ಇಂದು ಮೆಟ್ರೋ 2ನೇ ಹಂತದ ವೆಲ್ಲಾರ ಜಂಕ್ಷನ್ ಸುರಂಗಕ್ಕೆ ಚಾಲನೆ
ಬೆಂಗಳೂರು, ಮಾರ್ಚ್ 5: ನಮ್ಮ ಮೆಟ್ರೋ 2ನೇ ಹಂತದ ಸುರಂಗ ಮಾರ್ಗಕ್ಕೆ ಇಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.
ಮೆಟ್ರೋ ರೈಲು ಇನ್ನುಮುಂದೆ ಪ್ರತಿ 8 ನಿಮಿಷಕ್ಕೊಂದು ಸಂಚರಿಸಲಿದೆ
ವೆಲ್ಲಾರ ಜಂಕ್ಷನ್-ಟ್ಯಾನರಿ ರಸ್ತೆವರೆಗಿನ 5.63 ಕಿ.ಮೀ ಸುರಂಗ ಮಾರ್ಗದ ಮೊದಲ ಹಂತದ ಕಾಮಗಾರಿಗೆ ಇಂದು ಚಾಲನೆ ದೊರೆಯಲಿದೆ.
ಆರು ಬೋಗಿ ಮೆಟ್ರೋ ಸೇವಾವಧಿ ಒಂದು ಗಂಟೆ ವಿಸ್ತರಣೆ
ಆರ್ಟಿ ನಗರದ ಮೋದಿ ಗಾರ್ಡನ್ ನಲ್ಲಿ ಸಂಜೆ 5.30ಕ್ಕೆ ವೆಲ್ಲಾರ ಜಕ್ಷನ್-ಎಂಜಿ ರಸ್ತೆ ಮೆಟ್ರೋ ಸುರಂಗ ಮಾರ್ಗ ಕಾಮಗಾರಿಗೆ ಹಸಿರು ನಿಶಾನೆ ದೊರೆಯಲಿದೆ.
ವೆಲ್ಲಾರ ಜಂಕ್ಷನ್-ಟ್ಯಾನರಿ ರಸ್ತೆವರೆಗಿನ ಸುರಂಗ ಮಾರ್ಗ ನಿರ್ಮಾಣ ಗುತ್ತಿಗೆಯನ್ನು ಎಲ್ ಆಂಡ್ ಟಿ ಕಂಪನಿ ಪಡೆದಿದೆ. ಬ್ರಿಗೇಡ್ ರಸ್ತೆಯ ವೆಲ್ಲಾರ ಜಂಕ್ಷನ್ನಿಂದ ಎಂಜಿ ರಸ್ತೆ, ಶಿವಾಜಿನಗರ, ಕಂಟೋನ್ಮೆಂಟ್, ಪಾಟರಿ ಟೌನ್ ಮೂಲಕ ಟ್ಯಾನರಿ ರಸ್ತೆವರೆಗೆ ಸುರಂಗ ಮಾರ್ಗ ನಿರ್ಮಾಣವಾಗಲಿದೆ.
ನಾಗವಾರ-ಕೆಂಪೇಗೌಡ ವಿಮಾನ ನಿಲ್ದಾಣ ನಮ್ಮ ಮೆಟ್ರೋ ಮಾರ್ಗ ಬದಲು
ಅಂದಾಜು 11014 ಕೋಟಿ ರ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಗೊಟ್ಟಿಗೆರೆ-ನಾಗವಾರ ಮೆಟ್ರೋ ಮಾರ್ಗದಲ್ಲಿ ಡೇರಿ ವೃತ್ತದಿಂದ ನಾಗವಾರದವರೆಗೆ ಅಂದಾಜು 13 ಕಿ.ಮೀ ಸುರಂಗ ಮಾರ್ಗ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿರುವ ಎಲ್ ಆಂಡ್ ಟಿ ಸುರಂಗ ಮಾರ್ಗದ 2 ಪ್ಯಾಕೇಜ್ ಪಡೆದಿದೆ.