Get Updates
Get notified of breaking news, exclusive insights, and must-see stories!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಸ್ವಾಗತಿಸಿದ ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು, ಆಗಸ್ಟ್ 05: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ.

Recommended Video

      ಅಯೋಧ್ಯೆಯಲ್ಲಿ ಚೀನಾ ಹೆಸರು ಹೇಳಿದ ಮೋದಿ | Oneindia Kannada

      ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ.

      HD Kumaraswamy Welcomes Ram Mandir Bhoomi Pujan

      ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ‌. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ.
      ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು. ಜೈ ಶ್ರೀರಾಮ

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+