ಪ್ಯಾಕೇಜ್ ಟೀಕೆಸಿದ್ರೆ ದೇಶದ್ರೋಹಿಗಳಂತೆ ಬಿಂಬಿಸುತ್ತಾರೆ- ಕುಮಾರಸ್ವಾಮಿ
ಬೆಂಗಳೂರು, ಮೇ 19: ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೇಂದ್ರ ಸರ್ಕಾರ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
''ಮೇ 13 ರಂದು ಮೊದಲ ಕಂತಿನಲ್ಲಿ ವಿತ್ತ ಸಚಿವರು ಎಂಎಸ್ಎಂಇಗೆ ಸಂಬಂಧಿಸಿದ 6 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದರು. ನಂತರ 4 ದಿನಗಳ ಕಾಲ ನಿರಂತರವಾಗಿ ಪ್ರಧಾನ ಮಂತ್ರಿಗಳ 20 ಲಕ್ಷ ಕೋಟಿ ಪ್ಯಾಕೇಜ್ ಬಗ್ಗೆ ಘೋಷಣೆ ಮಾಡಿದರು. ಕೇಂದ್ರ ಸರ್ಕಾರದ ಘೋಷಣೆಯಿಂದ ಜನರ ಸಂಕಷ್ಟಕ್ಕೆ ಪರಿಹಾರ ದೊರಕಬಹುದು ಅಂತಾ ನಿರೀಕ್ಷೆಯಲ್ಲಿದ್ದೆ. ಈ ಪ್ಯಾಕೇಜ್ ನಿಂದ ತುಂಬಾ ನಿರಾಸೆಯಾಗಿದೆ.'' ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
20 ಲಕ್ಷ ಕೋಟಿ ಪ್ಯಾಕೇಜ್ ಬಗ್ಗೆ ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು ಹಲವಾರು ವಿಮರ್ಶೆ ಮಾಡಿದ್ದಾರೆ. ಚಿದಂಬರಂ ಅವರು ಜಿಡಿಪಿಯ 1% ಕೊಟ್ಟಿದ್ದಾರೆ ಅಂತ ಹೇಳಿದರು. ನಾನು ಎಷ್ಟು ಪರ್ಸೆಂಟ್ ಕೊಟ್ಟಿದ್ದಾರೆ ಅನ್ನೋ ಬಗ್ಗೆ ಮಾತಾಡಲ್ಲ. ಜನರಿಗೆ ಇದರ ಲಾಭ ಏನು ಅನ್ನೋದು ಮುಖ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇವತ್ತು 4 ಪ್ಯಾಕೇಜ್ನ ಸಂಪೂರ್ಣ ಅನುಕೂಲಗಳು, ಅನಾನುಕೂಲಗಳ ಬಗ್ಗೆ ಜನರ ಮುಂದಿಡುತ್ತೇನೆ. ಮೊದಲ ಕಂತಿನಲ್ಲಿ ಘೋಷಿಸಲಾದ ಎಂಎಸ್ಎಂಇ ಯೋಜನೆಗಳ ಬಗ್ಗೆ ಜನರ ಮುಂದಿಡುತ್ತೇನೆ. ಪ್ಯಾಕೇಜ್ ಘೋಷಣೆ ಮಾಡುವಾಗ ಹಲವಾರು ತಜ್ಞರು ತಮ್ಮ ಸಲಹೆ ನೀಡಿರುತ್ತಾರೆ. ಆದರೆ, ವಿತ್ತ ಸಚಿವರು ಘೋಷಣೆ ಮಾಡಿದ ಪ್ಯಾಕೇಜ್ಗಳಲ್ಲಿ ಪಾರದರ್ಶಕತೆ ಇಲ್ಲ ಎಂದಿದ್ದಾರೆ.
ಯಾವ ತಜ್ಞರಿಂದ ಮಾಹಿತಿ ಪಡೆದು ಈ ರೀತಿ ಪ್ಯಾಕೇಜ್ ಘೋಷಣೆ ಮಾಡಿದ್ರು. ಕೇಂದ್ರ, ರಾಜ್ಯ ಸರ್ಕಾರಗಳು ಸ್ವೇಚ್ಚಾಚಾರವಾಗಿ ಘೋಷಣೆಗಳನ್ನ ಮಾಡಿದ್ದಾರೆ. ಇವರ ಘೋಷಣೆಗಳನ್ನ ಟೀಕೆ ಮಾಡಿದ್ರೆ, ದೇಶದ್ರೋಹಿಗಳಂತೆ ಬಿಂಬಿಸುತ್ತಾರೆ.
ಏಪ್ರಿಲ್ 23-24 ರಂದು 15ನೇ ಹಣಕಾಸು ಆಯೋಗದ ಸಲಹಾ ಸಮಿತಿ ಸಭೆ ನಡೆಸಿದರು. ಇಂದಿನ ದೇಶದ ಪರಿಸ್ಥಿತಿ ಹಿನ್ನೆಲೆ 4 ಸಲಹೆ ನೀಡಿದ್ದಾರೆ. ಕೋವಿಡ್ 19 ಹರಡುವ ಮೊದಲೇ ಸಣ್ಣ ಉದ್ಯಮಗಳು ಸಂಕಷ್ಟಕ್ಕೆ ಒಳಗಾಗಿವೆ. ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಆರ್ಥಿಕವಾಗಿ ದಿವಾಳಿಯಾಗುತ್ತಿರುವುದನ್ನ ಸರಿ ಮಾಡುವ ನಿಟ್ಟಿನಲ್ಲಿ ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡಿದ್ದಾರೆ ಎಂದಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications