ಮಂಗಳೂರು ಗೋಲಿಬಾರ್: ಸರ್ಕಾರವನ್ನು ಬೆತ್ತಲು ಮಾಡಿದ ಕುಮಾರಸ್ವಾಮಿ
ಬೆಂಗಳೂರು, ಫೆಬ್ರವರಿ 19: ಮಂಗಳೂರು ಗೋಲಿಬಾರ್ ಪ್ರಕರಣ ಇಂದು ವಿಧಾನಸಭೆಯಲ್ಲಿ ವಿಸ್ತೃತವಾಗಿ ಚರ್ಚೆಯಾಯಿತು, ಗದ್ದಲ, ಪರಸ್ಪರ ಆರೋಪ ಪ್ರತ್ಯಾರೋಪಗಳಿಗೂ ಕಾರಣವಾಯಿತು.
ಮಂಗಳೂರು ಗಲಭೆ ನಡೆದಾಗಿನಿಂದಲೂ ಪ್ರಕರಣದ ಬಗ್ಗೆ ವಿಶೇಷ ಆಸ್ಥೆವಹಿಸಿದ್ದ ಕುಮಾರಸ್ವಾಮಿ, ಮಂಗಳೂರು ಗಲಭೆ ಬಗ್ಗೆ ತಾವು ಸಂಗ್ರಹಿಸಿದ್ದ ಎಲ್ಲ ಮಾಹಿತಿಯನ್ನೂ ವಿಧಾನಸಭೆಯಲ್ಲಿ ಹೊರಗೆಡವಿ, ಗೃಹ ಇಲಾಖೆ ಹೇಳಿದ್ದ ಸುಳ್ಳುಗಳನ್ನು ಬಯಲಿಗೆಳೆದರು.
ಸುಮಾರು ಒಂದು ಗಂಟೆ ಮಾತನಾಡಿದ ಕುಮಾರಸ್ವಾಮಿ, ಮಾಧ್ಯಮಗಳ ವರದಿಗಳು, ದಿನಪತ್ರಿಕೆ ವರದಿಗಳು, ತಾವು ಮಾಡಿದ ತನಿಖೆ ಮಾಹಿತಿ, ಸರ್ಕಾರಿ ಮಾಹಿತಿ, ಪೊಲೀಸ್ ಅಧಿಕಾರಿಗಳ ಹೇಳಿಕೆಗಳು ಎಲ್ಲವನ್ನೂ ಸದನದ ಮುಂದಿಟ್ಟು ತರ್ಕಬದ್ಧವಾಗಿ ವಾದ ಮಂಡಿಸಿದರು. ಘಟನೆಯನ್ನು ಎಳೆ-ಎಳೆಯಾಗಿ ವಿವರಿಸಿದರು.
ಪ್ರತಿಭಟನಾಕಾರರದ್ದೇ ತಪ್ಪು ಎಂದು ಬಿಂಬಿಸಲು ಪೊಲೀಸರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ವಿಡಿಯೋ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ವಿಡಿಯೋದಲ್ಲಿ ಸಾಕಷ್ಟು ತಪ್ಪು ಮಾಹಿತಿಗಳಿತ್ತು, ಎಂದು ಉದಾಹರಣೆಗಳ ಮೂಲಕ ವಿವರಿಸಿದರು.

ಪೊಲೀಸರು ಲಾಠಿ ಬೀಸುವವರೆಗೂ ಕಲ್ಲು ತೂರಾಟ ಆಗಿರಲಿಲ್ಲ
ಪೊಲೀಸರು ಲಾಠಿ ಬೀಸುವವರೆಗೂ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿರಲಿಲ್ಲ, ಲಾಠಿ ಬೀಸಿ, ರಸ್ತೆ ಬದಿ ಅಂಗಡಿಗಳವರ ಮೇಲೆ ದೌರ್ಜನ್ಯ ನಡೆಸಿ ಒಂದು ರೀತಿಯಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದಾರೆ. ನಂತರ ಪೊಲೀಸರೇ ಗೋಲಿಬಾರ್ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪ ಮಾಡಿದರು.

ದಾಖಲೆಗಳನ್ನು ನೀಡಿದ ಕುಮಾರಸ್ವಾಮಿ
ತಮ್ಮ ಹೇಳಿಕೆಗೆ ಪೂರಕವಾಗಿ ವಿಧಾನಸಭೆಯಲ್ಲಿ ದಾಖಲೆಗಳನ್ನೂ ನೀಡಿದ ಕುಮಾರಸ್ವಾಮಿ, ಪೊಲೀಸರು ಘಟನೆ ಸಂದರ್ಭ ನೀಡಿದ್ದ ಹೇಳಿಕೆಗಳು ಸುಳ್ಳೆಂದರು. ಪೊಲೀಸರಿಗೆ ಗಾಯ ಆಗಿದ್ದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬಂದೂಕು ಕಿತ್ತುಕೊಳ್ಳಲು ಯತ್ನಿಸಿದರು ಎಂಬುದೆಲ್ಲಾ ಪೊಲೀಸರು ಹೇಳಿದ ಸುಳ್ಳು ಎಂದು ಕುಮಾರಸ್ವಾಮಿ ಹೇಳಿದರು.

ಗೋಲಿಬಾರ್ ಸತ್ತವರ ಲೆಕ್ಕಾ ಮಾತ್ರ ಕೊಟ್ಟರು, ಗಾಯಗೊಂಡವರು?
ಗೋಲಿಬಾರ್ ನಲ್ಲಿ ಇಬ್ಬರು ಸತ್ತರು ಎಂಬುದನ್ನು ಮಾತ್ರವೇ ಪೊಲೀಸರು ಬಹಿರಂಗಗೊಳಿಸಿದರು. ಆದರೆ ಹತ್ತು ಮಂದಿ ಗೋಲಿಬಾರ್ ನಿಂದ ಗಾಯಗೊಂಡಿದ್ದರು. ಆದರೆ ಒಬ್ಬ ಸರ್ಕಾರಿ ಅಧಿಕಾರಿ ಸಹ ಅವರನ್ನು ಭೇಟಿ ಮಾಡಿಲ್ಲ, ಅವರ ಕಷ್ಟಕ್ಕೆ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಪೊಲೀಸ್ ಆಯುಕ್ತರ ಗೊಂದಲಮಯ ಹೇಳಿಕೆ
ಪೊಲೀಸ್ ಆಯುಕ್ತರು ನೀಡಿದ್ದ ಗೊಂದಲಮಯ ಹೇಳಿಕೆಗಳನ್ನು ಪ್ರಸ್ತಾಪ ಮಾಡಿದ ಕುಮಾರಸ್ವಾಮಿ, 'ಮೊದಲಿಗೆ ಬಂದರು ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿದರು ಎಂದು ಪೊಲೀಸ್ ಆಯುಕ್ತರು ಹೇಳಿಕೆ ನೀಡಿದರು ನಂತರ ಅಂಗಡಿ ಒಂದರಿಂದ ಏರ್ಗನ್ ದೋಚುವ ಯತ್ನ ಮಾಡಿದರು ಎಂದರು' ಎಂದು ಹೇಳಿದರು.

'ಗೋಲಿಬಾರ್ ನಲ್ಲಿ ಮೃತಪಟ್ಟ ವ್ಯಕ್ತಿಗಳಿಗೆ ಪರಿಹಾರ ಕಿತ್ತುಕೊಂಡಿರಿ'
ಗೋಲಿಬಾರ್ ನಲ್ಲಿ ಮೃತಪಟ್ಟ ವ್ಯಕ್ತಿಗಳಿಗೆ ನೀಡಲಾಗಿದ್ದ ಪರಿಹಾರದ ಹಣವನ್ನು ಹಿಂಪಡೆದ ಸಿಎಂ ಕ್ರಮವನ್ನು ಖಂಡಿಸಿದ ಕುಮಾರಸ್ವಾಮಿ, 'ಸಂಘಟನೆಗಳು ಒತ್ತಾಯಿಸಿದ್ದರಿಂದ ಪರಿಹಾರ ಹಣ ಹಿಂಪಡೆದುದಾಗಿ ಹೇಳಿದಿರಿ, ಸಿಎಂ ಮೇಲೆ ಒತ್ತಡ ಹೇರಿದ ಸಂಘಟನೆಗಳು ಯಾವುವು ಎಂದು ಬಹಿರಂಗಪಡಿಸಿ' ಎಂದು ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications