ಚುನಾವಣೆ ಮೈತ್ರಿ ಬಗ್ಗೆ ದೇವೇಗೌಡರು ನೀಡಿದ ಸುಳಿವೇನು?
ಬೆಂಗಳೂರು, ಡಿ. 20: ಎಂಎಲ್ಸಿ ಎಲೆಕ್ಷನ್ ನಲ್ಲಿ ಯಾವುದೇ ಪಕ್ಷದೊಡನೆ ಮೈತ್ರಿ ಸಾಧ್ಯತೆ ಇಲ್ಲ. ಆದರೆ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಎಡಪಕ್ಷಗಳ ಜೊತೆ ಮೈತ್ರಿ ಸಾಧ್ಯತೆ ಬಗ್ಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.
ಸಿಪಿಐ, ಸಿಪಿಎಂ ಹಾಗೂ ಬಿಎಸ್ಪಿಯೊಂದಿಗೆ ಸೀಟು ಹೊಂದಾಣಿಕೆಗೆ ಜೆದಿಎಸ್ ಸಿದ್ಧವಿದೆ ಎಂದು ಪದ್ಮನಾಭ ನಗರದಲ್ಲಿನ ತನ್ನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದರು. ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲದೆ ಮುಂಬರುವ ವಿಧಾನಸಭೆ ಚುನಾವ ಣೆಯಲ್ಲಿಯೂ ಈ ಮೂರು ಪಕ್ಷಗಳೊಂದಿಗೆ ಚುನಾವಣಾ ಮೈತ್ರಿಗೆ ಜೆಡಿಎಸ್ ಸಮಾಲೋಚನೆ ನಡೆಸಲಿದೆ ಎಂದರು.[ಪರಿಷತ್ ಚುನಾವಣೆಯಲ್ಲಿ ಮೈತ್ರಿ ಇಲ್ಲ ಅಂದ್ರು ಗೌಡರು]

ಕೇರಳ ರಾಜ್ಯದಲ್ಲಿನ ಇನ್ನು 90 ದಿನಗಳಲ್ಲಿ ವಿಧಾನಸಭಾ ಚುನಾವಣೆ ಎದುರಾಗಲಿದ್ದು, ಆ ಸಂದರ್ಭದಲ್ಲಿ ಜೆಡಿಎಸ್, ಎಡಪಂಥೀಯ ಪಕ್ಷಗಳೊಂದಿಗೆ ಮೈತ್ರಿಯ ಬಗ್ಗೆ ಚರ್ಚೆ ನಡೆಸಲಿದೆ ಎಂದು ದೇವೇಗೌಡರು ಸುಳಿವು ನೀಡಿದರು.
ಜನತಾ ಪರಿವಾರ ಒಗ್ಗೂಡುವ ಬಗ್ಗೆ ಮಾತನಾಡಿದ ದೇವೇಗೌಡ, ಈ ವಿಷಯ ಈಗಲೇ ಚರ್ಚೆಯಾಗುವುದು ಬೇಡ. ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತದೆ. ಜಾತ್ಯತೀತ ಶಕ್ತಿಗಳು ಒಂದಾಗಲು ಪ್ರಮಾಣಿಕ ಪ್ರಯತ್ನ ಹಾಗೂ ಸಮಾನ ಮನಸ್ಕರು ಬೇಕು. ಅನೇಕ ವರ್ಷಗಳಿಂದ ಈ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಈ ಬಗ್ಗೆ ಆತುರದ ನಿರ್ಧಾರ ಅಥವಾ ಘೋಷಣೆ ಅಪ್ರಸ್ತುತ. ಜನತಾ ಪರಿವಾರ ಒಗ್ಗೂಡುವುದಂತೂ ಸತ್ಯ ಎಂದರು. (ಒನ್ ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications