ಅದೃಷ್ಟದ ಐಶಾರಾಮಿ ರೂಮ್ ಖಾಲಿ ಮಾಡಿದ ಕುಮಾರಸ್ವಾಮಿ
Recommended Video
ಬೆಂಗಳೂರು, ಆಗಸ್ಟ್ 16: ಕುಮಾರಸ್ವಾಮಿ ಅವರ ಅದೃಷ್ಟದ ತಾಜ್ ವೆಸ್ಟ್ ಎಂಡ್ಹೊಟೆಲ್ನ ಐಶಾರಾಮಿ ರೂಂ ಅನ್ನು ಅವರು ಖಾಲಿ ಮಾಡಿದ್ದಾರೆ.
ಸಿಎಂ ಆಗುವುದಕ್ಕೆ ಮುಂಚಿನಿಂದಲೂ ತಾಜ್ ವೆಸ್ಟ್ ಎಂಡ್ನ ರೂಂ ಒಂದನ್ನು ಬಾಡಿಗೆಗೆ ಪಡೆದಿದ್ದ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ನಿವಾಸವನ್ನು ಬಿಟ್ಟು ತಾಜ್ ವೆಸ್ಟ್ ಎಂಡ್ನ ಆ ಹೊಟೆಲ್ನಲ್ಲಿಯೇ ವಾಸ್ತವ್ಯ ಹೂಡಿದ್ದರು. ಅದು ತಮ್ಮ ಅದೃಷ್ಟದ ರೂಂ ಎಂಬುದು ಅವರ ನಂಬಿಕೆ ಆಗಿತ್ತು. ಆದರೆ ಈಗ ಅದನ್ನು ಖಾಲಿ ಮಾಡಿದ್ದಾರೆ.
ತಾಜ್ ವೆಸ್ಟ್ ಎಂಡ್ ಹೊಟೆಲ್ ನಲ್ಲಿ ಕುಮಾರಸ್ವಾಮಿ ಅವರು ವಾಸ್ತವ್ಯ ಹೂಡಿರುವುದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಐಶಾರಾಮಿ ರೂಂ ನಲ್ಲಿ ಉಳಿದುಕೊಂಡು ಆಡಳಿತ ನಡೆಸುವ ಕುಮಾರಸ್ವಾಮಿ ವೈಖರಿಯನ್ನು ಟೀಕಿಸಿತ್ತು ಬಿಜೆಪಿ. ಆದರೆ ಇದಾವುದಕ್ಕೂ ತಲೆಕೆಡೆಸಿಕೊಳ್ಳದೆ ಕುಮಾರಸ್ವಾಮಿ ಅವರು ರೂಂ ನಲ್ಲಿಯೇ ವಾಸ್ತವ್ಯ ಮುಂದುವರೆಸಿದ್ದರು.

ಈ ಬಗ್ಗೆ ಸದನದಲ್ಲಿಯೇ ಒಮ್ಮೆ ಸ್ಪಷ್ಟನೆ ಕೊಟ್ಟಿದ್ದ ಕುಮಾರಸ್ವಾಮಿ, 'ನಾನು 2018ರ ಚುನಾವಣಾ ಫಲಿತಾಂಶ ಅದೇ ರೂಂ ನಲ್ಲಿ ಕೂತು ನೋಡಿದ್ದೆ. ಅಲ್ಲಿ ಕೂತಿದ್ದಾಗಲೇ ಗುಲಾಂ ನಬಿ ಆಜಾದ್ ಅವರ ಕರೆ ಬಂದು ಸಿಎಂ ಮಾಡುವ ಆಫರ್ ಬಂದಿತ್ತು. ಹಾಗಾಗಿ ಆ ರೂಂ ನನಗೆ ಲಕ್ಕಿ ಎಂಬ ಕಾರಣಕ್ಕೆ ಆ ರೂಂ ಅನ್ನು ಇಟ್ಟುಕೊಂಡಿದ್ದೇನೆ, ಅಲ್ಲಿಗೆ ಯಾವ ಅಧಿಕಾರಿಗಳನ್ನೂ ಕರೆಸಿಕೊಂಡಿಲ್ಲ' ಎಂದು ಹೇಳಿದ್ದರು.
ಒಂದೂವರೆ ವರ್ಷಕ್ಕೂ ಆ ರೂಂ ನಲ್ಲಿ ವಾಸ್ತವ್ಯ ಹೂಡಿದ್ದ ಕುಮಾರಸ್ವಾಮಿ ಇದೀಗ ರೂಂ ಅನ್ನು ತೆರವು ಮಾಡಿದ್ದಾರೆ. ಅಧಿಕಾರ ಕಳೆದುಕೊಂಡ 22 ದಿನಗಳ ಬಳಿಕ ಅವರು ರೂಂ ಖಾಲಿ ಮಾಡಿದ್ದಾರೆ. ಕೆಲವು ದಿನಗಳಿಂದಲೂ ಅವರು ಜೆಪಿ ನಗರದ ತಮ್ಮ ನಿವಾಸದಿಂದಲೇ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications