ದತ್ತಪೀಠ ವಿವಾದ: ಅರ್ಜಿ ವಿಚಾರಣೆ ನಡೆಸಲು ಹೈಕೋರ್ಟ್ ತೀರ್ಮಾನ
ಬೆಂಗಳೂರು, ಅಕ್ಟೋಬರ್ 26: ದಶಕಗಳ ಕಾಲದಿಂದ ವಿವಾದದ ಗೂಡಾಗಿರುವ ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ಗಿರಿ ಕ್ಷೇತ್ರದ ವಿವಾದ ಕುರಿತಂತೆ ದಶಕಗಳ ಬಳಿಕ ಮತ್ತೆ ವಿಚಾರಣೆ ನಡೆಸಲು ಹೈಕೋರ್ಟ್ ಮುಂದಾಗಿದೆ.
ಶುಕ್ರವಾರ ಈ ಕುರಿತು ಹೈಕೋರ್ಟ್ನಲ್ಲಿ ನಡೆದ ವಿಚಾರಣೆ ವೇಳೆ, ಸುಪ್ರೀಂಕೋರ್ಟ್ನಲ್ಲಿ ಈಗಾಗಲೇ ನಡೆಯುತ್ತಿರುವ ನ್ಯಾಯಾಂಗ ನಿಂದನಾ ಅರ್ಜಿಯನ್ನು ಪರಿಗಣಿಸಿಕೊಂಡೇ ಅರ್ಜಿ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿತು.
ಸುಪ್ರೀಂಕೋರ್ಟ್ನಲ್ಲಿರುವ ನ್ಯಾಯಾಂಗ ನಿಂದನೆ ಅರ್ಜಿಯು ಈ ವಿಚಾರಣೆಗೆ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದೆ, ಅರ್ಜಿದಾರರು ಹಾಗೂ ಸರ್ಕಾರಿ ವಕೀಲರ ಅಭಿಪ್ರಾಯ ದಾಖಲಿಸಿಕೊಂಡು ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.

ಸೂಫಿ ದರ್ಗಾ ಎಂದು ಕ್ರೋಢೀಕರಿಸಿ ಅಲ್ಲಿ ನಡೆಯಬೇಕಾದ ಧಾರ್ಮಿಕ ಮತ್ತು ಆಡಳಿತಾತ್ಮಕ ವಿಧಿವಿಧಾನಗಳ ಬಗ್ಗೆ 1989ರಲ್ಲಿ ಧಾರ್ಮಿಕ ದತ್ತಿ ಆಯುಕ್ತರು ನೀಡಿದ್ದ ಆದೇಶವನ್ನು 2007 ಫೆಬ್ರವರಿ 14ರಂದು ರದ್ದುಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕ್ಷೇತ್ರದ ಧಾರ್ಮಿಕ ಸ್ವರೂಪದ ಬಗ್ಗೆ ಹೊಸದಾಗಿ ಸಾರ್ವಜನಿಕ ವಿಚಾರಣೆ ನಡೆಸಲು ಆದೇಶಿಸಿತ್ತು. 2008ರಲ್ಲಿ ರಾಜ್ಯ ಸರಕಾರದ ಅಹವಾಲು ರದ್ದುಗೊಳಿಸಿದ ಹೈಕೋರ್ಟ್ ದ್ವಿಸದಸ್ಯ ಪೀಠ ಏಕಸದಸ್ಯ ಪೀಠದ ಆದೇಶ ಎತ್ತಿ ಹಿಡಿದಿತ್ತು.
ಈ ಆದೇಶದ ವಿರುದ್ಧ ಕೋಮು ಸೌಹಾರ್ದ ವೇದಿಕೆ ಮತ್ತು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗಳು ಜಂಟಿಯಾಗಿ, ಶಾಖಾದ್ರಿ ಪ್ರತ್ಯೇಕವಾಗಿ 2008 ಸೆಪ್ಟಂಬರ್ನಲ್ಲಿ ಸುಪ್ರೀಂ ಕೋರ್ಟ್ಗೆ ಅಹವಾಲು ಸಲ್ಲಿಸಿದ್ದರು. ಈ ಅಹವಾಲು ಆಲಿಸಿ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ವಿವಾದಕ್ಕೆ ಅಂತಿಮ ತೆರೆ ಎಳೆಯುತ್ತದೆ ಎಂಬುದು ಎಲ್ಲರ ನಂಬಿಕೆಯಾಗಿತ್ತು. ಆದರೆ, ವಿವಾದ ಪರಿಹರಿಸುವ ಜವಾಬ್ದಾರಿಯನ್ನು ನ್ಯಾಯಾಲಯ ರಾಜ್ಯ ಸರಕಾರಕ್ಕೇ ವಹಿಸಿತ್ತು.
ಇದೀಗ 10 ವರ್ಷಗಳ ನಂತರ ವಿವಾದದ ವಿಚಾರಣೆ ನಡೆಸಲು ಹೈಕೋರ್ಟ್ ತೀರ್ಮಾನಿಸಿದೆ. ಕಳೆದ ಎರಡು ತಿಂಗಳ ಹಿಂದೆ ಎರಡೂ ಧರ್ಮದ ಅರ್ಚಕರಿಗೆ ವಿಧಿ ವಿಧಾನ ನಡೆಸಲು ಹೈಕೋರ್ಟ್ ಸಲಹೆ ನೀಡಿತ್ತು. ಈ ಕುರಿತು ಸರ್ಕಾರದೊಂದಿಗೆ ಚರ್ಚಿಸುತ್ತೇವೆ ಎಂದು ತಿಳಿಸಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications