ಮಂಗಳೂರು ಗೋಲಿಬಾರ್: ಸರ್ಕಾರವನ್ನು ಬೆತ್ತಲು ಮಾಡಿದ ಕುಮಾರಸ್ವಾಮಿ
ಬೆಂಗಳೂರು, ಫೆಬ್ರವರಿ 19: ಮಂಗಳೂರು ಗೋಲಿಬಾರ್ ಪ್ರಕರಣ ಇಂದು ವಿಧಾನಸಭೆಯಲ್ಲಿ ವಿಸ್ತೃತವಾಗಿ ಚರ್ಚೆಯಾಯಿತು, ಗದ್ದಲ, ಪರಸ್ಪರ ಆರೋಪ ಪ್ರತ್ಯಾರೋಪಗಳಿಗೂ ಕಾರಣವಾಯಿತು.
ಮಂಗಳೂರು ಗಲಭೆ ನಡೆದಾಗಿನಿಂದಲೂ ಪ್ರಕರಣದ ಬಗ್ಗೆ ವಿಶೇಷ ಆಸ್ಥೆವಹಿಸಿದ್ದ ಕುಮಾರಸ್ವಾಮಿ, ಮಂಗಳೂರು ಗಲಭೆ ಬಗ್ಗೆ ತಾವು ಸಂಗ್ರಹಿಸಿದ್ದ ಎಲ್ಲ ಮಾಹಿತಿಯನ್ನೂ ವಿಧಾನಸಭೆಯಲ್ಲಿ ಹೊರಗೆಡವಿ, ಗೃಹ ಇಲಾಖೆ ಹೇಳಿದ್ದ ಸುಳ್ಳುಗಳನ್ನು ಬಯಲಿಗೆಳೆದರು.
ಸುಮಾರು ಒಂದು ಗಂಟೆ ಮಾತನಾಡಿದ ಕುಮಾರಸ್ವಾಮಿ, ಮಾಧ್ಯಮಗಳ ವರದಿಗಳು, ದಿನಪತ್ರಿಕೆ ವರದಿಗಳು, ತಾವು ಮಾಡಿದ ತನಿಖೆ ಮಾಹಿತಿ, ಸರ್ಕಾರಿ ಮಾಹಿತಿ, ಪೊಲೀಸ್ ಅಧಿಕಾರಿಗಳ ಹೇಳಿಕೆಗಳು ಎಲ್ಲವನ್ನೂ ಸದನದ ಮುಂದಿಟ್ಟು ತರ್ಕಬದ್ಧವಾಗಿ ವಾದ ಮಂಡಿಸಿದರು. ಘಟನೆಯನ್ನು ಎಳೆ-ಎಳೆಯಾಗಿ ವಿವರಿಸಿದರು.
ಪ್ರತಿಭಟನಾಕಾರರದ್ದೇ ತಪ್ಪು ಎಂದು ಬಿಂಬಿಸಲು ಪೊಲೀಸರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ವಿಡಿಯೋ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ವಿಡಿಯೋದಲ್ಲಿ ಸಾಕಷ್ಟು ತಪ್ಪು ಮಾಹಿತಿಗಳಿತ್ತು, ಎಂದು ಉದಾಹರಣೆಗಳ ಮೂಲಕ ವಿವರಿಸಿದರು.

ಪೊಲೀಸರು ಲಾಠಿ ಬೀಸುವವರೆಗೂ ಕಲ್ಲು ತೂರಾಟ ಆಗಿರಲಿಲ್ಲ
ಪೊಲೀಸರು ಲಾಠಿ ಬೀಸುವವರೆಗೂ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿರಲಿಲ್ಲ, ಲಾಠಿ ಬೀಸಿ, ರಸ್ತೆ ಬದಿ ಅಂಗಡಿಗಳವರ ಮೇಲೆ ದೌರ್ಜನ್ಯ ನಡೆಸಿ ಒಂದು ರೀತಿಯಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದಾರೆ. ನಂತರ ಪೊಲೀಸರೇ ಗೋಲಿಬಾರ್ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪ ಮಾಡಿದರು.

ದಾಖಲೆಗಳನ್ನು ನೀಡಿದ ಕುಮಾರಸ್ವಾಮಿ
ತಮ್ಮ ಹೇಳಿಕೆಗೆ ಪೂರಕವಾಗಿ ವಿಧಾನಸಭೆಯಲ್ಲಿ ದಾಖಲೆಗಳನ್ನೂ ನೀಡಿದ ಕುಮಾರಸ್ವಾಮಿ, ಪೊಲೀಸರು ಘಟನೆ ಸಂದರ್ಭ ನೀಡಿದ್ದ ಹೇಳಿಕೆಗಳು ಸುಳ್ಳೆಂದರು. ಪೊಲೀಸರಿಗೆ ಗಾಯ ಆಗಿದ್ದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬಂದೂಕು ಕಿತ್ತುಕೊಳ್ಳಲು ಯತ್ನಿಸಿದರು ಎಂಬುದೆಲ್ಲಾ ಪೊಲೀಸರು ಹೇಳಿದ ಸುಳ್ಳು ಎಂದು ಕುಮಾರಸ್ವಾಮಿ ಹೇಳಿದರು.

ಗೋಲಿಬಾರ್ ಸತ್ತವರ ಲೆಕ್ಕಾ ಮಾತ್ರ ಕೊಟ್ಟರು, ಗಾಯಗೊಂಡವರು?
ಗೋಲಿಬಾರ್ ನಲ್ಲಿ ಇಬ್ಬರು ಸತ್ತರು ಎಂಬುದನ್ನು ಮಾತ್ರವೇ ಪೊಲೀಸರು ಬಹಿರಂಗಗೊಳಿಸಿದರು. ಆದರೆ ಹತ್ತು ಮಂದಿ ಗೋಲಿಬಾರ್ ನಿಂದ ಗಾಯಗೊಂಡಿದ್ದರು. ಆದರೆ ಒಬ್ಬ ಸರ್ಕಾರಿ ಅಧಿಕಾರಿ ಸಹ ಅವರನ್ನು ಭೇಟಿ ಮಾಡಿಲ್ಲ, ಅವರ ಕಷ್ಟಕ್ಕೆ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಪೊಲೀಸ್ ಆಯುಕ್ತರ ಗೊಂದಲಮಯ ಹೇಳಿಕೆ
ಪೊಲೀಸ್ ಆಯುಕ್ತರು ನೀಡಿದ್ದ ಗೊಂದಲಮಯ ಹೇಳಿಕೆಗಳನ್ನು ಪ್ರಸ್ತಾಪ ಮಾಡಿದ ಕುಮಾರಸ್ವಾಮಿ, 'ಮೊದಲಿಗೆ ಬಂದರು ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿದರು ಎಂದು ಪೊಲೀಸ್ ಆಯುಕ್ತರು ಹೇಳಿಕೆ ನೀಡಿದರು ನಂತರ ಅಂಗಡಿ ಒಂದರಿಂದ ಏರ್ಗನ್ ದೋಚುವ ಯತ್ನ ಮಾಡಿದರು ಎಂದರು' ಎಂದು ಹೇಳಿದರು.

'ಗೋಲಿಬಾರ್ ನಲ್ಲಿ ಮೃತಪಟ್ಟ ವ್ಯಕ್ತಿಗಳಿಗೆ ಪರಿಹಾರ ಕಿತ್ತುಕೊಂಡಿರಿ'
ಗೋಲಿಬಾರ್ ನಲ್ಲಿ ಮೃತಪಟ್ಟ ವ್ಯಕ್ತಿಗಳಿಗೆ ನೀಡಲಾಗಿದ್ದ ಪರಿಹಾರದ ಹಣವನ್ನು ಹಿಂಪಡೆದ ಸಿಎಂ ಕ್ರಮವನ್ನು ಖಂಡಿಸಿದ ಕುಮಾರಸ್ವಾಮಿ, 'ಸಂಘಟನೆಗಳು ಒತ್ತಾಯಿಸಿದ್ದರಿಂದ ಪರಿಹಾರ ಹಣ ಹಿಂಪಡೆದುದಾಗಿ ಹೇಳಿದಿರಿ, ಸಿಎಂ ಮೇಲೆ ಒತ್ತಡ ಹೇರಿದ ಸಂಘಟನೆಗಳು ಯಾವುವು ಎಂದು ಬಹಿರಂಗಪಡಿಸಿ' ಎಂದು ಹೇಳಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications