ಚಿಕಿತ್ಸೆ ವೇಳೆ ಎಚ್ಐವಿ: ಕೇಸ್ ದಾಖಲಿಸದ ಪೊಲೀಸರಿಗೆ ಕೋರ್ಟ್ ತರಾಟೆ
ಬೆಂಗಳೂರು, ಏಪ್ರಿಲ್ 13: ಚಿಕಿತ್ಸೆ ವೇಳೆ ನೀಡಿದ ರಕ್ತದಿಂದ ತಮಗೆ ಎಚ್ಐವಿ ಸೋಂಕು ತಗುಲಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ್ದ ದೂರಿನ ಸಂಬಂಧ ಎಫ್ಐಆರ್ ದಾಖಲಿಸಲು ವಿಳಂಬ ಮಾಡಿರುವ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಪೊಲೀಸರು ಎಫ್ಐಆರ್ ದಾಖಲಿಸಲು ವಿಳಂಬ ಮಾಡಿದ್ದಕ್ಕೆ ಮತ್ತು ಮಡಿವಾಳ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಕುರಿತು ಸರ್ಕಾರಿ ವಕೀಲರನ್ನು ತರಾಟೆಗೆ ತೆಗೆದುಕೊಂಡ ಪೀಠ, ನೀವು ನೀಡುತ್ತಿರುವ ಸಮಜಾಯಿಷಿ ತೃಪ್ತಿಕರವಾಗಿಲ್ಲ. ಒಂದಕ್ಕೊಂದು ತಾಳೆಯಾಗದ ವಿವರಣೆ ನೀಡುತ್ತಿದ್ದೀರಿ. ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ, ವಸ್ತುನಿಷ್ಠವಾಗಿ ಮತ್ತು ಸಮರ್ಥಚಾಗಿ ನಡೆಯಬೇಕು. ಹೀಗಾಗಿ ಕೋರ್ಟ್ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಯಲಿ. ಈ ಸಂಬಂಧ ಪ್ರತಿ 15 ದಿನಗಳಿಗೊಮ್ಮೆ ತನಿಖೆಯ ವರದಿಯನ್ನು ನ್ಯಾಯಾಲಯಕ್ಕೆ ನೀಡಬೇಕು ಎಂದು ಆದೇಶಿಸಿ ವಿಚಾರಣೆ ಮುಂದೂಡಿದೆ.

ಲಕ್ಕಸಂದ್ರದ 45 ವರ್ಷದ ಮಹಿಳೆಯೊಬ್ಬರು ಪ್ರತಿಷ್ಠಿತ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ 2014ರಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಅವರಿಗೆ ರಕ್ತ ನೀಡಲಾಗಿತ್ತು. ಆಸ್ಪತ್ರೆಯಲ್ಲಿ ನೀಡಿದ ರಕ್ತದಿಂದ ನನಗೆ ಎಚ್ಐವಿ ಸೋಂಕು ತಗುಲಿದೆ ಎಂಬುದು ಮಹಿಳೆಯ ಆಕ್ಷೇಪಣೆ. ಈ ಕುರಿತಂತೆ ನಾನು ನೀಡಿದ ದೂರನ್ನು ಪೊಲೀಸರು ತಕ್ಷಣ ಸ್ವೀಕರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಮತ್ತು ಎಫ್ಐಆರ್ ದಾಖಲಿಸಲು ವಿಳಂಬ ಮಾಡಲಾಗಿದೆ ಎಂದು ದೂರಿರುವ ಮಹಿಳೆ, ಈ ಕುರಿತು ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪೊಲೀಸರು ನನ್ನ ಅಹವಾಲಿಗೆ ಮಾನ್ಯತೆ ನೀಡುತ್ತಿಲ್ಲ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿದ್ದಾರೆ.
More From
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications