ರಾಜ್ಯದಲ್ಲಿ ನೆರೆ-ಬರ: ಸಿಎಂ ನೇತೃತ್ವದ ನಿಯೋಗದಿಂದ ಮೋದಿ ಭೇಟಿ
ಬೆಂಗಳೂರು, ಸೆಪ್ಟೆಂಬರ್ 8: ರಾಜ್ಯದಲ್ಲಿ ನೆರೆ-ಬರಕ್ಕೆ ಸಂಬಂಧಿಸಿದಂತೆ ಎಚ್ಡಿ ಕುಮಾರಸ್ವಾಮಿ ನಿಯೋಗ ಸೆಪ್ಟೆಂಬರ್ 10ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ.
ಸೆಪ್ಟೆಂಬರ್ 10ರಂದು ಸೋಮವಾರ ಬೆಳಗ್ಗೆ 11.15ಕ್ಕೆ ಪ್ರಧಾನಿ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ಬಳಿ ಅತಿವೃಷ್ಟಿ, ಅನಾವೃಷ್ಟಿ ಪರಿಹಾರ ಕೇಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ, ಸಿಎಂ ನಿಯೋಗದಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿ 20 ಮಂದಿ ತೆರಳಲಿದ್ದಾರೆ.
ದೆಹಲಿಯಲ್ಲಿ ಕುಮಾರಸ್ವಾಮಿ ಹಲವರ ಭೇಟಿ, ಹಲವು ಚರ್ಚೆ, ನೆರವಿಗೆ ಮನವಿ
ಈಗಾಗಲೇ ಕೊಡಗು ಪ್ರವಾಹಕ್ಕೆ ತುತ್ತಾಗಿ ನಲುಗಿ ಹೋಗಿದೆ, ಅಲ್ಲಿನ ಜನರು ಆಶ್ರಯ ಕಳೆದುಕೊಂಡು ಸಂತ್ರಸ್ತರ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಳ್ಳುತ್ತಿದ್ದಾರೆ.
ಕೊಡಗು ಪ್ರವಾಹ : ಶೀಘ್ರದಲ್ಲೇ ನಷ್ಟ ಅಂದಾಜಿಗೆ ಕೇಂದ್ರ ತಂಡ ಭೇಟಿ
ಮನೆ, ಆಸ್ತಿ ಪಾಸ್ತಿ ಎಲ್ಲವೂ ನೀರಿನಲ್ಲಿ ಕೊಚ್ಚಿ ಹೋಗಿದೆ, ಹೀಗಿರುವಾಗ ಕೇವಲ ರಾಜ್ಯ ಸರ್ಕಾರದಿಂದ ಎಲ್ಲವನ್ನೂ ಮಾಡುವುದಾದರೆ ನಿಜಕ್ಕೂ ಹೊರೆಯಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರದ ಸಹಾಯವನ್ನು ಕೇಳಲು ರಾಜ್ಯ ಸರ್ಕಾರ ಮುಂದಾಗಿದೆ.
ಕೊಡಗು ಮಹಾಮಳೆಯ ದುರಂತದ ನಂತರ ಕಾಲೂರಿನ ದುಸ್ಥಿತಿ ಇದು
ಇನ್ನು ಸಾಕಷ್ಟು ಜಿಲ್ಲೆಗಳಲ್ಲಿ ಸಮರ್ಪಕವಾಗಿ ಮಳೆಯಾಗದ ಕಾರಣ 13 ಜಿಲ್ಲೆಗಳಲ್ಲಿ ಬರ ಇದೆ, ಸಾಕಷ್ಟು ಬೆಳಗಳು ನೀರು ಕಾಣದೆ ಒಳಗಿವೆ ರೈತರು ಕಂಗಾಲಾಗಿದ್ದಾರೆ ಈ ಪರಿಸ್ಥಿತಿಯನ್ನು ಪ್ರಧಾನಿಯವರಿಗೆ ತಿಳಿಸಲು ಎಚ್ಡಿಕೆ ಹೊರಟಿದ್ದಾರೆ.