ಬೆಂ.ವಿ.ವಿ. ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ನೇಮಕ ರದ್ದು ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು, ಮಾರ್ಚ್ 16: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಕೆ.ಆರ್. ವೇಣುಗೋಪಾಲ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯಪೀಠದ ಆದೇಶವನ್ನು ವಿಭಾಗೀಯಪೀಠ ಬುಧವಾರ ಎತ್ತಿಹಿಡಿದಿದೆ.
ಇದರಿಂದಾಗಿ ಕುಲಪತಿ ವೇಣುಗೋಪಾಲ್ ತಮ್ಮ ಹುದ್ದೆ ತ್ಯಜಿಸಬೇಕಾಗುತ್ತದೆ. ನ್ಯಾಯಾಲಯದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಅವರು ಈವರೆಗೆ ಕುಲಪತಿಯಾಗಿ ಮುಂದುವರಿದಿದ್ದರು. ಅವರ ಸೇವಾವಧಿ ಜೂನ್ 12ರವರೆಗೆ ಇದೆ, ಆದರೂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹುದ್ದೆ ತ್ಯಜಿಸಬೇಕು, ಇಲ್ಲವೇ ಸುಪ್ರೀಂಕೋರ್ಟ್ ಮೊರೆ ಹೋಗಿ ಕೂಡಲೇ ಹೈಕೋರ್ಟ್ ವಿಭಾಗೀಯಪೀಠದ ಆದೇಶಕ್ಕೆ ತಡೆಯಾಜ್ಞೆ ತರಬೇಕಾದ ಅನಿವಾರ್ಯತೆ ಎದುರಾಗಿದೆ.
ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಬೆಂಗಳೂರು ವಿಶ್ವವಿದ್ಯಾಲಯ, ರಾಜ್ಯಪಾಲರ ಕಚೇರಿ, ಡಾ.ಕೆ. ಆರ್. ವೇಣುಗೋಪಾಲ್ ಮತ್ತು ರಾಜ್ಯ ಉನ್ನತ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರತ್ಯೇಕ ನಾಲ್ಕು ಮೇಲ್ಮನವಿ ಕುರಿತು ನ್ಯಾಯಮೂರ್ತಿ ಎಸ್.ಸುಜಾತ ಮತ್ತು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರಿದ್ದ ವಿಭಾಗೀಯಪೀಠ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು.

ಬುಧವಾರ ನ್ಯಾಯಪೀಠ ತೀರ್ಪು ಪ್ರಕಟಿಸಿದ್ದು, ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿ ಏಕಸದಸ್ಯಪೀಠದ ಆದೇಶ ಎತ್ತಿಹಿಡಿದಿದೆ.
ವಿಭಾಗೀಯಪೀಠದ ತೀರ್ಪು ಏನು?: ''ನಾಲ್ಕು ಮೇಲ್ಮನವಿಗಳನ್ನು ವಜಾಗೊಳಿಸಿರುವ ವಿಭಾಗೀಯಪೀಠ, 2018ರ ಜೂ.12ರಂದು ನೇಮಕ ಆದೇಶ ಹೊರಡಿಸಲಾಗಿದೆ. ಅದಕ್ಕೆ ಸರ್ಕಾರದ ಅನುಮೋದನೆ ಇರಲಿಲ್ಲ. ತದ ನಂತರ 2018ರ ಜೂ.28ರಂದು ಸರ್ಕಾರ ಅನುಮೋದನೆ ನೀಡಿದೆ. ಇದು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ-2000ರ ಸೆಕ್ಷನ್ 14(4)ರ ಸ್ಪಷ್ಟ ಉಲ್ಲಂಘನೆಯಾಗಿದೆ'' ಎಂದು ಆದೇಶಿಸಿದೆ.
ಅಲ್ಲದೆ, ಸರ್ಕಾರದ ಅನುಮೋದನೆ ಪಡೆದ ನಂತರವೇ ನೇಮಕ ಆದೇಶ ಹೊರಡಿಸಬೇಕಿದೆ. ಅದು ಬಿಟ್ಟು ನೇಮಕಾತಿ ಆದೇಶ ಹೊರಡಿಸಿದ ನಂತರ ಸರ್ಕಾರದ ಅನುಮೋದನೆ ನೀಡಿದರೆ, ಅದು ನೇಮಕದಲ್ಲಿ ಲೋಪವಾದಂತಾಗುತ್ತದೆ. ಆದ್ದರಿಂದ ವೇಣುಗೋಪಾಲ್ ಅವರನ್ನು ಕುಲಪತಿಗೆ ನೇಮಿಸಿದ ಆದೇಶ ರದ್ದುಪಡಿಸಿ ಏಕಸದಸ್ಯಪೀಠ ನೀಡಿರುವ ತೀರ್ಪು ಸರಿ ಇದ್ದು, ಅದರಲ್ಲಿ ಹಸ್ತಕ್ಷೇಪ ಮಾಡಲಾಗದು ಎಂದು ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಡಾ.ಕೆ.ಆರ್.ವೇಣುಗೋಪಾಲ್ ಅವರನ್ನು ಕುಲಪತಿ ಹುದ್ದೆಗೆ ನಾಲ್ಕು ವರ್ಷ ಅವಧಿ ಅಥವಾ ಅವರಿಗೆ 67 ವರ್ಷ ತುಂಬುವವರೆಗೆ, ಈ ಎರಡರಲ್ಲಿ ಯಾವುದು ಮೊದಲು ಘಟಿಸುವುದಕ್ಕೆ ಅಲ್ಲಿಯವರೆಗೆ ನೇಮಕ ಮಾಡಿ 2018ರ ಜೂ.12ರ ಆದೇಶಿಸಲಾಗಿತ್ತು. ಏಕ ಸದಸ್ಯ ನ್ಯಾಯಪೀಠವು 2019ರ ಸೆ.24ರಂದು ವೇಣುಗೋಪಾಲ್ ನೇಮಕ ರದ್ದುಪಡಿಸಿತ್ತು. ಆ ಆದೇಶಕ್ಕೆ ವಿಭಾಗೀಯಪೀಠ ತಡೆಯಾಜ್ಞೆ ನೀಡಿತ್ತು.
ಡಾ.ಕೆ.ಆರ್. ವೇಣುಗೋಪಾಲ್ ನೇಮಕ ಪ್ರಶ್ನಿಸಿ ನಿವೃತ್ತ ಪ್ರೊ.ಸಂಗಮೇಶ್ ಪಾಟೀಲ್ ಹೈಕೋರ್ಟ್ ಮೊರೆ ಹೋಗಿದ್ದರು, ಸರ್ಕಾರದ ಅನುಮೋದನೆ ಇಲ್ಲದೆಯೇ ಡಾ.ವೇಣುಗೋಪಾಲ್ ಅವರನ್ನು ಕುಲಪತಿ ಹುದ್ದೆಗೆ ನೇಮಿಸಿರುವುದು ಕಾನೂನು ಬಾಹಿರ ಎಂದು ವಾದಿಸಿದ್ದರು. ಈ ವಾದ ಪುರಸ್ಕರಿಸಿದ್ದ ಏಕ ಸದಸ್ಯ ಪೀಠ, ಡಾ.ವೇಣುಗೋಪಾಲ್ ಅವರನ್ನು ಕುಲಪತಿಗೆ ನೇಮಿಸಿದ್ದ ಆದೇಶ ರದ್ದುಪಡಿಸಿತ್ತು.
Recommended Video
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications