ್ದಾರಿಯನ್ನು ನ್ಯಾಯಾಲಯ ರಾಜ್ಯ ಸರಕಾರಕ್ಕೇ ವಹಿಸಿತ್ತು.
ಇದೀಗ 10 ವರ್ಷಗಳ ನಂತರ ವಿವಾದದ ವಿಚಾರಣೆ ನಡೆಸಲು ಹೈಕೋರ್ಟ್ ತೀರ್ಮಾನಿಸಿದೆ. ಕಳೆದ ಎರಡು ತಿಂಗಳ ಹಿಂದೆ ಎರಡೂ ಧರ್ಮದ ಅರ್ಚಕರಿಗೆ ವಿಧಿ ವಿಧಾನ ನಡೆಸಲು ಹೈಕೋರ್ಟ್ ಸಲಹೆ ನೀಡಿತ್ತು. ಈ ಕುರಿತು ಸರ್ಕಾರದೊಂದಿಗೆ ಚರ್ಚಿಸುತ್ತೇವೆ ಎಂದು ತಿಳಿಸಿತ್ತು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications