ವಿಶ್ವಾಸಮತ: ಕುಮಾರಸ್ವಾಮಿ, ಯಡಿಯೂರಪ್ಪ ದೇವಸ್ಥಾನ ಪ್ರದಕ್ಷಿಣೆ
ಬೆಂಗಳೂರು, ಜುಲೈ 22: ಇಂದು ಸದನದಲ್ಲಿ ವಿಶ್ವಾಸಮತ ಯಾಚನೆ ಆಗಲಿದ್ದು ಗೆಲುವು ತಮ್ಮದಾಗಲಿ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಮ್ಮ ನಿವಾಸದಲ್ಲಿ ಪೂಜೆ ಸಲ್ಲಿಸಿದ್ದಾರೆ.
ಬಳಿಕ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.
ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವುದಾಗಿ ಘೋಷಿಸಿದ ದಿನದಿಂದಲೂ ಒಂದು ಕಡೆ ಕುಮಾರಸ್ವಾಮಿ ಇನ್ನೊಂದು ಕಡೆ ಬಿಎಸ್ ಯಡಿಯೂರಪ್ಪ ಟೆಂಪಲ್ ರನ್ ಮಾಡುತ್ತಲೇ ಇದ್ದಾರೆ. ಇಂದು ಕೂಡ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಮ್ಮ ನಿವಾಸದಲ್ಲಿ ಪೂಜೆ ನೆರವೇರಿಸಿ ಬಸವನಗುಡಿಯಲ್ಲಿರುವ ವ್ಯಾಸರಾಜರ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರೆ, ಇನ್ನೊಂದೆಡೆ ಬಿಎಸ್ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಪೂಜೆ ಸಲ್ಲಿಸಿ ಬಳಿಕ ಯಲಹಂಕದ ಅಭಯ ಆಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಬಿಜೆಪಿ ಸರ್ಕಾರ ಅಂದುಕೊಂಡಂತೆ ಅಥವಾ ಸಮ್ಮಿಶ್ರ ಸರ್ಕಾರ ಅಂದುಕೊಂಡಂತೆಯೇ ನಡೆಯುತ್ತದೆ ಎನ್ನುವ ಹಾಗಿಲ್ಲ, ಶಾಸಕರನ್ನು ಹಿಡಿದಿಟ್ಟುಕೊಂಡಿದ್ದೇವೆ ಎನ್ನುವ ಖುಷಿಯಲ್ಲಿ ಬಿಜೆಪಿಯವರಿದ್ದರೆ, ಶಾಸಕರನ್ನು ಸದನಕ್ಕೆ ಕರೆದುಕೊಂಡು ಬಂದೇ ಬರುತ್ತೇವೆ ಎನ್ನುವ ವಿಶ್ವಾಸದಲ್ಲಿ ಮೈತ್ರಿ ಸರ್ಕಾರ ಕೂಡ ಇದೆ.
ಸಧ್ಯಕ್ಕೆ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಗೈರಾಗುವ ಸಾಧ್ಯತೆ ಇದೆ. ಇನ್ನು ಶಾಸಕ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದುಕೊಂಡಿದ್ದು, ಮತ್ತೆ ಮೈತ್ರಿ ಪರ ನಿಂತಿದ್ದಾರೆ. ಇನ್ನೇನು ಯಾರ್ಯಾರ ಉಪಾಯ ತಲೆಕೆಳಗಾಗುವುದು ಎಂದು ಕಾದು ನೋಡಬೇಕಿದೆ.
ಸ್ಪೀಕರ್ ರಮೇಶ್ ಕುಮಾರ್ ಏನೇ ಆಗಲಿ ಇಂದು ವಿಶ್ವಾಸಮತ ಯಾಚನೆಗೆ ಇಂದೇ ಅಂತ್ಯ ಹಾಡುವುದಾಗಿ ತಿಳಿಸಿದ್ದಾರೆ. ನಾನು ಎರಡೋ ಮೂರೋ ತಿಂಗಳು ಕಾಲಾವಕಾಶ ತೆಗೆದುಕೊಂಡಿಲ್ಲ, ಎರಡು ದಿನ ತೆಗೆದುಕೊಂಡಿದ್ದೇನೆ. ಅಡ್ವೊಕೇಟ್ ಜನರಲ್ ಬಳಿ ಚರ್ಚಿಸಿ ತೀರ್ಮಾನಕ್ಕೆ ಬಂದಿದ್ದೇನ ಎಂದು ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications