Bengaluru: ಇಂದಿನಿಂದ 3 ದಿನ ಭಾರತೀಯ ತೋಟಗಾರಿಕಾ ಮೇಳ 2025, ಕೇಂದ್ರ ಸಚಿವ ಚಾಲನೆ
ಬೆಂಗಳೂರು, ಫೆಬ್ರವರಿ 27: ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (IIHR) ವತಿಯಿಂದ ಬೆಂಗಳೂರಿನ ಹೆಸರಘಟ್ಟದಲ್ಲಿ ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಗುರುವಾರ ಚಾಲನೆ ನೀಡಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ (ಫೆಬ್ರವರಿ 27 ರಿಂದ ಮಾರ್ಚ್ 01) ಬೃಹತ್ ತೋಟಗಾರಿಕಾ ಮೇಳ ನಡೆಯಲಿದೆ. ನವ ನವೀನ ತಂತ್ರಜ್ಞಾನಗಳ ಪ್ರದರ್ಶನ ಮಾತ್ರವಲ್ಲದೇ ಅವುಗಳ ಮಾಹಿತಿ ತಿಳಿಸಲಾಗುತ್ತದೆ. ನೂರಾರು ಮಳಿಗೆಗಳು, ಕಾರ್ಯಾಗಾರ, ಸಂವಾದಗಳು, ಬೀಜ ತಳಿಗಳ ಕುರಿತು ರೈತರು, ತೋಟಗಾರಿಕೆ ಬೆಳೆಗಾರರು ಇಲ್ಲಿ ಮಾಹಿತಿ ಪಡೆಯಲಿದ್ದಾರೆ. ಲಕ್ಷಾಂತರ ಮಂದಿ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಐಐಎಚ್ಆರ್ ತಿಳಿಸಿದೆ.
ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (IIHR) ಮತ್ತು ಭಾರತೀಯ ಕೃಷಿ ಸಂಶೋಧನಾ ಪರಿಷತ್ತು (ICAR) ಸಹಕಾರದಲ್ಲಿ ಬೆಂಗಳೂರಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಮೇಳ ಹಮ್ಮಿಕೊಳ್ಳಲಾಗಿದೆ. ವಿಕಸಿತ ಭಾರತಕ್ಕಾಗಿ ತೋಟಗಾರಿಕೆ ಮೇಳ (ಘೋಷಣೆ, ಸಬಲೀಕರಣ ಮತ್ತು ಜೀವನೋಪಾಯ) ಘೋಷವಾಕ್ಯದಡಿ ಮೇಳ ಆರಂಭವಾಗಿದೆ. ಇಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದಾರೆ.

ಮನುಷ್ಯರಲ್ಲಿ ನೆನಪಿನ ಶಕ್ತಿ ಕುಂದಿಸುವ ಆಲ್ಝೈಮರ್ ಕಾಯಿಲೆಗೆ ಔಷಧಿ ಗುಣಗಳುಳ್ಳ ಅಣಬೆ ಇದೆ. ಕ್ಯಾನ್ಸರ್ ನಿಯಂತ್ರಿಸಲು ಕ್ಯಾಲ್ಸಿಯಂ ಕೊರತೆ ನೀಗಿಸುವ ಅಣಬೆಗಳು ಕೂಡ ಇಲ್ಲಿಗೆ ಬಂದಿವೆ. ಈ ಆಹಾರಗಳು ಮೆದುಳು ನರಕೋಶಗಳಿಗೆ ಪರಿಣಾಮ ಉಂಟು ಮಾಡುತ್ತವೆ. ರೋಗಗಳ ನಿಯಂತ್ರಣಕ್ಕೆ ಇವೆಲ್ಲ ಸಹಕಾರಿಯಾಗಿವೆ. ಇಂತಹ ಬೆಳೆಗಳ ಪರಿಚಯಿಸಲಾಗಿದೆ. ಅವುಗಳ ಬೆಳೆಯುವುದು, ವಿಧಾನ, ಕಟಾವು ಮಾಹಿತಿ ನೀಡಲಾಗುತ್ತದೆ.
ಆರ್ಕಾ ಟೆಂಡರ್ ಹಲಸಿನಕಾಯಿ ಕಬಾಬ್ ಬಂದಿದೆ. ಅಧಿಕ ನಾರಿನ ಅಂಶವುಳ್ಳ ಹಲಸಿನಕಾಯಿಯನ್ನು ಸಕ್ಕರೆ ಕಾಯಿಲೆ ಇರುವವರು ತಿನ್ನಬಹುದಾಗಿದೆ. ಮಾಂಸಹಾರಿ ಅಲ್ಲ, ಬರೀ ಸಸ್ಯ ಹಾರಿಗಳು ಎನ್ನುವವರು ತಿನ್ನಬಹುದಾಗಿದೆ. ಇದೇ ರೀತಿ ಅನೇಕ ತೋಟಗಾರಿಕೆ ಬೆಳೆಗಳು ಇಲ್ಲಿವೆ.

ಭಾರತದಲ್ಲಿ 350 ಟನ್ ತೋಟಗಾರಿಕೆ ಉತ್ಪಾದನೆ ವಾರ್ಷಿಕವಾಗಿ ಆಗುತ್ತದೆ. ದೇಶದ ಜನರ ಪೌಷ್ಠಿಕತೆ ಸುಧಾರಿಸುವ ನಿಟ್ಟಿನಲ್ಲಿ ಉತ್ಪಾದನೆ ಹೆಚ್ಚಿಸಬೇಕಿದೆ. ದೇಶದ ಆಹಾರ ಉತ್ಪಾದನೆಯಲ್ಲಿ ತೋಟಗಾರಿಕೆ ಮೇಳ ಮಹತ್ವದ ಪಾತ್ರ ನಿರ್ವಹಿಸುತ್ತದೆ.
ಇಂದು ತೋಟಗಾರಿಕೆ ಮೇಳ ಉದ್ಘಾಟನೆ
ಗುರುವಾರ ಬೆಳಗ್ಗೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ತೋಟಗಾರಿಕೆ ಮೇಳ ಉದ್ಘಾಟಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್, ಶಾಸಕ ಎಸ್.ಆರ್.ವಿಶ್ವನಾಥ್, ಐಎಸ್ಇಸಿ ಡಾ.ಅಶೋಕ್ ದಳವಾಯಿ, ದೆಹಲಿ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ಸದಸ್ಯ ಡಾ.ಮೇಜರ್ ಸಿಂಗ್ ಅವರು ಪಾಲ್ಗೊಳ್ಳಲಿದ್ದಾರೆ.
ಇದರೊಂದಿಗೆ ಐಐಎಚ್ಆರ್-ಐಸಿಎಆರ್ ನಿರ್ದೇಶಕ ಡಾ.ತುಷಾರ್ ಕಾಂತಿ ಬೆಹೆರಾ ಸೇರಿದಂತೆ ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಇರಲಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications