ನಿಗಮ-ಮಂಡಳಿ ನೇಮಕಕ್ಕೆ ತಡೆ, ಸಿಎಂ ಕುಮಾರಸ್ವಾಮಿ ಹೇಳಿದ್ದೇನು?
ಬೆಂಗಳೂರು, ಜನವರಿ 9: ಕೆಲವು ರಾಜಕೀಯ ತೊಂದರೆಯಿಂದಾಗಿ ನಿಗಮ-ಮಂಡಿ ಸ್ಥಾನವನ್ನು ತಡೆಹಿಡಿಯಲಾಗಿದೆ, ಯಾರಿಗೂ ಅಗೌರವ ತೋರಬೇಕೆಂದು ನಾನು ಈ ರೀತಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ-ಮಂಡಳಿ ನೇಮಕದ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ವಿವಿಧ ರೀತಿಯಲ್ಲಿ ಮಾತನಾಡುತ್ತಿದ್ದಾರೆ, ಊಹಾಪೋಹಗಳೇ ಹೆಚ್ಚಾಗಿದೆ. ಕೆಲವು ರಾಜಕೀಯ ತೊಂದರೆಯಿಂದಾಗಿ ನೇಮಕಾತಿ ನಿಧಾನವಾಗುತ್ತಿದೆ ಇದಕ್ಕೆ ಬೇರೆ ಬಣ್ಣ ಬಳಿಯುವುದು ಬೇಡ ಎಂದು ಹೇಳಿದರು.
ನಿಗಮ ಮಂಡಳಿ ನೇಮಕ: ಕಾಂಗ್ರೆಸ್ಗೆ ಭಾರಿ ಶಾಕ್ ನೀಡಿದ ಕುಮಾರಸ್ವಾಮಿ
ಮೈತ್ರಿ ಪಕ್ಷವಾದ ಕಾಂಗ್ರೆಸ್ ತನ್ನ ಸಚಿವ ಸ್ಥಾನವನ್ನು ಭರ್ತಿ ಮಾಡಿ, ನಿಗಮ ಮಂಡಳಿ ಸಂಸದೀಯ ಕಾರ್ಯದರ್ಶಿ ಸ್ಥಾನಕ್ಕೆ ಕೂಡ ನೇಮಕಾತಿ ಮಾಡಿದೆ, ಆದರೆ ಜೆಡಿಎಸ್ ಮಾತ್ರ ತನ್ನ ಸ್ಥಾನವನ್ನು ಹಾಗೆಯೇ ಉಳಿಸಿಕೊಂಡಿದೆ.
ಈ ಕಾರಣದಿಂದಾಗಿ ಜೆಡಿಎಸ್ ಪಾಲಿನ ನಿಗಮ ಮಂಡಳಿಗೆ ನೇಮಕಾತಿ ವಿಷಯದಲ್ಲಿ ಹಿರಿಯ ನಾಯಕರು ಕುಂಟು ನೆಪ ಹೇಳಿ ನೇಮಕಾತಿಯನ್ನು ಮುಂದೂಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿತ್ತು.
14 ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ
ಈ ವಿಷಯ ಕುರಿತು ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ ಯಾರಿಗೂ ಅಗೌರವ ತೋರುವುದು ನನ್ನ ಉದ್ದೇಶವಲ್ಲ, ಕೆಲ ಆಂತರಿಕ ಸಮಸ್ಯೆಗಳಿವೆ ಹೀಗಾಗಿ ನಿಗಮ-ಮಂಡಳಿ ನೇಮಕವನ್ನು ಮುಂದೂಡಿದ್ದೇನೆ ಎಂದರು.