'ಕೇಡು ಬಯಸಿದ್ದು ಯಾರು?' ಸಿದ್ದರಾಮಯ್ಯ-ಕುಮಾರಸ್ವಾಮಿ ವಾರು ಜೋರು!
Recommended Video
ಬೆಂಗಳೂರು, ಅಕ್ಟೋಬರ್ 25: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರಕ್ಕೆ ಮತ್ತೆ ಟ್ವಿಟ್ಟರ್ ವೇದಿಕೆಯಾಗಿದೆ.
"ಉಪಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆದ್ದರೆ ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಯಾವ ಕಾರಣಕ್ಕೂ ಜೆಡಿಎಸ್ ಜೊತೆ ಸೇರೋಲ್ಲ. ನಮಗೆ ಜೆಡಿಎಸ್ ಸಹವಾಸ ಸಾಕಾಗಿದೆ" ಎಂದಿರುವ ಸಿದ್ದರಾಮಯ್ಯ ಅವರ ಮಾತಿಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ ಎಚ್ ಡಿ ಕೆ, "ನಿಮಗೆ ಕೇಡು ಬಗೆದವರು ಯಾರು? ಆತ್ಮವಂಚನೆ ಇಲ್ಲದೆ ಹೇಳುವಿರಾ?" ಎಂದು ಪ್ರಶ್ನಿಸಿದ್ದಾರೆ.
ಉಪಚುನಾವಣೆಯಲ್ಲಿ ಅನರ್ಹ ಶಾಸಕರ ರಾಜಕೀಯ ಭವಿಷ್ಯವೇ ಮುಗಿಯಲಿದೆ. ದ್ರೋಹ ಬಗೆದವರಿಗೆ ಜನ ತಕ್ಕ ಶಿಕ್ಷೆ ನೀಡುತ್ತಾರೆ ಎಂದ ಸಿದ್ದರಾಮಯ್ಯ ಉಪಚುನಾವಣೆಯ ನಂತರ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯುತ್ತದೆಂದು ಭವಿಷ್ಯ ಹೇಳಿದರು.
ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಎಚ್ ಡಿ ಕುಮಾರಸ್ವಾಮಿ ಮಾಡಿದ ಟ್ವಿಟ್ ಗಳು ಇಲ್ಲಿವೆ.

ಕೇಡು ಬಗೆದಿದ್ದು ಯಾರು?
"ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15ಸ್ಥಾನ ಗೆದ್ದರೆ ಬಿಎಸ್ವೈ ರಾಜೀನಾಮೆ ನೀಡಬೇಕು. ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಜೆಡಿಎಸ್ ಜತೆ ಸೇರಲ್ಲ. ಅವರ ಜೊತೆ ಸೇರಿ ಅನುಭವಿಸಿದ್ದು ಸಾಕು ಎಂದಿದ್ದಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ?"- ಎಚ್ ಡಿ ಕುಮಾರಸ್ವಾಮಿ

ಕತ್ತಿ ಮಸೆದಿದ್ದು ಯಾರು?
"ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು. ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ(?) ಕೊಟ್ಟವರು ಯಾರು? ಪಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸೆದಿದ್ದು ಯಾರು? ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು?" - ಎಚ್ ಡಿ ಕುಮಾರಸ್ವಾಮಿ

ನಿಮ್ಮ ಸಹವಾಸ ನಮಗೂ ಬೇಡ
"ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ "ಯಾರು''ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ, ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ ನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ..." - ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಹೇಳಿಕೆ
"ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಆ ನಂತರ ಕಾಂಗ್ರೆಸ್ ಚುನಾವಣೆಗೆ ಹೋಗಲಿದೆ. ಯಾವ ಕಾರಣಕ್ಕೂ ಜೆಡಿಎಸ್ ಜೊತೆ ಕೈಜೋಡಿಸುವುದಿಲ್ಲ" ಎಂದು ಸಿದ್ದರಾಮಯ್ಯ ಹೇಳಿದ್ದರು.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications