HD Revanna: ಹೆಚ್ಡಿ ರೇವಣ್ಣ ಬಿಡುಗಡೆ ವೇಳೆ ಗಲಾಟೆ ಲಾಠಿಪ್ರಹಾರ!
ಬೆಂಗಳೂರು ಮೇ 14: ಅಪಹಾರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಮಾಜಿ ಸಚಿವ ಮಾಜಿ ಶಾಸಕ ಹೆಚ್ಡಿ ರೇವಣ್ಣ ಅವರನ್ನು ಇಂದು ಬಿಡುಗಡೆ ಮಾಡಲಾಯಿತು. ಇಂದು ಅವರ ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೆ ಅವರನ್ನು ಬಿಡುಗಡೆಗೊಳಿಸಲಾಯಿತು.
ಪರಪ್ಪನ ಅಗ್ರಹಾರ ಜೈಲಿನಿಂದ ಹೆಚ್ಡಿ ರೇವಣ್ಣ ಬಿಡುಗಡೆಯಾದ ವೇಳೆ ತಳ್ಳಾಟ ನೂಕಾಟ ನಡೆದಿದೆ. ರೇವಣ್ಣ ಅವರ ಕಾರಿನ ಮೇಲೆ ಕಾರ್ಯಕರ್ತರು ಮುಗಿ ಬಿದ್ದ ಘಟನೆ ನಡೆದಿದೆ. ಇದರಿಂದಾಗಿ ಪೊಲೀಸರು ಕಾರ್ಯಕರ್ತರನ್ನು ಚದುರಿಸಲು ಲಾಠಿ ಪ್ರಹಾರ ಮಾಡಿದ್ದಾರೆ.

ಜೈಲಿನಿಂದ ಹೊರಬರುತ್ತಿದ್ದಂತೆ ಹೆಚ್ಡಿ ರೇವಣ್ಣ ಅವರ ಪರ ಕಾರ್ಯಕರ್ತರು ಘೋಷಣೆಯನ್ನು ಕೂಗಿದರು. ಅವರ ಪರ ಘೋಷಣೆ ಕೂಗುತ್ತಾ ಅವರನ್ನು ನೋಡಲು ಮುಗಿಬಿದ್ದರು. ಈ ವೇಳೆ ಕಾರ್ಯಕರ್ತರು ಕಾರಿಗೆ ಅಡ್ಡಿ ಹಾಕಿದರು. ಕೂಡಲೆ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಘುಲಾಠಿ ಪ್ರಹಾರ ಮಾಡಿದರು.
ಇದರಿಂದಾಗಿ ಕಾರ್ಯಕರ್ತರು ಪೊಲೀಸರು ತಮ್ಮ ಮೇಲೆ ಸುಖಾ ಸುಮ್ಮನೆ ಲಾಠಿಪ್ರಹಾರ ಮಾಡಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ. ಹತ್ತು ದಿನಗಳ ಸೆರೆಮನೆ ವಾಸದ ಬಳಿಕ ಹೆಚ್ಡಿ ರೇವಣ್ಣ ಅವರು ಬೆಂಗಳೂರಿನ ತಮ್ಮ ನಿವಾಸಕ್ಕೆ ತೆರಳಿದರು. ಈ ವೇಳೆ ರೇವಣ್ಣ ಅವರನ್ನು ಕಂಡು ಕುಟುಂಬಸ್ಥರು ಭಾವುಕರಾದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications