ವಿಶ್ವಾಸಮತ: ಕುಮಾರಸ್ವಾಮಿ, ಯಡಿಯೂರಪ್ಪ ದೇವಸ್ಥಾನ ಪ್ರದಕ್ಷಿಣೆ
ಬೆಂಗಳೂರು, ಜುಲೈ 22: ಇಂದು ಸದನದಲ್ಲಿ ವಿಶ್ವಾಸಮತ ಯಾಚನೆ ಆಗಲಿದ್ದು ಗೆಲುವು ತಮ್ಮದಾಗಲಿ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಮ್ಮ ನಿವಾಸದಲ್ಲಿ ಪೂಜೆ ಸಲ್ಲಿಸಿದ್ದಾರೆ.
ಬಳಿಕ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.
ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವುದಾಗಿ ಘೋಷಿಸಿದ ದಿನದಿಂದಲೂ ಒಂದು ಕಡೆ ಕುಮಾರಸ್ವಾಮಿ ಇನ್ನೊಂದು ಕಡೆ ಬಿಎಸ್ ಯಡಿಯೂರಪ್ಪ ಟೆಂಪಲ್ ರನ್ ಮಾಡುತ್ತಲೇ ಇದ್ದಾರೆ. ಇಂದು ಕೂಡ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಮ್ಮ ನಿವಾಸದಲ್ಲಿ ಪೂಜೆ ನೆರವೇರಿಸಿ ಬಸವನಗುಡಿಯಲ್ಲಿರುವ ವ್ಯಾಸರಾಜರ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರೆ, ಇನ್ನೊಂದೆಡೆ ಬಿಎಸ್ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಪೂಜೆ ಸಲ್ಲಿಸಿ ಬಳಿಕ ಯಲಹಂಕದ ಅಭಯ ಆಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಬಿಜೆಪಿ ಸರ್ಕಾರ ಅಂದುಕೊಂಡಂತೆ ಅಥವಾ ಸಮ್ಮಿಶ್ರ ಸರ್ಕಾರ ಅಂದುಕೊಂಡಂತೆಯೇ ನಡೆಯುತ್ತದೆ ಎನ್ನುವ ಹಾಗಿಲ್ಲ, ಶಾಸಕರನ್ನು ಹಿಡಿದಿಟ್ಟುಕೊಂಡಿದ್ದೇವೆ ಎನ್ನುವ ಖುಷಿಯಲ್ಲಿ ಬಿಜೆಪಿಯವರಿದ್ದರೆ, ಶಾಸಕರನ್ನು ಸದನಕ್ಕೆ ಕರೆದುಕೊಂಡು ಬಂದೇ ಬರುತ್ತೇವೆ ಎನ್ನುವ ವಿಶ್ವಾಸದಲ್ಲಿ ಮೈತ್ರಿ ಸರ್ಕಾರ ಕೂಡ ಇದೆ.
ಸಧ್ಯಕ್ಕೆ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಗೈರಾಗುವ ಸಾಧ್ಯತೆ ಇದೆ. ಇನ್ನು ಶಾಸಕ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದುಕೊಂಡಿದ್ದು, ಮತ್ತೆ ಮೈತ್ರಿ ಪರ ನಿಂತಿದ್ದಾರೆ. ಇನ್ನೇನು ಯಾರ್ಯಾರ ಉಪಾಯ ತಲೆಕೆಳಗಾಗುವುದು ಎಂದು ಕಾದು ನೋಡಬೇಕಿದೆ.
ಸ್ಪೀಕರ್ ರಮೇಶ್ ಕುಮಾರ್ ಏನೇ ಆಗಲಿ ಇಂದು ವಿಶ್ವಾಸಮತ ಯಾಚನೆಗೆ ಇಂದೇ ಅಂತ್ಯ ಹಾಡುವುದಾಗಿ ತಿಳಿಸಿದ್ದಾರೆ. ನಾನು ಎರಡೋ ಮೂರೋ ತಿಂಗಳು ಕಾಲಾವಕಾಶ ತೆಗೆದುಕೊಂಡಿಲ್ಲ, ಎರಡು ದಿನ ತೆಗೆದುಕೊಂಡಿದ್ದೇನೆ. ಅಡ್ವೊಕೇಟ್ ಜನರಲ್ ಬಳಿ ಚರ್ಚಿಸಿ ತೀರ್ಮಾನಕ್ಕೆ ಬಂದಿದ್ದೇನ ಎಂದು ತಿಳಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications