ನಿರ್ಮಲಾನಂದನಾಥ ಸ್ವಾಮೀಜಿ ಫೋನ್ ಕದ್ದಾಲಿಕೆ: ಎಚ್ಡಿಕೆ ಏನಂದ್ರು?
ಬೆಂಗಳೂರು, ಸೆಪ್ಟೆಂಬರ್ 29: ನನ್ನ ಅವಧಿಯಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್ ಟ್ಯಾಪಿಂಗ್ ನಡೆದಿತ್ತು ಎನ್ನುವ ರಾಜಕೀಯ ನಾಯಕರ ಹೇಳಿಕೆ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಪೋನ್ ಕದ್ದಾಲಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಗೆ ಒಂದಾದ ಮೇಲೊಂದು ಮಾಹಿತಿ ಸಿಗುತ್ತಿದ್ದು, ಸಿಸಿಬಿ ಅಧಿಕಾರಿಗಳು ರಕ್ತಚಂದನದ ಸ್ಮಗ್ಲರ್ಗಳ ಪಟ್ಟಿಯಲ್ಲಿ ಆದಿಚುಂಚನಗಿರಿ ಮಠಾಧಿಪತಿ ಡಾ. ನಿರ್ಮಲಾನಂದನಾಥಸ್ವಾಮೀಜಿ ಅವರ ಫೋನ್ ಸಂಖ್ಯೆ ಸೇರಿಸಿ ಕದ್ದಾಲಿಕೆ ನಡೆಸಿದ್ದರು ಎಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿದ್ದಾರೆ.
|
ಕುಮಾರಸ್ವಾಮಿ ಟ್ವೀಟಿನಲ್ಲಿರುವುದೇನು?
ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.
ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ, ಖಂಡಿತ ಇಲ್ಲ.
|
ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪ
ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಅಶೋಕ್ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರದಿಂದ ನನಗೆ ನೋವಾಗಿದೆ.
|
ಸ್ವಾಮೀಜಿ ನನಗೆ ನೈತಿಕ ಬಲವಾಗಿದ್ದವರು
ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ.

ಎಚ್ಡಿಕೆ ಸ್ವಾರ್ಥಕ್ಕಾಗಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ
ಸ್ವಾರ್ಥ, ಅಧಿಕಾರಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯಬಹುದು ಎನ್ನುವುದರಲ್ಲಿ ಕುಮಾರಸ್ವಾಮಿಯವರಿಗೆ ಸರಿಸಾಟಿಯಿಲ್ಲ. ಇಡೀ ದೇಶವೇ ಗೌರವಿಸುವ ಶ್ರೀಗಳ ಫೋನ್ ಕದ್ದಾಲಿಸಿದ್ದು ಮಾತ್ರವಲ್ಲದೆ, ಸ್ಮಗ್ಲರ್ ಗಳ ಪಟ್ಟಿಯಲ್ಲಿ ಸೇರಿಸಿ, ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಅವರಲ್ಲಿ ಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಮೊದಲು ಗುರುಗಳ ಕ್ಷಮೆ ಕೇಳಲಿ ಎಂದು ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications