ಮಾಜಿ ಪ್ರಧಾನಿ ದೇವೇಗೌಡರ ಬದುಕು-ಸಾಧನೆ ಅನಾವರಣ
Recommended Video

ಬೆಂಗಳೂರು, ನವೆಂಬರ್ 14: ದೇಶದ ಅತ್ಯುನ್ನತ ಹುದ್ದೆಯಾದ ಪ್ರಧಾನಮಂತ್ರಿ ಸ್ಥಾನಕ್ಕೇರಿದ ಏಕೈಕ ಕನ್ನಡಿಗ ಎಚ್ಡಿ ದೇವೇಗೌಡ ಅವರು ಇದೇ ಮೊದಲ ಬಾರಿಗೆ ತಮ್ಮ ಜೀವನ ಹಾಗೂ ಸಾಧನೆ ಕುರಿತಂತೆ ಸಾರ್ವಜನಿಕರೊಂದಿಗೆ ನೇರ ಚರ್ಚೆಯಲ್ಲಿ ಭಾಗವಹಿಸುವ ಅವಕಾಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲ್ಪಿಸಿದೆ.
ನವೆಂಬರ್ 17ರಂದು ಮಧ್ಯಾಹ್ನ 4 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರತಿ ತಿಂಗಳು ಆಯೋಜಿಸುವ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿದ ವ್ಯಕ್ತಿಗಳ'ಮನೆಯಂಗಳದಲ್ಲಿ ಮಾತುಕತೆ' ಸರಣಿಯ 204ನೇ ಕಾರ್ಯಕ್ರಮದಲ್ಲಿ ಈ ಬಾರಿ ದೇವೇಗೌಡರು ಕನ್ನಡಿಗರೊಂದಿಗೆ ಮುಖಾಮುಖಿಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ದೇವೇಗೌಡರು ತಮ್ಮ ಜೀವನ ಮತ್ತು ಸಾಧನೆ ಕುರಿತು ಖುದ್ದಾಗಿ ಮಾತನಾಡಲಿದ್ದು ಬಳಿಕ ಸಾರ್ವಜನಿಕರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.
ಮನೆಯಂಗದಲ್ಲಿ ಮಾತುಕತೆ ಸರಣಿಯಲ್ಲಿ ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳ ಮಾತುಕತೆ ಅತ್ಯಂತ ವಿರಳವಾಗಿದ್ದು, ಮಾಜಿ ಪ್ರಧಾನಿ ದೇವೇಗೌಡರ ಬಳಿ ಮಾತನಾಡುವ ಅವಕಾಶ ಈ ಬಾರಿ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಜಯಪ್ರಕಾಶ್ ನಾರಾಯಣ ಅವರಿಂದ ಪ್ರೇರಣೆ
ದೇಶದ ರಾಜಕೀಯ ರಂಗದಲ್ಲಿ ಸರಿಸುಮಾರು ಅರ್ಧ ಶತಮಾನಗಳ ಕಾಲ ಜನತಾ ಪರಿವಾರ ಹಾಗೂ ಜಾತ್ಯತೀತ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಜಯಪ್ರಕಾಶ್ ನಾರಾಯಣ ಚಳವಳಿಯಿಂದ ಪ್ರೇರಣೆಗೊಂಡು ದೆಹಲಿಯಲ್ಲಿ ದಕ್ಷಿಣ ಭಾರತವನ್ನು ಪ್ರತಿನಿಧಿಸುವಂತಹ ಎತ್ತರದ ವ್ಯಕ್ತಿತ್ವ ಬೆಳೆಸಿಕೊಂಡಿರುವ ದೇವೇಗೌಡರು ತಮ್ಮ ರಾಜಕೀಯ ಏಳು-ಬೀಳುಗಳ ಕುರಿತು ಸಂವಾದದಲ್ಲಿ ಮುಕ್ತವಾಗಿ ಮಾತನಾಡಲಿದ್ದಾರೆ.

ಜೈಲುವಾಸ, ತುರ್ತು ಪರಿಸ್ಥಿತಿ ಒಂದು ಚರ್ಚೆ
ತಾವು ನಂಬಿರುವ ಜಾತ್ಯತೀತ ಸಿದ್ಧಾಂತದ ನಡುವೆಯೂ ಪುತ್ರ ಎಚ್ಡಿ ಕುಮಾರಸ್ವಾಮಿ ಅವರು ರಾಷ್ಟ್ರವಾದಿ ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸಿ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅವಧಿಯಲ್ಲಿ ದೇವೇಗೌಡರು ಅನುಭವಿಸಿದ ಸಂದಿಗ್ಧ ಪರಿಸ್ಥಿತಿಯೂ ಸೇರಿದಂತೆ ತುರ್ತು ಪರಿಸ್ಥಿತಿಯಲ್ಲಿ ಅನುಭವಿಸಿದ ಜೈಲು ವಾಸ ಮತ್ತಿತರೆ ಅನೇಕ ಸ್ವಾರಸ್ಯಕರ ಸಂಗತಿಗಳು ಮಾತುಕತೆ ವೇಳೆ ಚರ್ಚೆಯಾಗುವ ನಿರೀಕ್ಷೆ ಇದೆ.

ದೇವೇಗೌಡರ ಹುಟ್ಟು
1933ರ ಮೇ 18ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ದೇವೇಗೌಡರು ಜನಿಸಿದರು.ಎಂಜಿನಿಯರಿಂಗ್ ಡಿಪ್ಲೊಮಾ ಪೂರೈಸಿದರೂ ಜನಸೇವೆಯತ್ತ ವಾಲಿದರು.

ದೇವೇಗೌಡ ಅವರ ರಾಜಕೀಯ ಸೇವೆ
1953ರಲ್ಲಿ ದೇವೇಗೌಡ ಅವರು ಭಾರತೀಯ ಕಾಂಗ್ರೆಸ್ ಪಕ್ಷಕ್ಕೆ ಸೇರುವುದರೊಂದಿಗೆ ರಾಜಕೀಯ ಜೀವನಕ್ಕೆ ಅಡಿಪಾಯ ಹಾಕಿದರು. 1962ರಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಸ್ವಾತಂತ್ರ್ಯ ಅಭ್ಯರ್ಥಿಯಾಗಿ ವಿಧಾನಸಭಾ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದರು. ಮುಂದಿನದ್ದು ಜಯದ ಚೈತ್ರ ಯಾತ್ರೆ,ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ಸತತ ಆರು ಬಾರಿ ಗೆಲವು ಸಾಧಿಸಿದ್ದರು. ಇದರ ಮಧ್ಯೆ ವಿಭಜಿತ ಕಾಂಗ್ರೆಸ್ ಪಕ್ಷಕ್ಕೆ ಸೇರಿ 1972ರಿಂದ ಐದು ವರ್ಷಗಳ ಕಾಲ ವಿಧಾನಸಭೆಯ ವಿಪಕ್ಷ ನಾಯಕರಾಗಿದ್ದರು.1996ರಲ್ಲಿ ಪ್ರಧಾನಿಯಾದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications