ಕರ್ನಾಟಕದಲ್ಲಿ ಹಿಂದಿ ಹೇರಿಕೆ ಕುರಿತು ಸಿಎಂ ಕುಮಾರಸ್ವಾಮಿ ಏನಂತಾರೆ?
Recommended Video
ಬೆಂಗಳೂರು, ಜೂನ್ 3: ತ್ರಿಭಾಷಾ ಸೂತ್ರದ ಹೆಸರಿನಲ್ಲಿ ಒಂದು ಭಾಷೆಯನ್ನು ಇತರರ ಮೇಲೆ ಯಾವ ಕಾರಣಕ್ಕೂ ಹೇರಬಾರದು ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ತಾವು ಈ ಕರಡು ನೀತಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ರಾಜ್ಯ ಸರಕಾರದ ನಿಲುವನ್ನು ಕೇಂದ್ರಕ್ಕೆ ತಿಳಿಸುವುದಾಗಿ ಹೇಳಿದ್ದಾರೆ.
ನಿನ್ನೆ @HRDMinistry ರವರು ಹೊರಡಿಸಿದ ಶಿಕ್ಷಣ ಕರಡು ಕಾರ್ಯನೀತಿಯಲ್ಲಿ ಹಿಂದಿ ಹೇರಿಕೆಯ ಬಗ್ಗೆ ನನ್ನ ಗಮನಕ್ಕೆ ಬಂದಿದೆ.
— H D Kumaraswamy (@hd_kumaraswamy) June 2, 2019
3-ಭಾಷಾ ಸೂತ್ರದ ಹೆಸರಿನಲ್ಲಿ ಒಂದು ಭಾಷೆಯನ್ನು ಇತರರ ಮೇಲೆ ಯಾವ ಕಾರಣಕ್ಕೂ ಹೇರಬಾರದು.
ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ರಾಜ್ಯ ಸರ್ಕಾರದ ನಿಲುವನ್ನು ಕೇಂದ್ರಕ್ಕೆ ತಿಳಿಸಲಾಗುವುದು.#HindiImposition
ಕನ್ನಡ ಪರ ಸಂಘಟನೆಗಳಂತೂ ಹಿಂದಿ ಹೇರಿಕೆಯನ್ನು ಬಲವಾಗಿ ವಿರೋಧಿಸುತ್ತಿವೆ. ಕರ್ನಾಟಕದಲ್ಲಿರುವ ಹಿಂದಿ ಭಾಷಿಗರು ಕನ್ನಡ ಭಾಷೆಯನ್ನು ಕಲಿಯಲು ಸಾಧ್ಯವಿಲ್ಲ ಎನ್ನುವಾಗ ಕನ್ನಡಿಗರು ಹಿಂದಿಯನ್ನು ಯಾಕೆ ಕಲಿಯಬೇಕು ಎಂದು ಅನೇಕ ಟ್ವೀಟಿಗರು ಪ್ರಶ್ನೆ ಮಾಡಿದ್ದಾರೆ. #StopHindiImposition ಹ್ಯಾಷ್ಟ್ಯಾಗ್ ಇದೀಗ ಟ್ವಿಟ್ಟರ್ನಲ್ಲಿ ಟ್ರೆಂಡ್ ಆಗಿದೆ.
ಹಿಂದಿ ಹೇರಿಕೆ ಸುಳ್ಳೇ ಸುಳ್ಳು: ತಮಿಳಿನಲ್ಲಿ ನಿರ್ಮಲಾ ಸೀತಾರಾಮನ್ ಟ್ವೀಟ್
ಹಿಂದಿ ಬಳಸುವುದರಲ್ಲಿ ತಪ್ಪೇನಿದೆ ಎಂದು ವಾದಿಸುವವರು, ಮರಾಠಿ, ಕನ್ನಡ, ಗುಜರಾತಿ, ತಮಿಳು ಮೊದಲಾದ ಭಾಷೆಗಳನ್ನು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಇತ್ಯಾದಿ ಸ್ಥಳಗಳಲ್ಲಿ ಬಳಸುವುದರಲ್ಲಿ ತಪ್ಪೇನಿದೆ ಎಂದು ಯಾಕೆ ಯಾವತ್ತೂ ಕೇಳುವುದಿಲ್ಲ?
ಹಿಂದಿ ಇಲ್ಲದೆಯೇ ದಕ್ಷಿಣ ರಾಜ್ಯಗಳು ಸಾಕಷ್ಟು ಪ್ರಗತಿ ಹೊಂದಿವೆ. ಹೀಗಿರುವಾಗ ದಕ್ಷಿಣದಲ್ಲಿ ಹಿಂದಿಯ ಅಗತ್ಯವೇನಿದೆ?
ಹಿಂದಿ ಬಾರದ ಕನ್ನಡಿಗರು ಸ್ವಂತ ನೆಲದಲ್ಲಿ ಬ್ಯಾಂಕಿಂಗ್ ಸೇವೆ ಇತ್ಯಾದಿಗಳನ್ನು ಪಡೆಯಲು ಒದ್ದಾಡುವಂಥ ಪರಿಸ್ಥಿತಿ ಬಂದಿದೆ ಇದಕ್ಕೆಲ್ಲ ಹಿಂದಿ ಹೇರಿಕೆಯೇ ಕಾರಣ ಎಂದಿದ್ದಾರೆ.
ಹಿಂದಿ ಹೇರಿಕೆ ವಿರೋಧಿಸಿ ಟ್ವಿಟ್ಟರ್ ನಲ್ಲಿ ಭಾರಿ ಅಭಿಯಾನ
ಹಿಂದಿ ಹೇರಿಕೆಗೆ ಕನ್ನಡಪರ ಸಂಘಟನೆಗಳ ವಿರೋಧ: ಕೇಂದ್ರದ ಶಿಕ್ಷಣ ಕರಡು ನೀತಿ 2019ರ ವಿರುದ್ಧ ಕನ್ನಡ ಪರ ಸಂಘಟನೆಗಳು ಧ್ವನಿ ಎತ್ತಿವೆ. ಪ್ರತಿಭಟನೆಯನ್ನೂ ಕೂಡ ನಡೆಸುತ್ತಿವೆ. ಸ್ಥಳೀಯ ಭಾಷೆ ಹಾಗೂ ಇಂಗ್ಲಿಷ್ ಹೊರತುಪಡಿಸಿ ಅದರ ಜೊತೆಗೆ ಶಾಲೆಗಳಲ್ಲಿ ಹಿಂದಿಯನ್ನೂ ಕಲಿಯಬೇಕು ಎಂಬ ತ್ರಿಭಾಷಾ ನೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದಿ ಹೇರಿಕೆ ಬಗ್ಗೆ ಇಡೀ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಕನ್ನಡ ಗ್ರಾಹಕರ ಕೂಟದ ಸದಸ್ಯ ಗಣೇಶ್ ಚೇತನ್ ಹೇಳಿದ್ದಾರೆ.