ಉಕ್ರೇನ್ನಿಂದ ಬಂದ ವೈದ್ಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಿ; ಸರ್ಕಾರಕ್ಕೆ ಎಚ್ಡಿಕೆ ಆಗ್ರಹ
ಬೆಂಗಳೂರು, ಮಾರ್ಚ್ 7: ರಷ್ಯಾದ ಸೇನಾ ದಾಳಿಗೆ ತತ್ತರಿಸಿರುವ ಉಕ್ರೇನ್ ದೇಶದಿಂದ ಭಾರತಕ್ಕೆ ವಾಪಸ್ ಬಂದು ವೈದ್ಯ ಶಿಕ್ಷಣದಲ್ಲಿ ಅತಂತ್ರರಾಗಿರುವ ಎಲ್ಲ ವಿದ್ಯಾರ್ಥಿಗಳ ನೆರವಿಗೆ ಕೇಂದ್ರ ಸರಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.
ಅಲ್ಲದೆ, ಜೀವ ಉಳಿಸಿಕೊಂಡು ಕರ್ನಾಟಕ ರಾಜ್ಯಕ್ಕೂ ವಾಪಸ್ ಬಂದಿರುವ ಎಲ್ಲ ವಿದ್ಯಾರ್ಥಿಗಳಿಗೂ ರಾಜ್ಯ ಸರಕಾರ ಮಾನವೀಯ ದೃಷ್ಟಿಯಿಂದ ಉಚಿತ ವೈದ್ಯ ಶಿಕ್ಷಣ ನೀಡಬೇಕು ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಸೋಮವಾರ ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕೆಲ ಮಹತ್ವದ ಅಂಶಗಳನ್ನು ಪ್ರಸ್ತಾಪ ಮಾಡಿದ್ದಾರೆ.

"ಆಪರೇಷನ್ ಗಂಗಾ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ನಿಂದ ವಿದ್ಯಾರ್ಥಿಗಳನ್ನು ಏರ್ಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಮುಂದಿನ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿಶ್ವ ವಿದ್ಯಾಲಯಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ," ಎಂದು ಮಾಧ್ಯಮಗಳೇ ತೋರಿಸುತ್ತಿವೆ ಎಂದು ತಿಳಿಸಿದರು.
"ಕರ್ನಾಟಕದ 800ರಿಂದ 1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಸಿಲುಕಿಕೊಂಡಿದ್ದಾದ್ದು, ಅವರೂ ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್ಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ," ಎಂದು ಎಚ್.ಡಿ. ಕುಮಾರಸ್ವಾಮಿ ಉಲ್ಲೇಖಿಸಿದ್ದರೆ.

"ಯುದ್ಧ ಭೂಮಿಯಿಂದ ಜೀವ ಉಳಿಸಿಕೊಂಡು ಬಂದ ಭಾರತೀಯ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯವಾಗಿದೆ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ," ಎಂದು ಎಚ್ಡಿಕೆ ಆಗ್ರಹಿಸಿದರು.
2,65,720 ಕೋಟಿ ರೂ.ಗಳಷ್ಟು ಬಜೆಟ್ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್ ಮೂಲಕ ಶೇ.50ರಷ್ಟು ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಲಿ ಎನ್ನುವುದು ನನ್ನ ಅಭಿಪ್ರಾಯವೆಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ʼವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ಹಣದ ಮೂಲಕ ಶಿಕ್ಷಣಕ್ಕೆ ಬೆಲೆ ಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ. ಕೇಂದ್ರ- ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications