ವೈಯಕ್ತಿಕ ವಿಷಯ ನಿಮಗ್ಯಾಕ್ರಿ: ಕುಮಾರ್ ಬಂಗಾರಪ್ಪಗೆ ಎಚ್ಡಿಕೆ ತಿರುಗೇಟು
Recommended Video

ಬೆಂಗಳೂರು, ಅಕ್ಟೋಬರ್ 30: ನನ್ನ ಸ್ವಂತ ವಿಚಾರದ ಬಗ್ಗೆ ಪ್ರಶ್ನೆ ಮಾಡುವ ಯಾವ ಅಧಿಕಾರವೂ ನಿಮಗಿಲ್ಲ, ಚುನಾವಣೆ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿ ಕುರಿತು ಮಾತನಾಡುವುದು ಬಿಟ್ಟು ಕುಟುಂಬದ ವಿಚಾರ ಮಾತನಾಡಬೇಡಿ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕುಮಾರ ಬಂಗಾರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.
ಕುಮಾರಬಂಗಾರಪ್ಪ ಅವರ ಹೇಳಿಕೆ ಬಗ್ಗೆ ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಎಚ್ಡಿ ಕುಮಾರಸ್ವಾಮಿ, ನಾನು ಯಾವುದೇ ತಪ್ಪು ಮಾಡಿಲ್ಲ, ಎಲ್ಲವನ್ನೂ ಎದುರಿಸುವ ಶಕ್ತಿ ನನ್ನಲ್ಲಿದೆ ನನ್ನ ವಯಕ್ತಿಕ ವಿಚಾರ ಎಂದು ಗರಂ ಆಗಿಯೇ ನುಡಿದರು. ಕುಮಾರ್ ಬಂಗಾರಪ್ಪ ಅವರು ಕುಮಾರಸ್ವಾಮಿ ಅನಿತಾ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆತರಲಿ ಎಂದು ಸವಾಲು ಹಾಕಿದ್ದರು. ಇದಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.
ಬಂಗಾರಪ್ಪ ಅವರ ಮಗನಾಗಿ ಕುಮಾರ್ ಬಂಗಾರಪ್ಪ ಶಿವಮೊಗ್ಗ ಜಿಲ್ಲೆಯಲ್ಲಿ ಏನು ಕೆಲಸ ಮಾಡಿದ್ದಾರೆ, ರಾಜ್ಯಕ್ಕೆ ಕುಮಾರ್ ಬಂಗಾರಪ್ಪ ಅವರ ಕೊಡುಗೆ ಏನು, ಬಂಗಾರಪ್ಪ ಅವರ ಹೆಸರನ್ನು ದುರುಪಯೋಗ ಪಡಿಸಿಕೊಂಡು ಮತ ಯಾಚನೆ ಮಾಡುವ ಅಗತ್ಯ ನಮಗಿಲ್ಲ, ಮಧು ಬಂಗಾರಪ್ಪ ಸ್ಮಾರಕದ ವಿನ್ಯಾಸ ತಯಾರಿಸಿದ್ದಾರೆ ಅದರಂತೆಯೇ ಕೆಲಸ ಮಾಡುತ್ತೇವೆ ಎಂದರು.

ಚುನಾವಣೆ ಸಂದರ್ಭದಲ್ಲಿ ವಯಕ್ತಿಕ ವಿಚಾರ ಚರ್ಚೆ ಮಾಡುವುದಿಲ್ಲ, ರಾಜಕೀಯ ವಿಚಾರ ಇದ್ದರೆ ಚರ್ಚೆ ಮಾಡೋಣ ಬನ್ನಿ ಎಂದು ಸವಾಲು ಹಾಕಿದ ಅವರು, ಕುಮಾರ್ ಬಂಗಾರಪ್ಪ ಅವರ ಅಭಿರುಚಿಯ ಪ್ರದರ್ಶನ ಇದೀಗ ಆಗಿದೆ, ನಾನು ಈ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ, ರಾಜ್ಯದ ಅಭಿವೃದ್ಧಿ ವಿಚಾರ ಚರ್ಚೆಯಾಗಲಿದೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ












Click it and Unblock the Notifications