ಕುಮಾರಸ್ವಾಮಿ ರಾಧಿಕಾ ಆಸ್ತಿ ಬಹಿರಂಗಪಡಿಸಲಿ: ಕೆಪಿಸಿಸಿ
ಚಿಕ್ಕಬಳ್ಳಾಪುರ, ಏ.9: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ರಾಮನಗರ ಶಾಸಕ, ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಮಾರಸ್ವಾಮಿ ಅವರ ಎರಡನೆಯ ಪತ್ನಿಯ ವಿಷಯ ಪ್ರಸ್ತಾಪಿಸಿರುವ ರಾಜ್ಯ ಕಾಂಗ್ರೆಸ್, ಕುಮಾರಸ್ವಾಮಿ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದೆ.
ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವಾಗ ಚುನಾವಣಾ ಆಯೋಗಕ್ಕೆ ನೀಡಿರುವ ಅಫಿಡವಿಟ್ ನಲ್ಲಿ ತಮ್ಮ ಎರಡನೆಯ ಪತ್ನಿ ರಾಧಿಕಾ ಕುಮಾರಸ್ವಾಮಿ ಅವರ ವಿಷಯವನ್ನು ಮರೆಮಾಚಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಎರಡನೆಯ ಪತ್ನಿ ರಾಧಿಕಾ ಅವರ ಆಸ್ತಿಪಾಸ್ತಿಯ ವಿವರವನ್ನು ಬಹಿರಂಗಪಡಿಸಿಲ್ಲ ಎಂದು ಕೆಪಿಸಿಸಿ ಕಾನೂನು ಘಟಕದ ಮುಖ್ಯಸ್ಥ ಧನಂಜಯ್ ಸುದ್ದಿಗೋಷ್ಠಿಯಲ್ಲಿ ಆಯೋಗದ ಗಮನ ಸೆಳೆದಿದ್ದಾರೆ.
ರಾಧಿಕಾ ಬಗ್ಗೆ ಕಿಂಚಿತ್ತು ಮಾಹಿತಿಯನ್ನೂ ನೀಡಿಲ್ಲ:

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಎರಡನೆಯ ಪತ್ನಿ ರಾಧಿಕಾ ಅವರ ಹೆಸರಿನಲ್ಲಿ ಮನೆ, ಬಂಗಲೆಗಳು ಸೇರಿದಂತೆ ಅಪಾರ ಆಸ್ತಿ ಮಾಡಿದ್ದಾರೆ. ಆದರೆ ಅದರ ಬಗ್ಗೆ ಕುಮಾರಸ್ವಾಮಿ ಕಿಂಚಿತ್ತು ಮಾಹಿತಿಯನ್ನೂ ನೀಡಿಲ್ಲ ಎಂದು ಕೆಪಿಸಿಸಿಯ ಧನಂಜಯ್ ಅವರು ಆಯೋಗದ ಗಮನ ಸೆಳೆದಿದ್ದಾರೆ.
ಕುಮಾರಸ್ವಾಮಿ ತಮ್ಮ ಪತ್ನಿ ರಾಧಿಕಾ ಹೆಸರಿನಲ್ಲಿ ಅಪಾರ ಆಸ್ತಿ ಮಾಡಿದ್ದು, ಅದು ಕಪ್ಪು ಹಣಕ್ಕೆ ಹೇರತುವಾಗಿದೆ. ಆ ಕಪ್ಪು ಹಣವನ್ನು ಈಗ ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿ ಬಳಸುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಹಾಗಾಗಿ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಬೇಕು ಎಂದು ಚುನಾವಣಾ ಆಯೋಗವನ್ನು ಧನಂಜಯ್ ಕೋರಿದ್ದಾರೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications