ಕೆರೆಗಳ ಡಿನೋಟಿಫೀಕೇಶನ್ ವಿರುದ್ಧ ರಾಜ್ಯಪಾಲರಿಗೆ ಎಚ್.ಡಿ.ಕೆ ಪತ್ರ

ಬೆಂಗಳೂರು, ಆಗಸ್ಟ್ 1: ಬತ್ತಿಹೋದ ಕೆರೆಗಳನ್ನು ಡಿನೋಟಿಫೈ ಮಾಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಸೋಮವಾರ ರಾಜ್ಯಪಾಲ ವಜೂಭಾಯಿ ವಾಲಾರಿಗೆ ಬರೆದ ಪತ್ರದಲ್ಲಿ 1500 ಕೆರೆಗಳನ್ನು ಡಿನೋಟಿಫೈ ಮಾಡುವ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಖಂಡಿಸಿದ್ದಾರೆ.

 HD Kumaraswamy wrote a letter to governor against denotification of lakes

ಮಾತ್ರವಲ್ಲ ತಮ್ಮ ಕಾಲದಲ್ಲಿ ಹಾಗೂ ತಮ್ಮ ತಂದೆ ದೇವೇಗೌಡರ ಕಾಲದಲ್ಲಿ ಕೆರೆಗಳನ್ನು ಉಳಿಸಲು ತೆಗೆದುಕೊಂಡ ತೀರ್ಮಾನಗಳನ್ನು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಈ ವಿಚಾರದಲ್ಲಿ ನೀವು ಮಧ್ಯ ಪ್ರವೇಶ ಮಾಡಬೇಕು ಮತ್ತು ಸಮಾಜ ಮತ್ತು ಪರಿಸರ ವಿರೋಧಿ ಕೆರೆಗಳ ಡಿನೋಟಿಫೈ ವಿಚಾರದಲ್ಲಿ ಮುಂದುವರಿಯದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕುಮಾರಸ್ವಾಮಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

 HD Kumaraswamy wrote a letter to governor against denotification of lakes

ಈ ಹಿಂದೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ಕೆರೆಗಳ ಡಿನೋಟಿಫಿಕೇಶನ್ ವಿರೋಧಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+