ಮಗ ಆಗಲಿ, ಮೊಮ್ಮಗನಾಗಲಿ, ತಪ್ಪು ಮಾಡಿದ್ರೆ ಶಿಸ್ತುಕ್ರಮ: ಎಚ್ಡಿಡಿ
ಬೆಂಗಳೂರು, ಜುಲೈ 07: 'ಮಗ ಆಗಲಿ, ಮೊಮ್ಮಗನಾಗಲಿ, ತಪ್ಪು ಮಾಡಿದ್ರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು' ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಶುಕ್ರವಾರ ಸಂಜೆ ವೇಳೆಗೆ ಪದ್ಮನಾಭನಗರದ ಸ್ವಗೃಹದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹುಣಸೂರಿನಲ್ಲಿ ಪ್ರಜ್ವಲ್ ರೇವಣ್ಣ ನೀಡಿದ್ದ ಹೇಳಿಕೆಗೆ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಶುಕ್ರವಾರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯವಾಗಿ ಬೆಳೆಯಬೇಕೆಂಬ ಉದ್ದೇಶ ಪ್ರಜ್ವಲ್ ರೇವಣ್ಣಗಿದೆ, ಭವಾನಿ, ಅನಿತಾ ಕುಮಾರಸ್ವಾಮಿ ಇಬ್ಬರೂ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಹೇಳಿದರು.
' ಸೂಟ್ ಕೇಸ್ ತಂದವರಿಗೆ ಮಾತ್ರ ಮುಂದಿನ ಖುರ್ಚಿ ನೀಡುತ್ತಾರೆ. ಪ್ರಾಮಾಣಿಕರಿಗೆ ಹಿಂದಿನ ಖುರ್ಚಿ ನೀಡುತ್ತಾರೆ' ಎಂದು ತಮ್ಮ ಪಕ್ಷದ ವಿರುದ್ಧ ಪ್ರಜ್ವಲ್ ಅವರು ಹುಣಸೂರಿನಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚು ಸೀಟು ಗೆಲ್ಲಿಸಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡುವುದೇ ನನ್ನ ಗುರಿ. ಹಾಗಾಗಿ ನನ್ನ ಬೆಂಬಲಿಗರು, ಅಭಿಮಾನಿಗಳು ಸಹಕರಿಸಿ ಎಂದು ಹೇಳಿದ್ದರು.
'ಸೂಟ್ ಕೇಸ್ ಸಂಸ್ಕೃತಿ ಹೇಳಿಕೆ ಸಹಿಸಲು ಸಾಧ್ಯವಿಲ್ಲ. ನಿಷ್ಠಾವಂತರನ್ನು ಎಂದಿಗೂ ಪಕ್ಷ ಕೈಬಿಟ್ಟಿಲ್ಲ. ಕಾರ್ಯಕರ್ತರ ಬೆಂಬಲ ಇದ್ದವರಿಗೆ ಮಾತ್ರ ಟಿಕೆಟ್ ನೀಡಲಾಗುವುದು. ಹಾಸನದಲ್ಲಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ' ಎಂದು ದೇವೇಗೌಡರು ಹೇಳಿದರು.
ಜೆಡಿಎಸ್ ವರಿಷ್ಠ ದೇವೇಗೌಡ ಅವರ ಸಮ್ಮುಖದಲ್ಲಿ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಜಾತ್ಯಾತೀತ ಜನತಾದಳಕ್ಕೆ ಸೇರಿ ಇಂದಿಗೆ ಸುಮಾರು ಎರಡೂವರೆ ವರ್ಷಗಳು ಮಾತ್ರ ಕಳೆದಿವೆ. ಇಂಜಿನಿಯರಿಂಗ್ ಓದಿರುವ ಪ್ರಜ್ವಲ್ ಅವರು ರಾಜಕೀಯದಲ್ಲಿ ಅನುಭವ ಪಡೆದು ನಂತರ ಚುನಾವಣೆ ಎದುರಿಸಲಿ ಎಂಬುದು ದೇವೇಗೌಡರ ಆಲೋಚನೆಯಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications