ಎಲೆಚುಕ್ಕೆ ರೋಗಕ್ಕೆ ಪರಿಹಾರ ಬದಲು ಭೂತಾನ್ ಅಡಿಕೆ ಆಮದು ಬಗ್ಗೆ ಚಿಂತೆ: ಎಚ್ಡಿಕೆ ಆಕ್ರೋಶ
ಬೆಂಗಳೂರು, ಅ.12: ರಾಜ್ಯದಲ್ಲಿ ಎಲೆಚುಕ್ಕೆ ರೋಗ ವ್ಯಾಪಕವಾಗಿ ಹರಡುತ್ತಿದ್ದು, ಇದರಿಂದಾಗಿ ಅಡಿಕೆ ಕೃಷಿಕರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದರೆ, ಕೇಂದ್ರ ಬಿಜೆಪಿ ಸರ್ಕಾರ ಕೃಷಿಯನ್ನು ಕಡೆಗಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, "ಕೃಷಿಯನ್ನು ಕೇಂದ್ರ ಬಿಜೆಪಿ ಸರಕಾರ ಇನ್ನಿಲ್ಲದಷ್ಟು ಕಡೆಗಣಿಸುತ್ತಿದೆ ಎನ್ನುವುದಕ್ಕೆ ಈಗ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳೇ ಸಾಕ್ಷಿ. ಹವಾಮಾನ ವೈಪರಿತ್ಯ ಹಾಗೂ ಎಲೆಚುಕ್ಕೆ ರೋಗದಿಂದ ಅಡಿಕೆ ಕೃಷಿಕರ ಬವಣೆ ಹೇಳತೀರದಾಗಿದೆ" ಎಂದು ಆತಂಕ ಹೊರ ಹಾಕಿದ್ದಾರೆ.
"ಕರಾವಳಿ, ಮಲೆನಾಡು, ಹಾಸನ, ಕೊಡಗು ಸೇರಿ ಇನ್ನೂ ಹಲವಾರು ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಜಗತ್ತಿನಲ್ಲಿ ಅತಿಹೆಚ್ಚು ಅಡಿಕೆ ಬೆಳೆಯುವ ಭಾರತದಲ್ಲಿ ಹೆಚ್ಚು ಫಸಲು ಬರುವುದೇ ನಮ್ಮ ರಾಜ್ಯದಲ್ಲಿ. ಆದರೆ, ಈ ಬೆಳೆ ತೆಗೆಯುವ ರಾಜ್ಯದ ರೈತರ ಬದುಕು ಕತ್ತಲೆಯಲ್ಲಿದೆ" ಎಂದಿದ್ದಾರೆ.

"ಅಡಿಕೆ ಬೆಳೆಯುವುದು ಎಂದರೆ ಕತ್ತಿಯ ಮೇಲಿನ ಸವಾರಿ ಎನ್ನುವುದರಲ್ಲಿ ಸಂಶಯವೇ ಇಲ್ಲ. ಅತಿವೃಷ್ಟಿ, ಅನಾವೃಷ್ಟಿ ಜತೆಗೆ, ನಿರಂತರ ರೋಗರುಜಿನಗಳು ಬಾಧಿಸುತ್ತ ರೈತರನ್ನು ಕಿತ್ತು ತಿನ್ನುತ್ತಿವೆ. ರಾಜ್ಯ ಸರಕಾರವು ಪರಿಣಾಮಕಾರಿ ಔಷಧಿ ಪತ್ತೆ ಹಚ್ಚಿ ಬೆಳೆಗಾರರಿಗೆ ಕಡಿಮೆ ದರದಲ್ಲಿ ಒದಗಿಸಬೇಕಿದೆ. ಬೆಳೆ ನಷ್ಟಕ್ಕೆ ಪರಿಹಾರವನ್ನು ಕೂಡ ಕೊಡಬೇಕು" ಎಂದು ಒತ್ತಾಯಿಸಿದ್ದಾರೆ.
"ಮೊದಲೇ ಸಂಕಷ್ಟದಲ್ಲಿರುವ ಅಡಿಕೆ ರೈತರ ಮೇಲೆ ಕೇಂದ್ರ ಸರಕಾರ ಹೊಸ ಭೂತವನ್ನು ಛೂ ಬಿಡುತ್ತಿದೆ. ನೆರೆ ದೇಶ ಭೂತಾನ್ ನಿಂದ 17,000 ಟನ್ ಹಸಿರು ಅಡಿಕೆ ಆಮದು ಮಾಡಿಕೊಳ್ಳುತ್ತಿರುವ ಕ್ರಮ ನಮ್ಮ ಅಡಿಕೆ ಬೆಳೆಗಾರರ ಮೇಲೆ ಬರೆ ಎಳೆಯುವ ಹುನ್ನಾರವಷ್ಟೆ" ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

"ಅಡಿಕೆ ಬೆಳೆಯುತ್ತಾ ಅಡಕತ್ತರಿಯಲ್ಲಿ ಸಿಲುಕಿರುವ ರೈತರ ಹಿತ ಕಾಯುವುದು ರಾಜ್ಯ ಬಿಜೆಪಿ ಸರಕಾರದ ಕರ್ತವ್ಯ. ಅವರ ಸಂಕಷ್ಟಕ್ಕೆ ಮಿಡಿಯುವುದು ಮಾತ್ರವಲ್ಲ, ಎಲ್ಲಾ ರೀತಿಯಲ್ಲೂ ನೆರವಿಗೆ ಧಾವಿಸಬೇಕು" ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇತ್ತಿಚೆಗೆ ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರಕಾರ ಒಟ್ಟು ಎಂಟು ಕೋಟಿ ರುಪಾಯಿಗಳಷ್ಟು ಅನುದಾನ ನಿಗದಿ ಮಾಡಿ, ನಾಲ್ಕು ಕೋಟಿ ರೂಪಾಯಿಗಳನ್ನು, ತಕ್ಷಣಕ್ಕೆ ರೈತರಿಗೆ ವಿತರಿಸಲು, ಬಿಡುಗಡೆ ಮಾಡಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications