ದಮ್ಮು, ತಾಕತ್ತು ಇದ್ದರೆ 'ರಾಜಕಾಲುವೆ ಐಶಾರಾಮಿ ರಕ್ಕಸರ' ವಿರುದ್ಧ ಕ್ರಮ ಜರುಗಿಸಿ: ಡಿಕೆಶಿಗೆ ಎಚ್.ಡಿ. ಕುಮಾರಸ್ವಾಮಿ ಸವಾಲು
ಬೆಂಗಳೂರು, ಮೇ 30: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗೆ ಸಾಕಷ್ಟು ಕಡೆ ಹಾನಿ ಆಗಿತ್ತು. ಬಡಾವಣೆಗಳು, ರಸ್ತೆಗಳು ಜಲಾವೃತಗೊಂಡಿ ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಹಿನ್ನೆಲೆ ಪ್ರವಾಸ ಸ್ಥಳಗಳಿಗೆ ಅಧಿಕಾರಿಗಳ ಸಮೂಹದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿದ್ದನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಡಿಕೆ ಶಿವಕುಮಾರ್ ಪ್ರವಾಹ ಭೇಟಿ ಹಿಂದೆ ಸಣ್ಣದೊಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇತ್ತೀಚೆಗೆ ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ನೋಡುವುದೇನೋ ಸರಿ. ಆದರೆ, ಡಿಕೆಶಿ ಅವರ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಕೇಂದ್ರ ಸಚಿವರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ.

ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಬೇಕು! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ 'ಭಾರೀ ಆಸಾಮಿ' ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ?. ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ! ಎಂದು ಟಾಂಗ್ ನೀಡಿದರು.
ಧಮ್ಮಿದ್ದರೆ ಐಶಾರಾಮಿ ರಕ್ಕಸರ ವಿರುದ್ಧ ಕ್ರಮ ಜರುಗಿಸಿ
ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ನೀವು ಹೇಳಬೇಕಲ್ಲವೇ? ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕೂತು ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ. ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ? ಎಂದು ಕೇಳಿದ್ದಾರೆ. ಈ ಪ್ರಶ್ನೆಗಳಿಗೆ ಬೆಂಗಳೂರು ಜನರಿಗೆ ಉತ್ತರಿಸುವಂತೆ ಅವರು ಆಗ್ರಹಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications