ಜನರ ಅಭಿಪ್ರಾಯ ಆಧರಿಸಿಯೇ ಎಲಿವೇಟೆಡ್ ಕಾರಿಡಾರ್: ರೇವಣ್ಣ ಸ್ಪಷ್ಟನೆ
ಬೆಂಗಳೂರು, ಆಗಸ್ಟ್ 3: ಪ್ರಾಸ್ತಾವಿಕ ಎಲಿವೇಟೆಡ್ ಕಾರಿಡಾರ್ ಅನುಷ್ಠಾನಗೊಳಿಸುವ ಮೊದಲು ಸಾರ್ವಜನಿಕರಿಂದ ಅಹವಾಲು ಆಲಿಸಲು 45ದಿನಗಳ ಕಾಲಾವಕಾಶ ನೀಡಲಾಗುವುದು, ಯೋಜನೆ ಅನುಷ್ಠಾನದಲ್ಲಿ ಯಾವುದೇ ಅವಸರ ಇಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಹೇಳಿದರು.
ಬೆಂಗಳೂರಿನಲ್ಲಿ ಈ ಕುರಿತು ಸ್ಪಷ್ಟನೆ ನೀಡಿರುವ ಅವರು ಎಲೆಇವೇಟೆಡ್ ಕಾರಿಡಾರ್ ಯೋಜನೆಯನ್ನು 2006ರಲ್ಲಿ ಎಚ್ಡಿ ಕುಮಾರಸ್ವಾಮಿಯವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗಲೇ ರೂಪಿಸಲಾಗಿತ್ತು.
ಕಾರಣಾಂತರಗಳಿಂದ ಆ ಯೋಜನೆ ಕಾರ್ಯಗತಗೊಂಡಿರಲಿಲ್ಲ. ಇದೀಗ ಸಾರ್ವಜನಿಕರು, ಪರಿಸರವಾದಿಗಳು ಹಾಗೂ ನಗರದ ನಾಗರಿಕರ ಸಲಹೆ ಮತ್ತು ಆಕ್ಷೇಪಗಳನ್ನು ಆಲಿಸಿ ಸೂಕ್ತ ಪರಿಹಾರ ಕಂಡುಕೊಂಡೇ ಈ ಯೋಜನೆ ಅನುಷ್ಠಾನಗೊಳಿಸಲಾಗುವುದು.

ಯೋಜನೆ ಅನುಷ್ಠಾನಕ್ಕೆ 284 ಮರಗಳನ್ನು ಕಡಿಯಲಾಗುತ್ತದೆ ಎಂಬ ವರದಿ ಬಂದಿದೆ, ಆದರೆಮರಗಳನ್ನು ಸಂಪೂರ್ಣವಾಗಿ ನೆಲಸಮಗೊಳಿಸದೆ ರೆಂಬೆಕೊಂಬೆಗಳನ್ನು ಮಾತ್ರ ಕತ್ತರಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲು ಪ್ರಯತ್ನಿಸಲಾಗುತ್ತದೆ.
ಪರಿಸರಕ್ಕೆ ಹಾಗೂ ನಗರದ ಹಸಿರೀಕರಣಕ್ಕೆ ಧಕ್ಕೆಯಾಗದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡೇ ಯೋಜನೆಯನ್ನು ರೂಪಿಸಲಾಗುತ್ತದೆ.6 ಕಾರಿಡಾರ್ ಯೋಜನೆಗಳಿಗೆ ಮರ ತೆರವುಗೊಳಿಸಬೇಕಾಗುತ್ತದೆ.
ಈ ಯೋಜನೆ ಅನುಷ್ಠಾನಗೊಂಡರೆ ಮಾತ್ರ ಬೆಂಗಳೂರು ನಗರದ ಸಂಚಾರ ಸಂದಣಿ ನಿಯಂತ್ರಣಕ್ಕೆ ತರಲು ಸಾಧ್ಯ, ಈ ಹಿನ್ನೆಲೆಯಲ್ಲಿ ಜನರ ದೃಷ್ಟಿಯಿಂದಲೇ ರೂಪಿಸಲಾಗಿದೆ ಎಂದು ಸಚಿವ ರೇವಣ್ಣ ಸಮರ್ಥಿಸಿಕೊಂಡರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications