ಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ಕುಮಾರಸ್ವಾಮಿ ಕೊನೆಯ ಎಚ್ಚರಿಕೆ
ಬೆಂಗಳೂರು, ಜೂನ್ 23: ದೇಶಾದ್ಯಂತ ಕೊರೊನಾ ವೈರಸ್ ಭಿತಿ ಹೆಚ್ಚಿರುವ ಕಾರಣ ತೆಲಂಗಾಣ, ತಮಿಳುನಾಡು ಹಾಗೂ ಆಂಧ್ರ ಪ್ರದೇಶ ರಾಜ್ಯಗಳು ಎಸ್ಎಸ್ಎಲ್ ಸಿ ಪರೀಕ್ಷೆ ರದ್ದುಗೊಳಿಸಿದೆ. ನೆರೆ ರಾಜ್ಯಗಳಲ್ಲಿ ಪರೀಕ್ಷೆ ರದ್ದು ಮಾಡಿದ ಕರ್ನಾಟಕ ಸರ್ಕಾರದ ಮೇಲೆ ಪರೀಕ್ಷೆ ರದ್ದುಗೊಳಿಸುವಂತೆ ಒತ್ತಡ ಹೆಚ್ಚಾಗಿದೆ.
ಆದರೆ, ಯಾವ ಒತ್ತಡ ಹಾಗೂ ಅಭಿಪ್ರಾಯ ಮಣಿಯದ ರಾಜ್ಯ ಸರ್ಕಾರ ನಿಗದಿ ಮಾಡಿರುವ ದಿನಾಂಕದಂದೇ 10ನೇ ತರಗತಿ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಶಿಕ್ಷಣ ಇಲಾಖೆ ಪ್ರಕಟ ಮಾಡಿರುವಂತೆ ಜೂನ್ 25 ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದೆ.
ಪರೀಕ್ಷೆಗೆ ಇನ್ನೊಂದು ದಿನ ಬಾಕಿಯಿರುವಾಗಲೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳು, ಶಿಕ್ಷಕರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಕೂಡಲೇ ಪರೀಕ್ಷೆ ಮುಂದೂಡಿ ಎಂದು ಒತ್ತಾಯಿಸಿದ್ದಾರೆ. ಮುಂದೆ ಓದಿ...
|
10ನೇ ತರಗತಿ ಪರೀಕ್ಷೆ ಮುಂದೂಡಲಿ
ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ.

ಜೀವದೊಂದಿಗೆ ಚೆಲ್ಲಾಟ
ಕೊರೊನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ SSLC ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ.

ತೆಲಂಗಾಣದಂತೆ ನಿರ್ಧಾರ ತೆಗೆದುಕೊಳ್ಳಲಿ
ಕೊರೊನಾ ಸೋಂಕು ಸಮುದಾಯ ಪ್ರಸರಣ ಭೀತಿಯ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಲ್ಲಿ SSLC ಪರೀಕ್ಷೆಯನ್ನು ರದ್ದುಪಡಿಸಿ ಉತ್ತೀರ್ಣ ಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಪರೀಕ್ಷೆಗಳನ್ನು ನಡೆಸಲೇ ಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ.

ಇದಕ್ಕೆ ಯಾರು ಹೊಣೆ?
ಏನಾದರೂ ಅವಗಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು.
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications