ದೇವೇಗೌಡರ ಬಲಗಾಲಿನ ಮಂಡಿ ಟ್ವಿಸ್ಟ್: ಅಪಾಯವಿಲ್ಲ ಎಂದ ವೈದ್ಯರು
ಬೆಂಗಳೂರು, ಫೆಬ್ರವರಿ 2: ಬಾತ್ರೂಮಿನಲ್ಲಿ ಕಾಲು ಜಾರಿ ಬಿದ್ದು ಪೆಟ್ಟುಮಾಡಿಕೊಂಡಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ದೇಹಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ದೇವೇಗೌಡ ಅವರು ತಮ್ಮ ನಿವಾಸಕ್ಕೆ ಮರಳಿದ್ದಾರೆ.
ಬಿದ್ದ ರಭಸಕ್ಕೆ ದೇವೇಗೌಡ ಅವರ ಬಲಗಾಲಿನ ಮಂಡಿ ಸ್ವಲ್ಪ ಟ್ವಿಸ್ಟ್ ಆಗಿತ್ತು. ಎಂಆರ್ಐ ಸ್ಕ್ಯಾನ್ ಮಾಡಲಾಗಿದೆ. ಕಾಲಿನ ಮೂಳೆ ಮುರಿತ ಉಂಟಾಗಿಲ್ಲ. ಹೀಗಾಗಿ ಯಾವುದೇ ಅಪಾಯವಿಲ್ಲ ಎಂದು ಜಯದೇವ ಆಸ್ಪತ್ರೆಯ ಡಾ. ಮಂಜುನಾಥ್ ತಿಳಿಸಿದ್ದಾರೆ.
ದೇವೇಗೌಡ ಅವರು ಇನ್ನು 3-4 ದಿನ ಮನೆಯಲ್ಲಿಯೇ ವಿಶ್ರಾಂತಿ ಪಡೆದುಕೊಳ್ಳುವ ಅವಶ್ಯಕತೆ ಇದೆ ಎಂದೂ ಅವರು ವಿವರಿಸಿದ್ದಾರೆ.

ದೇವೇಗೌಡ ಅವರು ಬೆಂಗಳೂರಿನ ಪದ್ಮನಾಭನಗರದ ನಿವಾಸದ ಬಾತ್ರೂಮ್ನಲ್ಲಿ ಶನಿವಾರ ಬೆಳಿಗ್ಗೆ ಕಾಲು ಜಾರಿ ಬಿದ್ದಿದ್ದರು. ಅವರಿಗೆ ವೈದ್ಯರು ಮನೆಯಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಜಯದೇವ ಆಸ್ಪತ್ರೆಗೆ ಕರೆದೊಯ್ದಿದ್ದರು.
More From
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications