Get Updates
Get notified of breaking news, exclusive insights, and must-see stories!

ಪದ್ಮಪ್ರಶಸ್ತಿ ಪಡೆದ ಗಣ್ಯರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜನವರಿ 26: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಹಾಗೂ ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಗಣ್ಯರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.

ಕೆಲವು ಸಾಧಕರಿಗೆ ಮರಣೋತ್ತರವಾಗಿಯದರೂ ಈ ಪ್ರಶಸ್ತಿಗಳು ಘೋಷಣೆ ಯಾಗಿರುವ ಕುರಿತು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

HD Kumaraswamy congratulates Padma Award winners from Karnataka

ರಾಜ್ಯದ ವಿಜ್ಞಾನಿ ರೋಹಿಣಿ ಗೋಡ್ಬೋಲೆ, ಸಂಗೀತ ವಿದ್ವಾಂಸ ಪಂ. ರಾಜೀವ್ ತಾರಾನಾಥ, ಸಾಲುಮರದ ತಿಮ್ಮಕ್ಕನವರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿರುವುದು ಸಂತಸ ತಂದಿದೆ.

ಆದರೆ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಹಾಗೂ ಇನ್ನೂ ಹಲವು ಅರ್ಹ ಸಾಧಕರಿಗೆ ಪದ್ಮ ಪ್ರಶಸ್ತಿ ನಿರೀಕ್ಷಿಸಿದ್ದೆವು. ಇದು ಕೈಗೂಡದಿರುವುದು ನಿರಾಸೆ ತಂದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಶುಕ್ರವಾರ 2019ನೇ ಸಾಲಿನ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಗಾಯಕ ಭೂಪೇನ್ ಹಜಾರಿಕಾ ಹಾಗೂ ನಾನಾಜಿ ದೇಶ್ ಮುಖ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ.

ಇತ್ತೀಚೆಗಷ್ಟೇ ಇಹಲೋಕ ತ್ಯಜಿಸಿದ ತುಮಕೂರಿನ ಸಿದ್ದಗಂಗಾಮಠದ ಶಿವಕುಮಾರ ಶ್ರೀಗಳಿಗೂ 'ಭಾರತ ರತ್ನ' ಪ್ರಶಸ್ತಿ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು. ಕರ್ನಾಟಕ ಸರ್ಕಾರವೂ ಭಾರತ ರತ್ನ ನೀಡುವಂತೆ ಶಿಫಾರಸ್ಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಅವರನ್ನು ಭಾರತ ರತ್ನಕ್ಕೆ ಆಯ್ಕೆ ಮಾಡದಿರುವುದು ಜನರಲ್ಲಿ ಅಸಮಾಧಾನ ಸ್ರಷ್ಟಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+