ಬಿಜೆಪಿ ಪಾದಯಾತ್ರೆಗೆ ಹೆಚ್ಡಿಕೆ ವಿರೋಧ: ಮೈತ್ರಿ ಪಕ್ಷಗಳ ಮುನಿಸು ಕಾಂಗ್ರೆಸ್ಗೆ ವರದಾನ?
ಬೆಂಗಳೂರು ಜುಲೈ 31: ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಬಿರುಕು ಕಾಣಿಸಿಕೊಂಡಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಪಾದಯಾತ್ರೆ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಜೆಪಿ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಬೆಂಬಲ ನೀಡದೇ ಇರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದಿದ್ದಾರೆ. ಈ ಬಗ್ಗೆ ನನಗೆ ಪ್ರಶ್ನೆ ಕೇಳಬೇಡಿ ಎಂದು ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಸಣ್ಣದಾಗಿ ಬಿರುಕು ಕಾಣಿಸಿಕೊಳ್ಳಲು ಆರಂಭವಾಗಿದೆ. ಅದರಲ್ಲೂ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆಗೆ ಮುಂದಾಗಿರುವ ಬಿಜೆಪಿಗೆ ಹೆಚ್ಡಿ ಕುಮಾರಸ್ವಾಮಿ ಬೆಂಬಲ ನೀಡದೇ ಇರುವುದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ.
ಹೆಚ್ಡಿ ಕುಮಾರಸ್ವಾಮಿ ಅವರ ಈ ಹೇಳಿಕೆಯಿಂದ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಸ್ಪಷ್ಟವಾಗಿದೆ.
ಬಿಜೆಪಿ ಪಾದಯಾತ್ರೆಗೆ ಹೆಚ್ಡಿಕೆ ಬೆಂಬಲ ನೀಡದಿರಲು ಕಾರಣವೇನು?
ಬಿಜೆಪಿ ಪಾದಯಾತ್ರೆಯ ಬಗ್ಗೆ ತಮ್ಮ ಗಮನಕ್ಕೆ ತಂದಿಲ್ಲ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ತಮ್ಮ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಪಾದಯಾತ್ರೆ ನಡೆಸುತ್ತಿದ್ದಾರೆ. ಆ ಬಗ್ಗೆ ಜೆಡಿಎಸ್ ಕೋರ್ ಕಮಿಟಿ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನಿಂದ ಮೈಸೂರಿನವರೆಗೆ ನಮ್ಮ ಪ್ರಾಬಲ್ಯ ಇದೆ. ಚುನಾವಣೆ ಸಂದರ್ಭದಲ್ಲಿ ಒಟ್ಟಿಗೆ ಇರುವುದು ಬೇರೆ ರಾಜಕಾರಣ ಬೇರೆ, ಬಿಜೆಪಿ ನಡೆಸಿಕೊಂಡಿರುವ ರೀತಿ ಮನಸ್ಸಿಗೆ ಬೇಸರ ತಂದಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಪ್ರೀತಂ ಗೌಡ ವಿರುದ್ಧ ಹೆಚ್ಡಿಕೆ ಗರಂ
ಪಾದಯಾತ್ರೆ ಮುಖ್ಯಸ್ಥರು ಯಾರು? ಪ್ರೀತಂ ಗೌಡ ಯಾರು? ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಕುಟುಂಬಕ್ಕೆ ವಿಷ ಹಾಕಿ, ಸರ್ವನಾಶ ಮಾಡಲು ಹೊರಟ ಪ್ರೀತಂ ಗೌಡರನ್ನು ಕರೆಸಿ ನನ್ನ ಪಕ್ಕದಲ್ಲಿ ಕೂರಿಸಿ ಸಭೆ ಮಾಡುತ್ತಾರೆ. ಯಾರು ಹಾಸನದಲ್ಲಿ ಪೆನ್fಡ್ರೈವ್ ಹಂಚಿದವರು? ಅಂಥವರನ್ನು ನನ್ನ ಪಕ್ಕ ಕೂರಿಸಿ ಸಭೆ ಮಾಡ್ತಾರೆ. ಹಾಸನದಲ್ಲಿ ಏನೇನಾಗಿದೆ ಎಂದು ಅವರಿಗೆ ಗೊತ್ತಿಲ್ಲವೇ ಎಂದು ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಮೈತ್ರಿಯಲ್ಲಿ ಬಿರುಕು ಕಾಂಗ್ರೆಸ್ಗೆ ವರವಾಗುವುದೇ?
ಮುಡಾ ಹಗರಣದಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಡಬೇಕಿದ್ದ ಮೈತ್ರಿ ಪಕ್ಷಗಳಲ್ಲಿ ಮಸ್ತಾಪಗಳು ಶುರುವಾಗಿವೆ. ಹೀಗಾಗಿ ಪಾದಯಾತ್ರೆಗೆ ಹೆಚ್ಡಿ ಕುಮಾರಸ್ವಾಮಿ ಬೆಂಬಲ ನೀಡುವುದಿಲ್ಲ ಎಂದು ನೇರವಾಗಿ ಹೇಳಿದ್ದಾಗಿದೆ. ಇದರಿಂದ ಪಾದಯಾತ್ರೆ ಬಿಜೆಪಿ ನಿರೀಕ್ಷೆಯಂತೆ ನಡೆಯುವುದು ಕಷ್ಟ ಎನ್ನಲಾಗುತ್ತಿದೆ. ಈ ಬೇಸರ ಮುಂದುವರೆದಿದ್ದೇ ಆದರೆ ಮೈತ್ರಿ ಒಡೆಯುವ ಸಾಧ್ಯತೆಯೂ ಇದೆ. ಹೀಗಾದರೆ ಈ ಮೈತ್ರಿ ಪಕ್ಷಗಳ ಮನಸ್ತಾಪ ಕಾಂಗ್ರೆಸ್ಗೆ ವರವಾಗುವುದು ಗ್ಯಾರಂಟಿ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications