ಬಿಜೆಪಿ ನಾಯಕರ ತಿರುಕನ ಕನಸು: ಸಚಿವ ವೆಂಕಟರಮಣಪ್ಪ ಗೇಲಿ
ಬೆಂಗಳೂರು, ಆಗಸ್ಟ್ 27: ಹಣೆಬರಹ ಗಟ್ಟಿ ಇದ್ದರೆ ಯಾರಾದರೂ ಸಿಎಂ ಆಗಬಹುದು. ಆದರೆ ಎಚ್.ಡಿ.ಕುಮಾರಸ್ವಾಮಿ ಐದು ವರ್ಷ ಸಿಎಂ ಆಗಿರುತ್ತಾರೆ. ಬಿಜೆಪಿ ನಾಯಕರು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಸಚಿವ ವೆಂಕಟರಮಣಪ್ಪ ಗೇಲಿ ಮಾಡಿದ್ದಾರೆ.
ಮೈತ್ರಿ ಸರಕಾರ ಸುಭ್ರವಾಗಿದೆ ಐದು ವರ್ಷ ಅಧಿಕಾರದಲ್ಲಿರಲಿದೆ. ಸರ್ಕಾರದಲ್ಲಿ ಗೊಂದಲ ಇಲ್ಲ. ಬಿಜೆಪಿಯವರದ್ದು ತಿರುಕನ ಕನಸು. ಅವರು ಸರ್ಕಾರ ಬಿದ್ದು ಹೋಗಲಿ ಅಂತ ಕಾಯುತ್ತಿದ್ದಾರೆ ಆದರೆ ಸರ್ಕಾರ ಐದೂ ವರ್ಷ ಇರಲಿದೆ. ಕುಮಾರಸ್ವಾಮಿಯವರೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದರು.
ಸಿದ್ದರಾಮಯ್ಯ ಅವರು ಈ ಬಾರಿ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿಲ್ಲ. ಮುಂದಿನ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದು. ಸಿದ್ದರಾಮಯ್ಯ ಹೇಳಿಕೆಯನ್ನು ತಿರುಚಲಾಗಿದೆ.ಹಣೆಬರಹ ಚೆನಾಗಿದ್ದರೆ ಯಾರಾದ್ರೂ ಮುಖ್ಯಮಂತ್ರಿ ಆಗಬಹುದು ಎಂದು ಹೇಳಿದರು.

ಬಗಲಗುಂಟೆಯಲ್ಲಿ ಕಾರ್ಮಿಕರಿಗಾಗಿ ಅಪಾರ್ಟ್ ಮೆಂಟ್ ಮಾದರಿಯಲ್ಲಿ ಮನೆಗಳ ನಿರ್ಮಾಣ ಮಾಡಲಾಗುತ್ತದೆ, 5000 ಮನೆಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಕೂಲಿ ಕಾರ್ಮಿಕರ ಅನುಕೂಲಕ್ಕಾಗಿ ಈ ಮನೆಗಳ ನಿರ್ಮಿಸಲಾಗುತ್ತಿದೆ. ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಮೂಲಕ ಮನೆ ಕಟ್ಟಿಸಲು ಸರ್ಕಾರ ನಿರ್ಧಾರ ಮಾಡಲಾಗಿದೆ.
ಈಗಾಗಲೇ ಕಾರ್ಮಿಕರಿಗೆ ಟೈಲರಿಂಗ್, ಮೊಬೈಲ್ ದುರಸ್ತಿ, ಬಣ್ಣಬಳಿಯುವ ತರಬೇತಿ ನೀಡಿ, ಜೀವನೋಪಾಯಕ್ಕೆ ನೆರವು, ತರಬೇತಿ ಮುಗಿದ ಬಳಿಕ ಅವರಿಗೆ ಕಿಟ್ ಕೊಡಲಾಗುವುದು. ಸದ್ಯ ನೋಂದಾಣಿ ನವೀಕರಣ ಮಾಡಿರುವ ಸುಮಾರು 3-4ಲಕ್ಷ ಕಾರ್ಮಿಕರಿದ್ದಾರೆ.
ಮೊದಲು ಕಾರ್ಮಿಕರು ಒಂದು ವರ್ಷಕ್ಕೊಮ್ಮೆ ನೋಂದಾಣಿ ಮಾಡಬೇಕಾಗಿತ್ತು ಈಗ ಅದನ್ನು ಮೂರು ವರ್ಷಕ್ಕೊಮ್ಮೆ ನೋಂದಣಿ ನವೀಕರಣ ಮಾಡಲು ನಿರ್ಧಾರ ಕಾರ್ಮಿಕರು ವರ್ಷಂಪ್ರತಿ ನೋಂದಣಿ ನವೀಕರಣಕ್ಕೆ ಅಧಿಕಾರಿಗಳ ಬಳಿ ಹೋಗುವುದನ್ನ ತಪ್ಪಿಸಲು ಚಿಂತನೆ ಮಾಡಲಾಗಿದೆ ಎಂದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications